ರಾಹುಲ್ ಗಾಂಧಿ ಟ್ವಿಟ್ಟರ್ ಆಯ್ತು ಈಗ ಮೋದಿ ಆಪ್ ಗೆ ಕನ್ನ
ಮುಂಬೈನ ಜಾವೇದ್ ಖಾತ್ರಿ ಎನ್ನುವ 22 ವರ್ಷದ ಯುವ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ ನ್ನು ಹ್ಯಾಕ್ ಮಾಡಿದ್ದಾನೆ. ಮೋದಿ ಆಪ್ ನ ಭದ್ರತಾ ಲೋಪದೋಷಗಳನ್ನು ಬಹಿರಂಗಪಡಿಸುವುದಕ್ಕಾಗಿ ಹ್ಯಾಕ್ ಮಾಡಿದ್ದೆ ಎಂದಿದ್ದಾನೆ.
ಮುಂಬೈ, ಡಿಸೆಂಬರ್. 04 : ಇತ್ತೀಚೆಗಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ ಗೆ ಹ್ಯಾಕರ್ಸ್ ಗಳು ಕನ್ನ ಹಾಕಿದ್ದಾರೆ.
ಮುಂಬೈನ ಮೊಬೈಲ್ ಆಪ್ ಅಭಿವೃದ್ಧಿಪಡಿಸುವ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 22 ವರ್ಷದ ಜಾವೇದ್ ಖಾತ್ರಿ ತಾನು ಪ್ರಧಾನಿ ಮೋದಿ ಅವರ ಮೊಬೈಲ್ ಆಪ್ ಅನ್ನು ಹ್ಯಾಕ್ ಮಾಡಿದೆ. 15-20 ನಿಮಿಷಗಳ ಕಾಲ ಆಪ್ ಹ್ಯಾಕ್ ಮಾಡಿದ್ದು ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ.
ಬದಲಾಗಿ ಮೋದಿ ಆಪ್ ನ ಭದ್ರತಾ ಲೋಪದೋಷಗಳನ್ನು ಬಹಿರಂಗಪಡಿಸುವುದಕ್ಕಾಗಿ ಹ್ಯಾಕ್ ಮಾಡಿದ್ದೆ ಎಂದು ಜಾವೇದ್ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾನೆ. [ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಗೆ ಹ್ಯಾಕರ್ಸ್ ಕನ್ನ]

ಆಪ್ ನ ಮೂಲಕ ನಾನು ಯಾವುದೇ ವ್ಯಕ್ತಿಯ ಖಾಸಗಿ ಡಾಟಾವನ್ನು ಸುಲಭವಾಗಿ ಬಳಸುತ್ತೇನೆ. ಫೋನ್ ನಂಬರ್, ಇ-ಮೇಲ್, ಹೆಸರು, ಸ್ಥಳ ಹೀಗೆ ಏನನ್ನ ಬೇಕಾದರೂ ನೋಡಬಲ್ಲೆ ಎಂದು ಜಾವೇದ್ ಹೇಳಿದ್ದಾನೆ.
Also let me clarify that I did not hack exactly, made a few suggestions which were later clarified to me. @PrabhuChawla @kavereeb
— Javed Khatri (@IamJavedKhatri) December 2, 2016
ಆಪ್ ಅಭದ್ರತೆಯಿಂದ ಕೂಡಿರುವುದರಿಂದ ಆಪ್ ಬಳಸುತ್ತಿರುವ 7 ಮಿಲಿಯನ್ ಜನರ ಮಾಹಿತಿಯನ್ನು ಕ್ಷಣಾರ್ಧದಲ್ಲೇ ತಿಳಿಯಬಹುದಾಗಿದೆ.
ಹೀಗಾಗಿ ಆಪ್ ಬಳಸುತ್ತಿರುವವರಿಗೆ ಹಾಗೂ ಸರ್ಕಾರಕ್ಕೆ ಮನದಟ್ಟು ಮಾಡುವ ಉದ್ದೇಶದಿಂದ ನಾನು ಮೋದಿ ಅವರ ಆಪ್ ಅನ್ನು ಹ್ಯಾಕ್ ಮಾಡಿದ್ದೆ ಎಂದು ಸಂದರ್ಶನವೊಂದರಲ್ಲಿ ಜಾವೇದ್ ಹೇಳಿದ್ದಾನೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications