ಬಾಬಾ ರಾಮ್ ದೇವ್ ಕಂಪೆನಿಗೆ ಭೂ ಸ್ವಾಧೀನದಲ್ಲಿ 250 ಕೋಟಿ ರಿಯಾಯಿತಿ
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಬಾಬಾ ರಾಮ್ ದೇವ್ ಕಂಪೆನಿಗೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ 4.6 ಕೋಟಿ ಅಮೆರಿಕನ್ ಡಾಲರ್ (250 ಕೋಟಿ ರುಪಾಯಿಗೂ ಹೆಚ್ಚು) ರಿಯಾಯಿತಿಯನ್ನು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನೀಡಲಾಗಿದೆ ಎಂದು ಮಾಧ್ಯಮದ ವರದಿಯೊಂದು ಉಲ್ಲೇಖ ಮಾಡಿದೆ.
ರಾಯಿಟರ್ಸ್ ನಿಂದ ಸರಕಾರಿ ದಾಖಲೆಗಳ ಪರಿಶೀಲನೆ ಹಾಗೂ ಸರಕಾರಿ ಅಧಿಕಾರಿಗಳ ಸಂದರ್ಶನ ಮಾಡಿದ್ದು, ಭೂಮಿಯ ರಿಯಲ್ ಎಸ್ಟೇಟ್ ಮೌಲ್ಯವನ್ನು ಪ್ರತ್ಯೇಕವಾಗಿ ಅಂದಾಜು ಮಾಡಿ, ವರದಿ ಸಿದ್ಧಪಡಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಮ್ ದೇವ್ ಉದ್ಯಮದ ಲಾಭದಲ್ಲೂ ಭಾರೀ ಏರಿಕೆ ಆಗಿದೆ ಎಂದು ವರದಿ ತಿಳಿಸುತ್ತದೆ.
2013ರಲ್ಲಿ 156 ಮಿಲಿಯನ್ ಅಮೆರಿಕನ್ ಡಾಲರ್ ನಷ್ಟಿದ್ದ ಗ್ರಾಹಕ ವಸ್ತುಗಳ ವ್ಯವಹಾರವು 2015ರ ಮಾರ್ಚ್ ಹೊತ್ತಿಗೆ 322 ಮಿಲಿಯನ್ ಅಮೆರಿಕನ್ ಡಾಲರ್ ಗೆ ಏರಿಕೆ ಆಗಿದೆ. ಕಳೆದ ಮೇನಲ್ಲಿ ಸ್ವತಃ ಬಾಬಾ ರಾಮ್ ದೇವ್ ಹೇಳಿದಂತೆ, ಅವರ ಕಂಪೆನಿಯ ಆದಾಯ 160 ಕೋಟಿ ಅಮೆರಿಕನ್ ಡಾಲರ್ ಗೆ ಏರಿಕೆ ಆಗಿದೆ.

2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಪತಂಜಲಿಯಿಂದ 2 ಸಾವಿರ ಎಕರೆಯಷ್ಟು ಭೂಮಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಕಂಪೆನಿಯ ಕಾರ್ಖಾನೆಗಳಿಗೆ ಕಟ್ಟಡ ನಿರ್ಮಾಣಕ್ಕೆ, ಸಂಶೋಧನೆಗೆ, ಆಯುರ್ವೇದಿಕ್ ವನಮೂಲಿಕೆಗಳ ಸರಬರಾಜಿಗೆ ಹೀಗೆ ನಾನಾ ಕಾರಣಗಳಿಗೆ ಭೂ ಸ್ವಾಧೀನ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ದೊಡ್ಡ ಪ್ರಮಾಣದ ಭೂಮಿಯನ್ನು ಪತಂಜಲಿ ಮಾರಾಟ ಮಾಡಿತ್ತು. ಇನ್ನು ನೂರು ಎಕರೆಗೂ ಹೆಚ್ಚು ಭೂ ಸ್ವಾಧೀನ ಮಾಡಿಕೊಂಡ ನಾಲ್ಕರಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇನ್ನು ವರದಿ ಹೇಳಿರುವಂತೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಭೂಮಿಯ ಮಾರುಕಟ್ಟೆ ಬೆಲೆಗಿಂತ ಶೇ 77ರಷ್ಟು ರಿಯಾಯಿತಿ ಸಿಕ್ಕಿದೆ. ಕಾರ್ಖಾನೆಗಳಲ್ಲಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಭೂಮಿ ಪಡೆಯಲಾಗಿದೆ.
ಕಳೆದ ವರ್ಷ ಮಧ್ಯಪ್ರದೇಶದಲ್ಲಿ ನಲವತ್ತು ಎಕರೆಯಷ್ಟು ಭೂಮಿ ಪಡೆದ ಪತಂಜಲಿಗೆ ಒಂದು ಕೋಟಿ ಅಮೆರಿಕನ್ ಡಾಲರ್ ಗೂ ಹೆಚ್ಚು ರಿಯಾಯಿತಿ ಪಡೆದಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications