Pulwama Attack: ಯೋಧರ ಮೃತದೇಹ ಮೇಲೆ 2019ರ ಲೋಕಸಭಾ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್
ಬೆಂಗಳೂರು, ಮೇ 22: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪುಲ್ವಾಮಾ ದಾಳಿ ವಿಚಾರವಾಗೇ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸೋಮವಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 2019 ರ ಲೋಕಸಭೆ ಚುನಾವಣೆಯು 'ದೇಶದ ನಮ್ಮ ಸೈನಿಕರ ಮೃತ ದೇಹಗಳ ಮೇಲೆ ನಡೆದಿತ್ತು ಎಂದು ಅವರು ಹೇಳಿದ್ದಾರೆ.
ಈ ಹಿಂದೊಮ್ಮೆ ಇದೇ ವಿಚಾರ ಬಹಿರಂಗಪಡಿಸುವ ಮೂಲಕ ಸುದ್ದಿಯಾಗಿದ್ದ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಮೇಲೆ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆ ನಮ್ಮ ಸೈನಿಕರ ದೇಹಗಳ ಮೇಲೆ ನಡೆದಿದೆ. ಅಂದಿನ ಗೃಹ ಸಚಿವರು ಘಟನೆಯ ಬಗ್ಗೆ ತನಿಖೆ ನಡೆಸದಿದ್ದರೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪುಲ್ವಾಮಾ ದಾಳಿ ನಡೆದಾಗ ಘಟನೆ ಬಗ್ಗೆ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದೆ. ಆದರೆ ಈ ವೇಳೆ ಪ್ರಧಾನಿಮಂತ್ರಿಗಳು ನನಗೆ ಮೌನವಾಗಿರಲು, ಸುಮ್ಮನಿರಲು ಹೇಳಿದರು ಎಂದು ಅವರು ತಿಳಿಸಿದರು.
ಸೈನಿಕರ ಸಾವಿನ ಮೇಳೆ ಅಂದಿನ ಚುನಾವಣೆ ನಡೆಸಲಾಯಿತು. ಆ ಬಗ್ಗೆ ಯಾರೊಬ್ಬರು ತನಿಖೆಗೆ ಮುಂದಾಗಲಿಲ್ಲ. ಒಂದು ವೇಳೆ ತನಿಖೆ ನಡೆದಿದ್ದರೆ, ಆಗಿನ ಗೃಹ ಸಚಿವ (ರಾಜನಾಥ್ ಸಿಂಗ್) ರಾಜೀನಾಮೆ ನೀಡಬೇಕಾಗಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು. ಈ ಘಟನೆಯ ವಿಚಾರ ದೇಶಾದ್ಯಂತ ವ್ಯಾಪಕ ವಿವಾದಕ್ಕೆ ಕಾರಣವಾಗಿತ್ತು ಎಂದು ಅಲ್ವಾರ್ ಜಿಲ್ಲೆಯ ಬನ್ಸೂರ್ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಲಿಕ್ ಪ್ರತಿಪಾದಿಸಿದರು.
ಪುಲ್ವಾಮಾ ದಾಳಿ ಬಗ್ಗೆ ವಿವರಿಸಿದ ಮಲಿಕ್
ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ವಿಭಜಿಸುವ ಮೊದಲು, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಆಗ ಸ್ಥಳಿಯ ಸಮಸ್ಯೆಗಳ ಬಗ್ಗೆ ಅವರು ಧ್ವನಿ ಎತ್ತಿದ್ದರು. ಇನ್ನು ಪುಲ್ವಾಮಾ ದಾಳಿಯು 2019ರ ಫೆಬ್ರವರಿ 14 ರಂದು ನಡೆದಿದೆ.

ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪರೋಕ್ಷವಾಗಿ ಪ್ರಧಾನಿ ಭಾಗಿಯಾಗಿದ್ದರು. ಪ್ರಧಾನಮಂತ್ರಿಗಳು ಉದ್ಯಾನದಿಂದ ಹೊರಗೆ ಬಂದಾಗ ನನಗೆ ಕರೆ ಬಂದಿತ್ತು. ನಮ್ಮ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಮತ್ತು ನಮ್ಮ ತಪ್ಪು ನಿರ್ಧಾರಗಳಿಂದ ಸಾವಿಗೀಡಾಗಿದ್ದಾರೆ ಎಂದು ಪ್ರಧಾನಿಗೆ ಹೇಳಿದೆ. ಅವರು ನನಗೆ ಸುಮ್ಮನಿರಲು ಸೂಚಿಸಿದರು ಎಂದು ಸತ್ಯಪಾಲ್ ಮಲಿಕ್ ವಿವರಿಸಿದರು.
ಮಲಿಕ್ ವಿರುದ್ಧ ಲಂಚದ ಆರೋಪ
2018ರ ಆಗಸ್ಟ್ 23ರಿಂದ 2019ರ ಅಕ್ಟೋಬರ್ 30ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ವಿಮಾ ಯೋಜನೆಯ ಫೈಲ್ಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂಪಾಯಿ ಲಂಚದ ರೂಪದಲ್ಲಿ ನೀಡಲಾಗಿತ್ತು. ಈ ಆರೋಪದ ಆಧಾರದಡಿ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಸತ್ಯಾಪಾಲ್ ಮಲಿಕ್ ಅವರನ್ನು ಪ್ರಶ್ನಿಸಿದ್ದರು.
ಉದ್ಯಮಿ ಅದಾನಿಯವರು ಕೇವಲ ಮೂರು ವರ್ಷಗಳಲ್ಲಿ ಅಪಾರ ಪ್ರಮಾಣದಲ್ಲಿ ಶ್ರೀಮಂತರಾದರು. ಇಷ್ಟು ಕಡಿಮೆ ಸಮಯದಲ್ಲಿ ಹೇಗೆ ಶ್ರೀಮಂತರಾಗಲು ಸಾಧ್ಯ? ಎಂದು ಮಲಿಕ್ ಪ್ರಶ್ನಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್











Click it and Unblock the Notifications