1,000 ರೂಪಾಯಿಗೆ ತಿಲಾಂಜಲಿ, ಹೊಸ ನೋಟು ಚಲಾವಣೆ ಇಲ್ಲ
ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಹೊಸದಾಗಿ 1,000 ನೋಟುಗಳನ್ನು ಚಲಾವಣೆಗೆ ತರುವುದಿಲ್ಲ ಎಂದಿದ್ದಾರೆ.
ನವದೆಹಲಿ, ನವೆಂಬರ್ 17: ನೋಟುಗಳ ಬ್ಯಾನ್ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯದ ಬಗ್ಗೆ ಸಂಸತ್ತಿನಲ್ಲಿ ಭಾರಿ ಚರ್ಚೆ ನಡೆದಿದೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಹೊಸದಾಗಿ 1,000 ನೋಟುಗಳನ್ನು ಚಲಾವಣೆಗೆ ತರುವುದಿಲ್ಲ ಎಂದಿದ್ದಾರೆ.
ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರು ನೋಟುಗಳ ಬಳಕೆಯನ್ನು ನಿಷೇಧಿಸಿದ್ದು ಎಲ್ಲರಿಗೂ ತಿಳಿದಿರಬಹುದು. ಹೊಸದಾಗಿ 2,000 ರುಪಾಯಿ ಹಾಗೂ ಇದೀಗ 500 ರುಪಾಯಿ ನೋಟುಗಳು ಚಲಾವಣೆಗೆ ಬಂದಿವೆ. [ಹಣ ಬದಲಾವಣೆ, ವಿಥ್ ಡ್ರಾ ಮಿತಿ ಇಳಿಕೆಗೆ ಕಾರಣ ಏನು?]

ಆದರೆ, 1,000 ರುಪಾಯಿ ಮುಖಬೆಲೆ ನೋಟುಗಳ ಬಗ್ಗೆ ಇದ್ದ ಅನುಮಾನವನ್ನು ಜೇಟ್ಲಿ ಅವರು ಪರಿಹರಿಸಿದ್ದು, ಹೊಸ ವಿನ್ಯಾಸದಲ್ಲಿ 1000 ರೂಪಾಯಿ ನೋಟುಗಳು ತರುತ್ತಿಲ್ಲ ಎಂದಿದ್ದಾರೆ.[ಮದುವೆ ಸಮಾರಂಭಗಳಿಗಾಗಿ 2.5 ಲಕ್ಷ ಡ್ರಾ ಮಾಡಬಹುದು]
ಹೊಸ ನೋಟುಗಳು ಎಟಿಎಂಗೆ : ಎಟಿಎಂಗಳಿಗೆ ಹೊಸ ನೋಟುಗಳನ್ನು ತುಂಬುವ ಕಾರ್ಯ ಭರದಿಂದ ಸಾಗಿದೆ. ದೇಶದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಎಟಿಎಂಗಳಿವೆ. ಇಂದಿನಿಂದ 22,500 ಎಟಿಎಂಗಳು ಪುನರ್ ವಿನ್ಯಾಸಗೊಳ್ಳಲಿವೆ ಎಂದು ರಾಜ್ಯಸಭೆಯಲ್ಲಿ ಹೇಳಿದರು.
ನೋಟುಗಳ ಬದಲಾವಣೆ ಮಿತಿಯನ್ನು 4,500 ರೂಪಾಯಿಯಿಂದ 2,000 ರೂಪಾಯಿಗೆ ಇಳಿಸಿದ ಕ್ರಮವನ್ನು ಸಮರ್ಥಿಸಿಕೊಂಡ ಜೇಟ್ಲಿ, ಇದರಿಂದ ಹಣ ದುರ್ಬಳಕೆ ತಡೆಗಟ್ಟಬಹುದು ಎಂದರು.
ನಾಗರಿಕರ ಸಂಘಟನೆ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆ ಪ್ರಕಾರ ನೋಟುಗಳ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳಿಗೆ ಶೇ 79ರಷ್ಟು ಮಂದಿ ಸರಿಯಾಗಿದೆ ಎಂದಿದ್ದಾರೆ. ಹೀಗಾಗಿ ಸರ್ಕಾರ ಸರಿ ಹಾದಿಯಲ್ಲಿದೆ ಎಂದು ಮೋದಿ ಸರ್ಕಾರ ಹೇಳಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications