ದೇಶಕ್ಕಾಗಿ ಬಲಿದಾನಗೈದ ಆ ಮೂರು ವೀರರಿಗೆ ಭಾವಪೂರ್ಣ ಶ್ರದ್ಧಾಂಜಲಿ
ನವದೆಹಲಿ, ಮಾರ್ಚ್ 23: ಭಾರತದ ಇತಿಹಾಸದಲ್ಲಿ ಎಂದೂ ಮರೆಯದ ದಿನವಾಗಿ ಅಚ್ಚೊತ್ತಿದ ದಿನಗಳಲ್ಲಿ ಮಾರ್ಚ್ 23 ಸಹ ಒಂದು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ನೇಣಿಗೇರಿಸಿದ ದಿನ ಇದು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬದುಕಿರುವಷ್ಟು ದಿನವಷ್ಟೇ ಅಲ್ಲ, ಸಾಯುವ ಕೊನೆಯ ಕ್ಷಣದವರೆಗೂ ಬ್ರಿಟಿಷರಿಗೆ ದುಃಸ್ವಪ್ನವೆನ್ನಿಸಿದ ಕಾರಣಕ್ಕಾಗಿಯೇ ಆ ಮೂವರನ್ನೂ ನಿಗದಿ ಪಡಿಸಿದ್ದಕ್ಕಿಂತ(ಮಾರ್ಚ್ 24) ಒಂದು ದಿನ ಮೊದಲೇ ಗಲ್ಲಿಗೇರಿಸಲಾಯಿತು!
1928 ರಲ್ಲಿ ದೆಹಲಿಯ ಸೆಂಟ್ರಲ್ ಅಸೆಂಬ್ಲಿಗೆ ಬಾಂಬ್ ಎಸೆದ ಆರೋಪ ಮತ್ತು ಬ್ರಿಟಿಷ್ ಅಧಿಕಾರಿಯೊಬ್ಬನನ್ನು ಗುಂಡಿಕ್ಕಿ ಕೊಂದ ಕಾರಣಕ್ಕೆ ಅವರನ್ನು ಸೆರೆಯಲ್ಲಿರಿಸಲಾಗಿತ್ತು. ನಂತರ 1931 ಮಾರ್ಚ್ 23 ರಂದು ಅವರನ್ನು ಬ್ರಿಟಿಷ್ ಸರ್ಕಾರ ನೇಣಿಗೇರಿಸಿತು. ಯುವ ಜನಾಂಗಕ್ಕೆ ಸ್ಫೂರ್ತಿಯಾದ ಆ ದಿವ್ಯಚೇತನಗವನ್ನು ನೆನೆದು ಮಾರ್ಚ್ 23 ನ್ನು ಶಾಹಿದ್ ದಿವಸ್ ಅಥವಾ ಬಲಿದಾನ ದಿನವನ್ನಾಗಿ ಆಚರಿಸಲಾಗುತ್ತದೆ. ಇತಿಹಾಸದಲ್ಲಿ ಅಚ್ಚೊತ್ತಿದ ಈ ಮಹತ್ವದ ದಿನಕ್ಕೆ ಮತ್ತು ಆ ಮೂರು ಮಹಾನ್ ನಾಯಕರಿಗೆ ಟ್ವಿಟ್ಟರ್ ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.
| Array |
ಸ್ಮೃತಿ ಸ್ಮರಣೆ
ಹುತಾತ್ಮ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಅವರ ಬಲಿದಾನದ ದಿನದಂದು ಶ್ರದ್ಧಾಂಜಲಿ. ಅವರ ಮಹೋನ್ನತ ತ್ಯಾಗ ನಮ್ಮನ್ನಿಂದು ಸ್ವತಂತ್ರರನ್ನಾಗಿ ಮಾಡಿದೆ. ಅವರು ಎಂದಿಗೂ ನಮ್ಮೆಲ್ಲರ ಮನಸ್ಸಿನಲ್ಲಿ ಭದ್ರಸ್ಥಾನದಲ್ಲಿ ಉಳಿಯುತ್ತಾರೆ ಎಂದು ಕೇಮಮದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.
|
ಯಡಿಯೂರಪ್ಪ ಅವರಿಂದ ಶ್ರದ್ಧಾಂಜಲಿ
ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ತ್ಯಾಗವನ್ನು ಈ ದಿನ ನೆನೆಯುತ್ತೇನೆ. ಮತ್ತು ಅವರು ಈ ದೇಶದ ಪರಂಪರೆ ಮತ್ತು ದೇಶಭಕ್ತಿಗೆ ನೀಡಿದ ಕೊಡುಗೆಗೆ ನನ್ನ ನಮನ. ಭಾರತದ ಸ್ವಾತಂತ್ರ್ಯಕ್ಕೆ ಅವರು ನೀಡದ ಕೊಡುಗೆಯನ್ನು ನಾವು ನಿರಂತರವಾಗಿ ನೆನಪಿಸಿಕೊಳ್ಳುತ್ತೇವೆ ಎಂದು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
|
ಅನಂತ ನಮನ
ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರು ಹುತಾತ್ಮರಾದ ದಿನದಂದು ಅವರಿಗೆ ನನ್ನ ನಮನ. ನಮ್ಮ ದೇಶದ ನಾಳೆಗಾಗಿ ತಮ್ಮ ಬದುಕನ್ನು ಬಲಿ ನೀಡಿದ ಮಹಾನ್ ಚೇತನವನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಟ್ವೀಟ್ ಮಾಡಿದ್ದಾರೆ.
|
ಅಮರೀಂದರ್ ಸಲಾಂ
ಈ ಮಣ್ಣಿನ ವೀರಪುತ್ರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಶಾಹಿದ್ ದಿನದಂದು ನಮನಗಳು. ಅವರ ತ್ಯಾಗವೇ ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ದಾರಿದೀಪವಾಗಿದ್ದು. ಅವರು ಹುತಾತ್ಮರಾದ ದಿನವನ್ನು ನಾವು ಯುವ ಸಬಲೀಕರಣ ದಿನವನ್ನಾಗಿ ಆಚರಿಸಿ, ಯುವಕರಿಗೆ ಸ್ಫೂರ್ತಿ ನೀಡುತ್ತೇವೆ ಎಂದು ಪಂಜಾಮ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications