ಎರಡು ರೀತಿಯ 500 ರು. ನೋಟು ಬಿಡುಗಡೆ: ಕಾಂಗ್ರೆಸ್ ಆರೋಪ
ಅಪನಗದೀಕರಣದ ನಂತರ ಕೇಂದ್ರ ಸರ್ಕಾರವು ಎರಡು ರೀತಿಯ 500 ರು. ನೋಟುಗಳನ್ನು ಮುದ್ರಿಸಿದೆ ಎಂದು ಕಾಂಗ್ರೆಸ್ ಆರೋಪ. ರಾಜ್ಯಸಭೆಯ ಕಲಾಪದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್.
ನವದೆಹಲಿ, ಆಗಸ್ಟ್ 8: ಅಪನಗದೀಕರಣದ ನಂತರ, ದೇಶದಲ್ಲಿ ಎರಡು ಮಾದರಿಯ 500 ರು. ನೋಟುಗಳನ್ನು ಬಿಡುಗಡೆ ಮಾಡುವ ಮೂಲಕ ಕೇಂದ್ರ ಸರ್ಕಾರದ ಭಾರೀ ದೊಡ್ಡ ಹಗರಣವನ್ನು ಮಾಡಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದರು.
ಮಂಗಳವಾರ ನಡೆದ ರಾಜ್ಯಸಭೆಯ ಕಲಾಪದ ವೇಳೆ, ಈ ವಿಚಾರ ಪ್ರಸ್ತಾಪಿಸಿದ ಕಪಿಲ್ ಸಿಬಲ್, ''ಅಪನಗದೀಕರಣದ ವೇಳೆ, ಎರಡು ರೀತಿಯ ನೋಟುಗಳನ್ನು ಮುದ್ರಣ ಮಾಡಲಾಗಿದೆ. ಈ ಎರಡು ಬಗೆಯ ನೋಟುಗಳು ನೋಡಲು ಒಂದೇ ಥರ ಇದ್ದರೂ, ಅಳತೆಯಲ್ಲಿ ವ್ಯತ್ಯಾಸವಿದೆ. '' ಎಂದರು. ಇದು ಈ ಶತಮಾನದ ಅತಿ ದೊಡ್ಡ ಹಗರಣ ಎಂದು ಅವರು ಆರೋಪಿಸಿದರು.

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ನ ಹಿರಿಯ ನಾಯಕ, ಗುಲಾಂ ನಬಿ ಆಜಾದ್, ''ಇದರಲ್ಲಿ ಒಂದು ಬಗೆಯ ನೋಟುಗಳನ್ನು ಜನ ಬಳಕೆಗೆ ನೀಡಿದ್ದರೆ, ಮತ್ತೊಂದು ಬಗೆಯ ನೋಟುಗಳನ್ನು ಬಿಜೆಪಿ ಖಜಾನೆಗೆ ಸೇರಿಸಲಾಗಿದೆ. ಹೀಗಾಗಿಯೇ, ಬಿಜೆಪಿಗೆ ಅತಿ ಹೆಚ್ಚು ಡೊನೇಷನ್ ಬಂದಿರುವ ದಾಖಲೆಗಳಿವೆ'' ಎಂದು ಆರೋಪಿಸಿದರು.
ಆದರೆ, ಇದಕ್ಕೆ ಉತ್ತರಿಸಿದ ಅರುಣ್ ಜೇಟ್ಲಿ ಅವರು, ''ಇವೆಲ್ಲವೂ ಬೇಜವಾಬ್ದಾರಿ ಹೇಳಿಕೆಗಳು'' ಎಂದು ಟೀಕಿಸಿದರು. ಇದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ಏರ್ಪಟ್ಟಿತು. ಕಾಂಗ್ರೆಸ್ ನ ಸತತ ವಾಗ್ವಾದದ ನಡುವೆಯೂ ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿಹಾಕಿತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications