ಬಾಬಾ ರಾಮ್ ರಹೀಂ ಆಶ್ರಮದಲ್ಲಿ 200 ಅಸ್ಥಿ ಪಂಜರಗಳು ಪತ್ತೆ
ಬಾಬಾ ರಾಮ್ ರಹೀಂ ಆಶ್ರಮದಲ್ಲಿ 200 ಅಸ್ಥಿಪಂಜರ ಪತ್ತೆ. ಬಾಬಾ ರಹಸ್ಯ ಕೋಣೆಯ ಬಳಿಯಲ್ಲೇ ಈ ಅಸ್ಥಿಪಂಜರಗಳ ಪತ್ತೆ.
ಸಿರ್ಸಾ, ಸೆಪ್ಟೆಂಬರ್ 21: ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾದ ಸ್ವಯಂ ಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಸಿಂಗ್ ನ ಆಶ್ರಮದಲ್ಲಿ 200 ಅಸ್ತಿ ಪಂಜರಗಳು ಪತ್ತೆಯಾಗಿದ್ದು ಎಲ್ಲರನ್ನೂ ದಿಗ್ಭ್ರಾಂತರನ್ನಾಗಿಸಿದೆ.
ಬಾಬಾನ ರಹಸ್ಯ ಕೋಣೆಯ ಅಂಗಳವನ್ನು ಅಗೆದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಈ ಅಸ್ಥಿ ಪಂಜರಗಳು ಬಾಬಾನ ಅತ್ಯಾಚಾರ ಕರ್ಮಕಾಂಡಕ್ಕೆ ಬಲಿಯಾದ ಆಶ್ರಮದ ಸಾಧ್ವಿಗಳದ್ದಿರಬಹುದು ಅಥವಾ ಬಾಬಾನ ಎದುರು ನಿಂತವರನ್ನು ಇಲ್ಲಿಗೆ ಕರೆತಂದು ಕೊಂದು ಹೂತುಹಾಕಿರಬಹುದು ಎಂದು ಶಂಕಿಸಲಾಗಿದೆ.
ಇದು, ಆಶ್ರಮದಲ್ಲಿ ನರಮೇಧ ನಡೆದಿರುವ ವದಂತಿಗಳಿಗೆ ಇಂಬುಕೊಟ್ಟಿದ್ದು, ಇದರ ಸೂಕ್ತ ತನಿಖೆಯ ನಂತರವೇ ಇವುಗಳ ರಹಸ್ಯ ಬಹಿರಂಗವಾಗಲಿದೆ ಎಂದು ಹೇಳಲಾಗಿದೆ.
ಏತನ್ಮಧ್ಯೆ, ಬಾಬಾ ರಾಮ್ ರಹೀಂ ಆಪ್ತೆಯಾದ ಹನಿಪ್ರೀತ್ ಸಿಂಗ್ , ನೇಪಾಳದಲ್ಲಿ ಅಡಗಿರುವ ಖಚಿತ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸರು ಆಕೆಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications