2021ರ ದೀರ್ಘಾವಧಿ ಚಂದ್ರಗ್ರಹಣ ಮುಗಿನ ನಂತರ ಮಾಡುವುದೇನು?
ನವದೆಹಲಿ, ನವೆಂಬರ್ 19: ಈ ವರ್ಷದ ಕೊನೆಯ ಹಾಗೂ ದೀರ್ಘಾವಧಿಯ ಚಂದ್ರಗ್ರಹಣವು ನವೆಂಬರ್ 19ರ ಬೆಳಗ್ಗೆ 11.30ಕ್ಕೆ ಆರಂಭವಾಗಲಿದ್ದು, ಸಂಜೆ 5.33 ಗಂಟೆವರೆಗೆ ಕಾಣಿಸಿಕೊಳ್ಳಲಿದೆ. ಇದು ಖಂಡಗ್ರಾಸ ಚಂದ್ರಗ್ರಹಣ ಆಗಿರುವುದರಿಂದ ಭಾರತದಾದ್ಯಂತ ಇದನ್ನು ವೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂಗಳಲ್ಲಿ ಮಾತ್ರ ಈ ಚಂದ್ರಗ್ರಹಣವು ಭಾಗಶಃ ಗೋಚರಿಸುತ್ತದೆ.
ಹಿಂದೂ ಧರ್ಮಗ್ರಂಥಗಳ ಪ್ರಕಾರ, ರಾಹುದೇವ ಸೂರ್ಯ ಮತ್ತು ಚಂದ್ರನನ್ನು ಬಾಯಿಯಿಂದ ಹಿಡಿದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಇದು ರಾಕ್ಷಸ ದೇವರನ್ನು ಒಳಗೊಂಡಿರುವುದರಿಂದ, ಈ ಸಂದರ್ಭದಲ್ಲಿ ಸಾಕಷ್ಟು ನಕಾರಾತ್ಮಕತೆಯನ್ನು ಹೊಂದಿರುತ್ತದೆ. ಈ ಹಿನ್ನೆಲೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಣದ ವಿದ್ಯಮಾನವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.
ಗ್ರಹಣದ ಸಮಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ಮಾಡುವುದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ. ಗ್ರಂಥಗಳಲ್ಲಿ ಗ್ರಹಣಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳಿದ್ದು, ಗ್ರಹಣ ಮುಗಿದ ನಂತರ ಕೆಲವು ಕೆಲಸಗಳನ್ನು ಮಾಡುವುದು ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈ ಕುರಿತು ಪ್ರಮುಖ ಅಂಶಗಳನ್ನು ಮುಂದೆ ಓದಿ.

ಚಂದ್ರಗ್ರಹಣ ಬಳಿಕ ಏನು ಮಾಡುವುದು?:
* ಚಂದ್ರಗ್ರಹಣದ ನಂತರ ಸ್ನಾನ ಮಾಡುವುದು ಅಗತ್ಯವಾಗಿರುತ್ತದೆ. ಚಂದ್ರಗ್ರಹಣದ ನಂತರ ಸ್ನಾನ ಮಾಡುವುದರಿಂದ ಗ್ರಹಣದ ಸಮಯದಲ್ಲಿ ಬಿಡುಗಡೆಯಾದ ನಕಾರಾತ್ಮಕ ಶಕ್ತಿಯ ಪ್ರಭಾವ ಕೊನೆಯಾಗುತ್ತದೆ. ಸ್ನಾನದ ವೇಳೆಗೆ ನೀರಿಗೆ ಗಂಗಾಜಲವನ್ನು ಮಿಶ್ರಣ ಮಾಡಿದರೆ ಉತ್ತಮ ಎಂದು ಜ್ಯೋತಿಷ್ಯಶಾಸ್ತ್ರವು ಹೇಳುತ್ತದೆ.
ಶುಭ್ರವಾದ ಬಟ್ಟೆಯನ್ನು ಧರಿಸಬೇಕು:
ಗ್ರಹಣದ ಸಮಯ ಅಂತ್ಯವಾಗುತ್ತಿದ್ದಂತೆ ಗಂಗಾಜಲ ಮಿಶ್ರಿತ ನೀರಿನಿಂದ ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ಧರಿಸಬೇಕು.
ಮನೆಯಲ್ಲಿ ಗಂಗಾಜಲ ಸಿಂಪಡಿಸುವುದು ಉತ್ತಮ:
ಸಾಮಾನ್ಯವಾಗಿ ಗ್ರಹಣದ ಸಮಯ ಮುಗಿದ ಮೇಲೆ ದೇವರ ಕೋಣೆ ಆದಿಯಾಗಿ ಇಡೀ ಮನೆಗೆ ಗಂಗಾಜಲವನ್ನು ಸಿಂಪಡಿಸುವುದು. ಗಂಗಾಜಲವನ್ನು ಬಳಸಿ ದೇವರಿಗೆ ಅಭಿಷೇಕವನ್ನು ಮಾಡಬೇಕು.
ಆಹಾರ ಸೇವನೆ ಉತ್ತಮವಲ್ಲ
ಗ್ರಹಣದ ಸಮಯದಲ್ಲಿ ಬಹಳಷ್ಟು ನಕಾರಾತ್ಮಕ ಅಂಶಗಳನ್ನು ಹೊರಸೂಸುತ್ತವೆ. ಈ ಅವಧಿಯಲ್ಲಿ ಆಹಾರವೂ ಕೂಡ ಅಪಾಯಕಾರಿ ಆಗಿರುತ್ತದೆ. ಹೀಗಾಗಿ ಆಹಾರ ಸೇವನೆಯನ್ನೂ ತ್ಯಜಿಸಬೇಕು. ಗ್ರಹಣ ಮುಗಿದ ಬಳಿಕ ಹಸುವಿಗೆ ರೊಟ್ಟಿ ತಿನ್ನಿಸುವುದರಿಂದ ಶುಭ ಫಲ ಪ್ರಾಪ್ತಿ ಆಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುವಿಗೆ ಆಹಾರ ನೀಡುವುದರಿಂದ ಎಲ್ಲಾ ರೀತಿಯ ದೋಷಮುಕ್ತಿ ಆಗಲಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications