ನಿಗದಿತ ಅವಧಿಗಿಂತ ಮೊದಲೇ 2024ರ ಲೋಕಸಭೆ ಚುನಾವಣೆ ಸಾಧ್ಯತೆ: ಸಿಎಂ ನಿತೀಶ್ ಕುಮಾರ್
ಪಾಟ್ನಾ, ಜೂನ್. 15: 2024ರ ಲೋಕಸಭೆ ಚುನಾವಣೆ ನಿಗದಿತ ಅವಧಿಗೂ ಮುನ್ನವೇ ನಡೆಯಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಹೇಳಿದ್ದಾರೆ. ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಕರ್ನಾಟಕ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಲೋಕಸಭಾ ಚುನಾವಣೆ ಬೇಗ ಮಾಡಬಹುದು ಎಂದಿದ್ದರು.
ಬಿಹಾರ ರಾಜಧಾನಿ ಪಾಟ್ನಾದಿಂದ ಗ್ರಾಮೀಣ ಕಾಮಗಾರಿ ಇಲಾಖೆಯ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 6,680.67 ಕೋಟಿ ರೂಪಾಯಿ ಮೊತ್ತದ 5,061 ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಸಿಎಂ ನಿತೀಶ್ ಕುಮಾರ್ ಮಾತನಾಡಿದ್ದರು. ಈ ವೇಳೆ 2024ಕ್ಕೂ ಮೊದಲು ಕಾಮಗಾರಿಗಳನ್ನು ಮುಗಿಸುವಂತೆ ಸೂಚಿಸಿದ್ದಾರೆ.

ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ನಿತೀಶ್ ಕುಮಾರ್, "ಜನವರಿ 2024 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ನೀವು ಹೇಳುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಮಗಾರಿ ಮುಗಿಸಲು ನಾನು ನಿಮಗೆ ಸೂಚಿಸುತ್ತೇನೆ. ಅದು ಎಷ್ಟು ಬೇಗ ಆಗುತ್ತದೆಯೋ ಅಷ್ಟು ಒಳ್ಳೆಯದು, ಏಕೆಂದರೆ ಚುನಾವಣೆ ಯಾವಾಗ ನಡೆಯಲಿದೆ ಎಂದು ಯಾರಿಗೆ ಗೊತ್ತು..? "ಎಂದಿದ್ದಾರೆ.
ಮುಂದುವರೆದು, "ಮುಂದಿನ ವರ್ಷವೇ (2024) ಚುನಾವಣೆ ನಡೆಯುವುದು ಅಗತ್ಯವೇ..? ಅವಧಿಗೂ ಮುನ್ನ ಚುನಾವಣೆ ನಡೆಯುತ್ತದೆಯೇನೋ ಯಾರಿಗೆ ಗೊತ್ತು? ಆದ್ದರಿಂದ, ತ್ವರಿತವಾಗಿ ಕಾರ್ಯನಿರ್ವಹಿಸಿ" ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆನೆ ಮಾರ್ಗ್ನಲ್ಲಿ ಕಾರ್ಯಕ್ರಮ ನಡೆದಿದ್ದು, ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಕೂಡ ಉಪಸ್ಥಿತರಿದ್ದರು.
ಈ ಹಿಂದೆ, ನಿತೀಶ್ ಕುಮಾರ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೆಲಸ ಮಾಡಿದ್ದಾರೆ. ಅವರು ದೇಶಾದ್ಯಂತ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಪ್ರಾರಂಭಿಸಿದವರು. ಬಿಜೆಪಿಯ ಹೆಸರನ್ನು ತೆಗೆದುಕೊಳ್ಳದೆ, ನಿತೀಶ್ ಕುಮಾರ್ ಅವರು, "ಅಟಲ್ ಜಿಯವರ ಕಾಲದಲ್ಲಿ, ಕೇಂದ್ರ ಸರ್ಕಾರವು 100% ನಿಧಿಯನ್ನು ಮಂಜೂರು ಮಾಡಿತು. ಆದರೆ ಪ್ರಸ್ತುತ ಸರ್ಕಾರವು 60 ಮತ್ತು 40 ಅನುಪಾತಗಳಲ್ಲಿ ವಿಂಗಡಿಸಿದೆ. ಅಂದರೆ ಶೇ.60ರಷ್ಟು ಕೇಂದ್ರದಿಂದ ಹಾಗೂ ಶೇ.40ರಷ್ಟು ರಾಜ್ಯ ಸರಕಾರದಿಂದ ಸಿಗಲಿದೆ. ಆದರೆ, ವಾಸ್ತವವನ್ನು ನೋಡಿದರೆ, ಖರ್ಚು 50-50 ಆಗಿದೆ" ಎಂದು ಆರೋಪಿಸಿದ್ದಾರೆ.
ಇನ್ನು, ಕಳೆದ ವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ಸೇಲಂನಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ಕರ್ನಾಟಕದಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಅವಧಿಗೂ ಮುನ್ನವೇ 2024ರ ಸಂಸತ್ ಚುನಾವಣೆಯನ್ನು ನಡೆಸಲು ಪ್ರಯತ್ನಿಸುತ್ತಿದೆ ಎಂದು ಸೂಚನೆ ನೀಡಿದ್ದರು.
"ದೇಶದಾದ್ಯಂತ ಬಿಜೆಪಿ ಪ್ರಭಾವ, ವರ್ಚಸ್ಸು ಕ್ರಮೇಣ ಕಡಿಮೆಯಾಗುತ್ತಿದೆ. ಇದರಿಂದಾಗಿ ಬಿಜೆಪಿ ನಾಯಕರು ಯಾವ ನಿರ್ಧಾರವನ್ನು ಕೈಗೊಳ್ಳಬಹುದು. ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರು ಸಂಸತ್ತಿನ ಚುನಾವಣೆಯನ್ನು ಮೊದಲೇ ಘೋಷಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications