Sofiya Qureshi: ಸಿಂಧೂರ ಕಾರ್ಯಾಚರಣೆ: ಭಾರತೀಯ ಸೇನೆಯ ಇಬ್ಬರು ಮಹಿಳಾ ಅಧಿಕಾರಿಗಳಿಂದಲೇ ವಿವರಣೆ, ಯಾರಿವರು ?
Sofiya Qureshi: ಭಾರತೀಯ ಸೇನೆಯು ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದ ಮೇಲೆ ಈ ಕಾರ್ಯಾಚರಣೆಯನ್ನು ವಿವರವನ್ನು ಕರ್ನಲ್ ಸೋಫಿಯಾ ಖುರೇಷಿ ಅವರು ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಹಾಗೂ ವಿಶ್ವಕ್ಕೆ ಸ್ಪಷ್ಟವಾದ ಸಂದೇಶವನ್ನು ನೀಡಲಾಗಿದೆ. ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರ ವಿವರಣೆ ನಿಖರ ಹಾಗೂ ಸ್ಪಷ್ಟವಾಗಿತ್ತು. ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರು ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ.
ಭಾರತ ಹಾಗೂ ಪಾಕ್ ನಡುವೆ ಏನಾಗಿದೆ ಎಂದು ವಿಶ್ವಕ್ಕೆ ಮಾಹಿತಿ ನೀಡುವ ಸಂದರ್ಭದಲ್ಲಿಯೂ ಭಾರತ ಸರ್ಕಾರವು ಮಹತ್ವದ ಹೆಜ್ಜೆಯನ್ನೇ ಇರಿಸಿದೆ. ಭಾರತೀಯ ಸೇನೆಯು ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರ ಮೂಲಕ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತ ನಡೆಸಿರುವ ಕ್ಷಿಪಣಿ ದಾಳಿಯ ವಿವರವನ್ನು ನೀಡಿದೆ. ಭಾರತೀಯ ಸೇನೆಯು ಕರ್ನಲ್ ಸೋಫಿಯಾ ಖುರೇಷಿ ಹಾಗೂ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಪಾಕ್ ಉಗ್ರರ ತಾಣದ ಮೇಲೆ ನಡೆದಿರುವ ಕ್ಷಿಪಣಿ ದಾಳಿಯ ವಿವರವನ್ನು ನೀಡಿದ್ದಾರೆ.

ಸಿಂಧೂರ ತೆಗೆದವರಿಗೆ ಪ್ರತ್ಯುತ್ತರ!
ಭಾರತೀಯ ಸೇನೆಯು ಹಿಂದೂಸ್ತಾನದ ಮಹಿಳೆಯರ ಸಿಂಧೂರ ತೆಗೆದವರಿಗೆ ಸರಿಯಾದ ಪ್ರತ್ಯುತ್ತರವನ್ನು ಉಗ್ರರ ಮೇಲೆ ದಾಳಿ ಮಾಡುವ ಮೂಲಕ ಮಾತ್ರವಲ್ಲ. ಆ ದಾಳಿಯ ವಿವರಣೆ ನೀಡುವಾಗಲೂ ಮುಂದುವರಿಸಿದೆ. ಭಾರತೀಯ ಸೇನೆಯು ಮಹಿಳಾ ಅಧಿಕಾರಿಗಳ ಮೂಲಕವೇ ವಿವರಣೆ ಕೊಡಿಸಿದೆ. ಈ ಮೂಲಕ ಉಗ್ರರು ದಾಳಿ ಮಾಡಿದ ಮೇಲೆ ಹೋಗಿ ನಿಮ್ಮ ಮೋದಿಗೆ ಹೇಳಿ ಅರ್ಥಾತ್ ಭಾರತೀಯ ಸರ್ಕಾರಕ್ಕೆ ಹೇಳಿ ಎನ್ನುವುದಕ್ಕೆ ಭಾರತ ತಕ್ಕ ಪ್ರತ್ಯುತ್ತರವನ್ನೇ ನೀಡಿದೆ.
ಯಾರು ಕರ್ನಲ್ ಸೋಫಿಯಾ ಖುರೇಷಿ ?
ಭಾರತೀಯ ಸೇನೆಯಲ್ಲಿ ಅತ್ಯುನ್ನತ ಸ್ಥಾನದಲ್ಲಿ ಇರುವ ಅವರು, ಹಲವು ರಾಷ್ಟ್ರಗಳ ಮಿಲಿಟರಿ ತಾಲೀಮಿನ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. 18 ರಾಷ್ಟ್ರಗಳು ಭಾಗವಹಿಸಿದ್ದ ಸೇನೆಯ ತುಕಡಿಯನ್ನು ಅವರು (Army contingent) ನಡೆಸಿದ್ದರು. ಈ ಸೇನಾ ತುಕಡಿಯಲ್ಲಿ ಭಾರತ, ಜಪಾನ್, ಚೀನಾ, ರಷ್ಯಾ, ಅಮೆರಿಕ, ಕೊರಿಯಾ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ರಾಷ್ಟ್ರಗಳು ಸೇರಿದ್ದವು. ಇದರಲ್ಲಿ ಲೆಫ್ಟಿನೆಂಟ್ ಕರ್ನಲ್ ಖುರೇಷಿ ಅವರು ತುಕಡಿಯನ್ನು ಮುನ್ನಡೆಸಿದ ಏಕೈಕ ಮಹಿಳಾ ಅಧಿಕಾರಿಯಾಗಿದ್ದರು.
ಇನ್ನು ದೇಶದಲ್ಲಿ ನಡೆದ ಹಲವು ಶಾಂತಿಪಾಲನಾ ತರಬೇತಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಖುರೇಷಿ ಅವರು ಭಾಗವಹಿಸಿದ್ದರು. ಖುರೇಷಿ ಅವರು 2010ರಿಂದ ಪಿಕೆಒಗಳಲ್ಲಿ (ಶಾಂತಿಪಾಲನಾ ಕಾರ್ಯಾಚರಣೆಗಳು) ತೊಡಗಿಸಿಕೊಂಡಿದ್ದರು. ಲೆಫ್ಟಿನೆಂಟ್ ಕರ್ನಲ್ ಖುರೇಷಿ ಅವರು ಗುಜರಾತ್ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
* ಸೋಫಿಯಾ ಖುರೇಷಿ ಅವರ ಕುಟುಂಬದವರು ಅವರ ಅಜ್ಜ ಸಹ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
* ಆರು ವರ್ಷಗಳಿಗೂ ಹೆಚ್ಚಿನ ಅವಧಿಯಿಂದ ಅವರು ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
* 35ನೇ ವಯಸ್ಸಿನಲ್ಲಿಯೇ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿ 18 ರಾಷ್ಟ್ರಗಳ ಸೇನಾ ತುಕಡಿಯಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡಿಸಿದ್ದರು. 18 ಮಿಲಿಟರಿ ಸೇನೆಯಲ್ಲಿ ಸೇನಾ ತುಕಡಿಯನ್ನು ಮುನ್ನಡೆಸಿದ ಏಕೈಕ ಮಹಿಳಾ ಸೇನಾಧಿಕಾರಿ ಇವರಾಗಿದ್ದರು ಎನ್ನುವುದು ವಿಶೇಷ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications