Criminal Cases On Candidates: 3ನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ 18% ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣ!
ನವದೆಹಲಿ, ಏಪ್ರಿಲ್. 29: ಲೋಕಸಭೆ ಚುನಾವಣೆಯ ಎರಡು ಹಂತಗಳು ಈಗಾಗಲೇ ಮುಗಿದಿದ್ದು, 3ನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಶೇಕಡಾ ಹದಿನೆಂಟರಷ್ಟು ಅಭ್ಯರ್ಥಿಗಳು, ಅಂದರೆ 1,352 ವ್ಯಕ್ತಿಗಳಲ್ಲಿ 244 ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ.
ನ್ಯಾಷನಲ್ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಈ ಬಗ್ಗೆ ಬೆಳಕು ಚೆಲ್ಲಿದೆ. ಎಡಿಆರ್ ವರದಿಯ ಪ್ರಕಾರ, 172 ಅಭ್ಯರ್ಥಿಗಳು (13%) ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಐವರ ಮೇಲೆ ಕೊಲೆಗೆ ಸಂಬಂಧಿಸಿದ ಪ್ರಕರಣಗಳಿವೆ. 38 ಮಂದಿ ಮೇಲೆ ಅತ್ಯಾಚಾರ ಸೇರಿದಂತೆ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ. 17 ಅಭ್ಯರ್ಥಿಗಳು ತಮ್ಮ ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳಿವೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಗಳಲ್ಲಿ 82 (27%) ರಲ್ಲಿ 22 ಮಂದಿ, 68 (38%) ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ 26 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಜನತಾ ದಳ (RJD) ದ 3 ರಲ್ಲಿ 3 (100%) ಅಭ್ಯರ್ಥಿಗಳ ವಿರುದ್ಧ ಪ್ರಕರಣಗಳಿವೆ.
ಅದೇ ರೀತಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) 80%, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ - ಶರದ್ಚಂದ್ರ ಪವಾರ್ (ಎನ್ಸಿಪಿ) 67%, ಸಮಾಜವಾದಿ ಪಕ್ಷ (ಎಸ್ಪಿ) 67%, ಜನತಾ ದಳ (ಯುನೈಟೆಡ್) 33%, ಮತ್ತು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಸಿ) 17% ಪ್ರಕರಣಗಳಿವೆ.
95 ಲೋಕಸಭಾ ಕ್ಷೇತ್ರಗಳ ಪೈಕಿ 43 (45%) ಕ್ಷೇತ್ರಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಒಂದು ಕ್ಷೇತ್ರದಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡರೆ ಅಂತಹ ಕ್ಷೇತ್ರಗಳಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.

ಸ್ಪರ್ಧಿಗಳ ಆರ್ಥಿಕ ಸ್ಥಿತಿಯ ಬಗ್ಗೆ ಹೇಳುವುದಾದರೆ, 1,352 ಅಭ್ಯರ್ಥಿಗಳಲ್ಲಿ 392 ಅಭ್ಯರ್ಥಿಗಳು (29%) ಕೋಟ್ಯಾಧಿಪತಿಗಳು ಅಂದರೆ 1 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ. 77 ಅಭ್ಯರ್ಥಿಗಳ ಪೈಕಿ ಬಿಜೆಪಿ ಮೂರನೇ ಹಂತದಲ್ಲಿ 77 (94%) ಕೋಟ್ಯಾಧಿಪತಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ 68 ಅಭ್ಯರ್ಥಿಗಳಲ್ಲಿ 60 (88%) ಕೋಟ್ಯಾಧಿಪತಿಗಳನ್ನು ಹೊಂದಿದೆ.
ಜೆಡಿಯು, ಶಿವಸೇನೆ (ಯುಬಿಟಿ), ಎನ್ಸಿಪಿ, ಆರ್ಜೆಡಿ, ಶಿವಸೇನೆ, ಎನ್ಸಿಪಿ ಶರದ್ಚಂದ್ರ ಪವಾರ್ನ ಎಲ್ಲಾ ಸ್ಪರ್ಧಿಗಳು ಕೋಟ್ಯಾಧಿಪತಿಗಳು. ಪ್ರತಿ ಅಭ್ಯರ್ಥಿಯ ಸರಾಸರಿ ಆಸ್ತಿ 5.66 ಕೋಟಿಯಿದೆ. ಬಿಜೆಪಿ 82 ಅಭ್ಯರ್ಥಿಗಳನ್ನು ಹೊಂದಿದ್ದು, ಪ್ರತಿ ಅಭ್ಯರ್ಥಿಯ ಸರಾಸರಿ ಆಸ್ತಿ 44.07 ಕೋಟಿ ಮತ್ತು 68 ಕಾಂಗ್ರೆಸ್ ಅಭ್ಯರ್ಥಿಗಳು 20.59 ಕೋಟಿ ರೂಪಾಯಿ ಸರಾಸರಿ ಆಸ್ತಿ ಹೊಂದಿದ್ದಾರೆ.
ಗೋವಾದ ಬಿಜೆಪಿಯ ಪಲ್ಲವಿ ಶ್ರೀನಿವಾಸ್ ಡೆಂಪೊ 1361 ಕೋಟಿ ರೂಪಾಯಿಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಮಧ್ಯಪ್ರದೇಶದ ಬಿಜೆಪಿಯ ಜ್ಯೋತಿರಾದಿತ್ಯ ಎಂ. ಸಿಂಧಿಯಾ 424 ಕೋಟಿಗಿಂತ ಹೆಚ್ಚು, ಕಾಂಗ್ರೆಸ್ನ ಛತ್ರಪತಿ ಶಾಹು ಶಾಹಜಿ 342 ಕೋಟಿಗಿಂತ ಅತಿ ಹೆಚ್ಚು ಆಸ್ತಿ ಹೊಂದಿರುವ ಮೊದಲ ಮೂರು ಅಭ್ಯರ್ಥಿಗಳು. ಇನ್ನು, ಮಹಾರಾಷ್ಟ್ರದ ಐವರು ಅಭ್ಯರ್ಥಿಗಳು ಶೂನ್ಯ ಆಸ್ತಿ ಘೋಷಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳು ಮುಗಿದಿವೆ. ಮೊದಲ ಹಂತ ಏಪ್ರಿಲ್ 19 ರಂದು 102 ಕ್ಷೇತ್ರಗಳಲ್ಲಿ ನಡೆಯಿತು. ಏಪ್ರಿಲ್ 26 ರಂದು 89 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿತ್ತು. ಮೂರನೇ ಹಂತದ ಮತದಾನವು ಮೇ 7 ರಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 94 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications