ಕರ್ನೂಲ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ, 12 ತಾಸಿನಲ್ಲಿ 20 ಸಾವು
ಕರ್ನೂಲ್, ಜೂನ್ 23: ಹನ್ನೆರಡು ಗಂಟೆಯ ವಿದ್ಯುತ್ ಕಡಿತದ ವೇಳೆ ಎಂಟು ಮಕ್ಕಳು ಸೇರಿದಂತೆ ಇಪ್ಪತ್ತು ರೋಗಿಗಳು ಸಾವನ್ನಪ್ಪಿದ ಘಟನೆ ಕರ್ನೂಲ್ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಪ್ರತಿ ಹಂತದಲ್ಲಿನ ಬೇಜವಾಬ್ದಾರಿ ಇಪ್ಪತ್ತು ಪ್ರಾಣಗಳನ್ನು ಬಲಿ ತೆಗೆದುಕೊಂಡಿದೆ. ಎರಡು ದಿನದ ಅವಧಿಯಲ್ಲಿ ತಲಾ ಹತ್ತರಂತೆ ಇಪ್ಪತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ.
ಬುಧವಾರ ರಾತ್ರಿ ಏಳು ಗಂಟೆ ಹೊತ್ತಿದೆ ಈ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತವಾಗಿದ್ದು ಗುರುವಾರ ಬೆಳಗ್ಗೆವರೆಗೆ ಸರಿಹೋಗಿಲ್ಲ. ಇಂಥ ಸಂದಿಗ್ಡ ಸ್ಥಿತಿಯನ್ನು ರೋಗಿಗಳು ಅನುಭವಿಸುವಾಗ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಲೀ, ಸ್ಥಾನೀಕ ವೈದ್ಯಾಧಿಕಾರಿಯಾಗಲೀ ಇರಲಿಲ್ಲ. ಈ ವೇಳೆ ಎಂಟು ಮಕ್ಕಳು, ಇಬ್ಬರು ಮಹಿಳೆಯರೂ ಸೇರಿ ಇಪ್ಪತ್ತು ಮಂದಿ ಬಡವರ ಜೀವ ಬಲಿಯಾಗಿದೆ.

ಇದೀಗ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಪೊಲೀಸ್ ಔಟ್ ಪೋಸ್ಟ್ ನ ಸಿಬ್ಬಂದಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದರಿಂದ ಆದ ಅನಾಹುತವಿದು. ಹೈಟೆನ್ಷನ್ ವಿದ್ಯುತ್ ತಂತಿಗೆ ವೈಯರ್ ಸಿಕ್ಕಿಸಿ, ಸಂಪರ್ಕ ಪಡೆಯುವ ವೇಳೆ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತವಾಗಿದೆ.
ಆದರೆ, ಆಸ್ಪತ್ರೆ ಸಿಬ್ಬಂದಿ ಪ್ರಕಾರ, ಲೈನ್ ಮ್ಯಾನ್ ಗೆ ಈ ಬಗ್ಗೆ ಸುದ್ದಿ ಮುಟ್ಟಿಸಿದರೂ ಅದಕ್ಕೆ ಸ್ಪಂದಿಸಿಲ್ಲ. "ನಮ್ಮ ಎಲ್ಲ ಪ್ರಯತ್ನವನ್ನೂ ಮಾಡಿದೆವು.. ಗುರುವಾರ ಬೆಳಗ್ಗೆವರೆಗೆ ಯಾವ ಲೈನ್ ಮ್ಯಾನ್ ಸಿಗಲಿಲ್ಲ. ಆದರೆ ಕೆಲವರು ರಾತ್ರಿ ವೇಳೆ ವಿದ್ಯುತ್ ಕಂಬ ಏರಲು ನಿರಾಕರಿಸಿದರು" ಎಂದಿದ್ದಾರೆ ಆಸ್ಪತ್ರೆ ಸೂಪರಿಂಟೆಂಡೆಂಟ್ ಜೆ ವೀರಾಸ್ವಾಮಿ.
ಯಾವಾಗ ಜೀವ ಹಾನಿ ಸಂಭವಿಸಿತೋ ಆಗ ಒಬ್ಬರು ಮತ್ತೊಬ್ಬರನ್ನು ಜರಿಯುವುದು ಆರಂಭವಾಗಿದೆ. ಆಸ್ಪತ್ರೆಯವರು ಪೊಲೀಸ್ ಔಟ್ ಪೋಸ್ಟ್ ನವರನ್ನು ಜವಾಬ್ದಾರಿ ಮಾಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಮತ್ತೆ ಅಂಥ ಸ್ಥಿತಿ ಎದುರಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications