2021ರ ದೀರ್ಘಾವಧಿ ಚಂದ್ರಗ್ರಹಣ ಮುಗಿನ ನಂತರ ಮಾಡುವುದೇನು?
ನವದೆಹಲಿ, ನವೆಂಬರ್ 19: ಈ ವರ್ಷದ ಕೊನೆಯ ಹಾಗೂ ದೀರ್ಘಾವಧಿಯ ಚಂದ್ರಗ್ರಹಣವು ನವೆಂಬರ್ 19ರ ಬೆಳಗ್ಗೆ 11.30ಕ್ಕೆ ಆರಂಭವಾಗಲಿದ್ದು, ಸಂಜೆ 5.33 ಗಂಟೆವರೆಗೆ ಕಾಣಿಸಿಕೊಳ್ಳಲಿದೆ. ಇದು ಖಂಡಗ್ರಾಸ ಚಂದ್ರಗ್ರಹಣ ಆಗಿರುವುದರಿಂದ ಭಾರತದಾದ್ಯಂತ ಇದನ್ನು ವೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂಗಳಲ್ಲಿ ಮಾತ್ರ ಈ ಚಂದ್ರಗ್ರಹಣವು ಭಾಗಶಃ ಗೋಚರಿಸುತ್ತದೆ.
ಹಿಂದೂ ಧರ್ಮಗ್ರಂಥಗಳ ಪ್ರಕಾರ, ರಾಹುದೇವ ಸೂರ್ಯ ಮತ್ತು ಚಂದ್ರನನ್ನು ಬಾಯಿಯಿಂದ ಹಿಡಿದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಇದು ರಾಕ್ಷಸ ದೇವರನ್ನು ಒಳಗೊಂಡಿರುವುದರಿಂದ, ಈ ಸಂದರ್ಭದಲ್ಲಿ ಸಾಕಷ್ಟು ನಕಾರಾತ್ಮಕತೆಯನ್ನು ಹೊಂದಿರುತ್ತದೆ. ಈ ಹಿನ್ನೆಲೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಣದ ವಿದ್ಯಮಾನವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.
ಗ್ರಹಣದ ಸಮಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ಮಾಡುವುದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ. ಗ್ರಂಥಗಳಲ್ಲಿ ಗ್ರಹಣಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳಿದ್ದು, ಗ್ರಹಣ ಮುಗಿದ ನಂತರ ಕೆಲವು ಕೆಲಸಗಳನ್ನು ಮಾಡುವುದು ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈ ಕುರಿತು ಪ್ರಮುಖ ಅಂಶಗಳನ್ನು ಮುಂದೆ ಓದಿ.

ಚಂದ್ರಗ್ರಹಣ ಬಳಿಕ ಏನು ಮಾಡುವುದು?:
* ಚಂದ್ರಗ್ರಹಣದ ನಂತರ ಸ್ನಾನ ಮಾಡುವುದು ಅಗತ್ಯವಾಗಿರುತ್ತದೆ. ಚಂದ್ರಗ್ರಹಣದ ನಂತರ ಸ್ನಾನ ಮಾಡುವುದರಿಂದ ಗ್ರಹಣದ ಸಮಯದಲ್ಲಿ ಬಿಡುಗಡೆಯಾದ ನಕಾರಾತ್ಮಕ ಶಕ್ತಿಯ ಪ್ರಭಾವ ಕೊನೆಯಾಗುತ್ತದೆ. ಸ್ನಾನದ ವೇಳೆಗೆ ನೀರಿಗೆ ಗಂಗಾಜಲವನ್ನು ಮಿಶ್ರಣ ಮಾಡಿದರೆ ಉತ್ತಮ ಎಂದು ಜ್ಯೋತಿಷ್ಯಶಾಸ್ತ್ರವು ಹೇಳುತ್ತದೆ.
ಶುಭ್ರವಾದ ಬಟ್ಟೆಯನ್ನು ಧರಿಸಬೇಕು:
ಗ್ರಹಣದ ಸಮಯ ಅಂತ್ಯವಾಗುತ್ತಿದ್ದಂತೆ ಗಂಗಾಜಲ ಮಿಶ್ರಿತ ನೀರಿನಿಂದ ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ಧರಿಸಬೇಕು.
ಮನೆಯಲ್ಲಿ ಗಂಗಾಜಲ ಸಿಂಪಡಿಸುವುದು ಉತ್ತಮ:
ಸಾಮಾನ್ಯವಾಗಿ ಗ್ರಹಣದ ಸಮಯ ಮುಗಿದ ಮೇಲೆ ದೇವರ ಕೋಣೆ ಆದಿಯಾಗಿ ಇಡೀ ಮನೆಗೆ ಗಂಗಾಜಲವನ್ನು ಸಿಂಪಡಿಸುವುದು. ಗಂಗಾಜಲವನ್ನು ಬಳಸಿ ದೇವರಿಗೆ ಅಭಿಷೇಕವನ್ನು ಮಾಡಬೇಕು.
ಆಹಾರ ಸೇವನೆ ಉತ್ತಮವಲ್ಲ
ಗ್ರಹಣದ ಸಮಯದಲ್ಲಿ ಬಹಳಷ್ಟು ನಕಾರಾತ್ಮಕ ಅಂಶಗಳನ್ನು ಹೊರಸೂಸುತ್ತವೆ. ಈ ಅವಧಿಯಲ್ಲಿ ಆಹಾರವೂ ಕೂಡ ಅಪಾಯಕಾರಿ ಆಗಿರುತ್ತದೆ. ಹೀಗಾಗಿ ಆಹಾರ ಸೇವನೆಯನ್ನೂ ತ್ಯಜಿಸಬೇಕು. ಗ್ರಹಣ ಮುಗಿದ ಬಳಿಕ ಹಸುವಿಗೆ ರೊಟ್ಟಿ ತಿನ್ನಿಸುವುದರಿಂದ ಶುಭ ಫಲ ಪ್ರಾಪ್ತಿ ಆಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುವಿಗೆ ಆಹಾರ ನೀಡುವುದರಿಂದ ಎಲ್ಲಾ ರೀತಿಯ ದೋಷಮುಕ್ತಿ ಆಗಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications