ಜಮ್ಮು & ಕಾಶ್ಮೀರದಲ್ಲಿ ನೌಶೇರಾದಲ್ಲಿ ಬಾಂಬ್ ಸ್ಫೋಟ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ ಅಕ್ಟೋಬರ್ 30: ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗಣಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಎಲ್‌ಒಸಿ ಬಳಿ ಗಸ್ತು ತಿರುಗುತ್ತಿದ್ದ ಸೇನಾ ಲ್ಯಾಂಡ್‌ಮೈನ್‌ಗೆ ಕಾಲಿಟ್ಟ ನಂತರ ಸ್ಪೋಟ ಸಂಭವಿಸಿದೆ. ಈ ವೇಳೆ ಅಧಿಕಾರಿ ಮತ್ತು ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಇವರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹುತಾತ್ಮರಾದವರನ್ನು ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯಿ ಮಂಜಿತ್ ವೀರ ಎಂದು ಹೇಳಲಾಗಿದೆ. ಇವರಿಬ್ಬರು ಎಲ್‌ಒಸಿ ಬಳಿ ಗಸ್ತು ತಿರುತ್ತಿದ್ದ ವೇಳೆ ಬಾಂಬ್ ಸ್ಪೋಟಗೊಂಡಿದೆ. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಇನ್ನಿತರ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

"ನೌಶೇರಾದಲ್ಲಿ ಉಗ್ರರನ್ನು ಹೊಡೆದುರುಳಿಸುವ ಉದ್ದೇಶದಿಂದ ಕಾರ್ಯಚರಣೆ ನಡೆಯುತ್ತಲೇ ಇದೆ. ನೌಶೇರಾ ಸೆಕ್ಟರ್‌ನಲ್ಲಿ ಪ್ರದೇಶದ ಪ್ರಾಬಲ್ಯ ಗಸ್ತು ನಡೆಸುತ್ತಿದ್ದಾಗ ಗಣಿ ಸ್ಫೋಟ ಸಂಭವಿಸಿದೆ. ಇದರಲ್ಲಿ ಇಬ್ಬರು ಭಾರತೀಯ ಸೇನೆಯ ಯೋಧರು ಗಂಭೀರ ಗಾಯಗೊಂಡರು. ತೀವ್ರವಾಗಿ ಗಾಯಗೊಂಡ ಇಬ್ಬರು ಯೋಧರು ಬಲಿಯಾದರು. ಗಾಯಗೊಂಡಿದ್ದ ಇನ್ನೊಬ್ಬ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಜಮ್ಮು ಪ್ರದೇಶದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

2 Soldiers Killed In J&K Landmine Blast Close To Line Of Control

"ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯಿ ಮಂಜಿತ್ ವೀರ ಸೈನಿಕ ವೃತ್ತಿಗೆ ಅತ್ಯಂತ ಬದ್ಧರಾಗಿದ್ದರು. ಸಕ್ರಿಯ ಕರ್ತವ್ಯದ ಸಾಲಿನಲ್ಲಿ ರಾಷ್ಟ್ರಕ್ಕಾಗಿ ಅತ್ಯುನ್ನತ ತ್ಯಾಗವನ್ನು ಮಾಡಿದ್ದಾರೆ. ಲೆಫ್ಟಿನೆಂಟ್ ರಿಷಿ ಕುಮಾರ್ ಬಿಹಾರದ ಬೇಗುಸರಾಯ್ ನಿವಾಸಿಯಾಗಿದ್ದಾರೆ. ಸಿಪಾಯಿ ಮಂಜಿತ್ ಸಿಂಗ್ ನಿವಾಸಿಯಾಗಿದ್ದಾರೆ. ಸಿರ್ವೆವಾಲಾ, ಭಟಿಂಡಾ, ಪಂಜಾಬ್‌ನ, ರಾಷ್ಟ್ರ ಮತ್ತು ಭಾರತೀಯ ಸೇನೆಯು ಅವರ ಅತ್ಯುನ್ನತ ತ್ಯಾಗಕ್ಕಾಗಿ ಕೆಚ್ಚೆದೆಯ ಹೃದಯಗಳಿಗೆ ಎಂದೆಂದಿಗೂ ಋಣಿಯಾಗಿರುತ್ತದೆ "ಎಂದು ವಕ್ತಾರರು ಹೇಳಿದರು. ಈಗಾಗಲೇ ಕುಟುಂಬಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಮರಣ ಪರೀಕ್ಷೆಯ ನಂತರ ಅವರ ಮೃತ ದೇಹಗಳನ್ನು ಸ್ವಗ್ರಾಮಕ್ಕೆ ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯಿ ಮಂಜಿತ್ ಅವರು ಧೈರ್ಯಶಾಲಿ ಮತ್ತು ಸೈನಿಕ ವೃತ್ತಿಗೆ ಅತ್ಯಂತ ಬದ್ಧರಾಗಿದ್ದರು ಮತ್ತು ಸಕ್ರಿಯ ಕರ್ತವ್ಯದ ಸಾಲಿನಲ್ಲಿ ರಾಷ್ಟ್ರಕ್ಕಾಗಿ ಅತ್ಯುನ್ನತ ತ್ಯಾಗ ಮಾಡಿದ್ದಾರೆ ಎಂದು ಸೇನೆ ಹೇಳಿದೆ.

ನೌಶೇರಾ ಸೆಕ್ಟರ್ ಜಮ್ಮುವಿನ ಪಿರ್ಪಾಂಜಲ್ ಪ್ರದೇಶದ ಭಾಗವಾಗಿರುವ ರಜೌರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ. ಅಲ್ಲಿ ಕಳೆದ ಮೂರು ವಾರಗಳಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿದೆ. ಪೂಂಚ್‌ನ ಅರಣ್ಯದಲ್ಲಿ ಅಡಗಿರುವ ಉಗ್ರರ ವಿರುದ್ಧ ಯಾವುದೇ ಯಶಸ್ಸು ಕಾಣದೆ ಇಬ್ಬರು ಅಧಿಕಾರಿಗಳು ಸೇರಿದಂತೆ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ. ಕಳೆದ 18 ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತಿ ಉದ್ದದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಇದಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಬಂಡಿಪೋರಾದ ಸುಂಬಲ್ ಇಲಾಖೆಯ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಭಾರೀ ಸ್ಪೋಟ ಸಂಭವಸಿ ಏಳು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಅಪಾರ ಹಾನಿಯುಂಟಾಗಿತ್ತು. ಈ ಘಟನೆಯಲ್ಲಿ ಗಾಯಗೊಂಡವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಗೂಢವಾಗಿ ಸ್ಓಟ ಬಗ್ಗೆ ಜಭಯದ ವಾತಾವಣೆ ನಿರ್ಮಾಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+