ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ಗಳ ಸಾವು, ಅವಶೇಷ ಪತ್ತೆ
ಪೈಲಟ್ಗಳಾದ ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ಎ ನಾಪತ್ತೆಯಾಗಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಗುವಾಹಟಿ, ಮಾರ್ಚ್ 16: ಭಾರತೀಯ ಸೇನೆಯ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯ ಮಂಡಲ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್ನ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಇಬ್ಬರು ಪೈಲಟ್ಗಳು ನಾಪತ್ತೆಯಾಗಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಪೈಲಟ್ಗಳಾದ ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ಎ ನಾಪತ್ತೆಯಾಗಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಬೆಳಗ್ಗೆ 9:15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲರ್ ಸಂಪರ್ಕ ಕಳೆದುಕೊಂಡಿತು ಎಂದು ಸೇನೆ ತಿಳಿಸಿದೆ. ಅರುಣಾಚಲ ಪ್ರದೇಶದ ಸಂಗೆ ಗ್ರಾಮದಿಂದ ಗುರುವಾರ ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಮಿಸ್ಸಮರಿ ಕಡೆಗೆ ತೆರಳುತ್ತಿತ್ತು.

ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲರ್ ಸಂಪರ್ಕ ಕಳೆದುಕೊಂಡ ಕೂಡಲೇ ಭಾರತೀಯ ಸೇನೆಯ ಐದು ಶೋಧ ತಂಡಗಳಾದ ಸಶಸ್ತ್ರ ಸೀಮಾ ಬಾಲ್ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಮಂಡಲದ ಪೂರ್ವ ಗ್ರಾಮದ ಬಂಗ್ಲಾಜಾಪ್ ಬಳಿ ವಿಮಾನದ ಅವಶೇಷಗಳು ಪತ್ತೆಯಾಗಿವೆ ಎಂದು ಸೇನೆ ತಿಳಿಸಿದೆ.
ಘಟನೆ ಬಗ್ಗೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿದ್ದು, ಅಪಘಾತದ ಕಾರಣವನ್ನು ಪತ್ತೆ ಮಾಡಲು ಆದೇಶಿಸಲಾಗಿದೆ. ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಮಾರ್ಚ್ 16 ರಂದು ಬೆಳಗ್ಗೆ 09:15 ಕ್ಕೆ ಎಟಿಸಿಯೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ವರದಿಯಾಗಿತ್ತು. ಬಳಿಕ ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದೆ, ಶೋಧ ಕಾರ್ಯಗಳನ್ನು ಆರಂಭಿಸಲಾಗಿದೆ" ಎಂದು ಸೇನೆ ಮಾಹಿತಿ ನೀಡಿತ್ತು.

ದಿರಾಂಗ್ನಲ್ಲಿ ಅಪಘಾತಕ್ಕೀಡಾದ ಹೆಲಿಕಾಪ್ಟರ್ ಉರಿಯುತ್ತಿರುವುದನ್ನು ಕಂಡು ಗ್ರಾಮಸ್ಥರು ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವಿಶೇಷ ತನಿಖಾ ಕೋಶದ (ಎಸ್ಐಸಿ) ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್ಬೀರ್ ಸಿಂಗ್ ವಿವರಿಸಿದರು. "ದಿರಾಂಗ್ನಲ್ಲಿನ ಬಂಗ್ಜಲೆಪ್ನ ಗ್ರಾಮಸ್ಥರು ಮಧ್ಯಾಹ್ನ 12.30 ರ ಸುಮಾರಿಗೆ ಹೆಲಿಕಾಪ್ಟರ್ ಅನ್ನು ಪತ್ತೆ ಮಾಡಿದ್ದರು. ನಾವು ಅಲ್ಲಿಗೆ ತಲುಪಿದರೂ ಅದು ಇನ್ನೂ ಉರಿಯುತ್ತಿತ್ತು. ಈ ಪ್ರದೇಶವು ಯಾವುದೇ ಮೊಬೈಲ್ ಸಂಪರ್ಕವನ್ನು ಹೊಂದಿಲ್ಲ. ಹವಾಮಾನವು ಅತ್ಯಂತ ಮಂಜಿನಿಂದ ಕೂಡಿದೆ" ಎಂದು ಮಾಹಿತಿ ನೀಡಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications