ಗರ್ಭಿಣಿ ಶಿಕ್ಷಕಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ 22 ವಿದ್ಯಾರ್ಥಿಗಳ ಅಮಾನತು
ನವದೆಹಲಿ, ನವೆಂಬರ್ 30: ಅಸ್ಸಾಂನ ದಿಬ್ರುಗಢ ಜಿಲ್ಲೆಯಲ್ಲಿ ಗರ್ಭಿಣಿ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ 22 ಶಾಲಾ ವಿದ್ಯಾರ್ಥಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು, 'ಭಾನುವಾರ ನಮ್ಮ ಶಾಲೆಯಲ್ಲಿ ಐದು ತಿಂಗಳ ಗರ್ಭಿಣಿ ಇತಿಹಾಸ ಶಿಕ್ಷಕಿಯ ಮೇಲೆ 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದೆ' ಎಂದು ದೃಢಪಡಿಸಿದ್ದಾರೆ.
ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಬಗ್ಗೆ ಶಿಕ್ಷಕಿಯು ಪೋಷಕರಿಗೆ ಮಾಹಿತಿ ನೀಡಿದ್ದರು. ಆ ಹಿನ್ನೆಲೆಯಲ್ಲಿ ಕಿಡಿಗೇಡಿ ವಿದ್ಯಾರ್ಥಿಗಳ ಗುಂಪು ಗರ್ಭಣಿ ಶಿಕ್ಷಕಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮುಖ್ಯ ಕಟ್ಟಡದ ಮುಂದೆ ಶಿಕ್ಷಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದರು. ಆಕೆಯ ಮೇಲೆ ಕೆಲವರು ಹಲ್ಲೆ ನಡೆಸಿದರು. ಒಬ್ಬ ವಿದ್ಯಾರ್ಥಿ ಶಿಕ್ಷಕಿಯ ಕೂದಲನ್ನು ಹಿಡಿದು ಎಳೆದಾಡಿದನು ಎಂದು ಹೇಳಿದ್ದಾರೆ.
ಈ ಘಟನೆಯಲ್ಲಿ ಪ್ರಾಂಶುಪಾಲರು ಮತ್ತು ಮತ್ತೊಬ್ಬ ಶಿಕ್ಷಕರನ್ನೂ ವಿದ್ಯಾರ್ಥಿಗಳ ಗುಂಪು ತಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
'ನನ್ನ ನಿವಾಸದಲ್ಲಿ ತುರ್ತು ಸಭೆ ನಡೆಸಿದ ನಂತರ ಮರುದಿನ ಬೆಳಿಗ್ಗೆ ನಾನು ಅವರ ಪೋಷಕರಿಗೆ ಕರೆ ಮಾಡಿದೆ. ಈ ಬೆಳವಣಿಗೆಯ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು ನನಗೆ ಫೋನ್ ಮೂಲಕ ಬೆದರಿಕೆ ಹಾಕಿದರು. ನನ್ನ ಕ್ವಾರ್ಟರ್ಸ್ ಕಡೆಗೆ ಬಂದು, ನನ್ನ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು' ಎಂದು ಪ್ರಾಂಶುಪಾಲ ರತೀಸ್ ಕುಮಾರ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಗರ್ಭಿಣಿ ಶಿಕ್ಷಕಿಯನ್ನು ಇತರ ಕೆಲವು ಮಹಿಳಾ ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮತ್ತು ಕೆಲವು ವಿದ್ಯಾರ್ಥಿನಿಯರು ರಕ್ಷಿಸಿದ್ದಾರೆ. ಆಘಾತಕ್ಕೊಳಗಾದ ಆಕೆ ಕುಸಿದು ಬೀಳುವ ಹಂತದಲ್ಲಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಔಪಚಾರಿಕವಾಗಿ ದೂರು ದಾಖಲಾಗಿಲ್ಲ. ಈ ಕಾರಣ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ನಾವು ದಿಬ್ರುಗಢ ಡೆಪ್ಯೂಟಿ ಕಮಿಷನರ್ ಕಚೇರಿಗೆ ತಿಳಿಸಿದ್ದೇವೆ. ಸಂಬಂಧಪಟ್ಟ ಎಡಿಸಿ ಮ್ಯಾಜಿಸ್ಟ್ರೇಟ್ ತನಿಖೆಯ ಭರವಸೆ ನೀಡಿದರು ಮತ್ತು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಮಗೆ ತಿಳಿಸಿದರು' ಎಂದು ಪ್ರಾಂಶುಪಾಲರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications