2ಜಿ ಹಗರಣ: ಮ್ಯಾಕ್ಸಿಸ್ ಸಂಸ್ಥೆಗೆ ನಿರ್ಬಂಧ ಹೇರಿದ ಸುಪ್ರೀಂಕೋರ್ಟ್
ಏರ್ ಸೆಲ್-ಮ್ಯಾಕ್ಸಿಸ್ ನಡುವಿನ 65 ಕೋಟಿ ರು ಡೀಲ್ ನಿಂದ ಯಾವುದೇ ಆದಾಯ ಪಡೆಯದಂತೆ ಮ್ಯಾಕ್ಸಿಸ್ ಸಂಸ್ಥೆಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ಬಂಧ ಹೇರಿದೆ.
ನವದೆಹಲಿ, ಜನವರಿ 06: ಬಹುಕೋಟಿ ಟೆಲಿಕಾಂ ಹಗರಣದಲ್ಲಿ ಬಂಧನ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂದಿನ ಆದೇಶದ ತನಕ ಏರ್ ಸೆಲ್-ಮ್ಯಾಕ್ಸಿಸ್ ನಡುವಿನ 65 ಕೋಟಿ ರು ಡೀಲ್ ನಿಂದ ಯಾವುದೇ ಆದಾಯ ಪಡೆಯದಂತೆ ಮ್ಯಾಕ್ಸಿಸ್ ಸಂಸ್ಥೆಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ಬಂಧ ಹೇರಿದೆ.
ಸುಪ್ರೀಂಕೋರ್ಟಿನ ಈ ಆದೇಶದಿಂದಾಗಿ ಏರ್ ಸೆಲ್-ಮ್ಯಾಕ್ಸಿಸ್ ಹೊಂದಿರುವ 2ಜಿ ತರಂಗ ಗುಚ್ಛ(spectrum)ವನ್ನು ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯೂನಿಕೇಷನ್ ಹಾಗೂ ಭಾರ್ತಿ ಏರ್ ಟೆಲ್ ಗೆ ಮಾರಾಟ ಮಾಡುವ ಪ್ರಕ್ರಿಯೆಗೆ ತಡೆ ಸಿಕ್ಕಿದೆ.[2ಜಿ ಹಗರಣದಲ್ಲಿ ಕರುಣಾನಿಧಿ ಕುಟುಂಬಕ್ಕೆ ಸಿಕ್ಕಿದ್ದೆಷ್ಟು?]

ಮ್ಯಾಕ್ಸಿಸ್ ಸಂಸ್ಥೆಯ ಮಾಲೀಕರು ಭಾರತದಲ್ಲಿ ಡೀಲ್ ಮಾಡುತ್ತಿದ್ದು, ಇಲ್ಲಿನ ಕಾನೂನಿಗೆ ತಲೆಬಾಗಬೇಕಿದೆ. ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಒಪ್ಪಂದದಿಂದ ಯಾವುದೇ ಆದಾಯ ಪಡೆಯದಂತೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯ ನ್ಯಾ. ಜೆಎಸ್ ಖೆಹರ್ ಹೇಳಿದ್ದಾರೆ.[ಮಾರನ್ 700 ಪ್ಲಸ್ ಕೋಟಿ ಆಸ್ತಿ 'ಇಡಿ' ವಶಕ್ಕೆ]
2004 ಹಾಗೂ 2007ರಲ್ಲಿ ಕೇಂದ್ರ ಟೆಲಿಕಾಂ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ಏರ್ ಸೆಲ್ ಗೆ ತರಂಗ ಗುಚ್ಛ ಗುತ್ತಿಗೆ ಸಿಗುವಂತೆ ಮಾಡಿದ್ದರು. ಇದಕ್ಕೆ ಬದಲಾಗಿ ಮಲೇಷಿಯಾ ಮೂಲದ ಮ್ಯಾಕ್ಸಿಸ್ ಕಮ್ಯೂನಿಕೇಷನ್ ಸಂಸ್ಥೆ, ಸನ್ ನೆಟ್ವರ್ಕ್ ಮಾರಲು ಮಾರನ್ ಮುಂದಾಗಿದ್ದರು.ಸನ್ ನೆಟ್ವರ್ಕ್ ನಲ್ಲಿ ಮ್ಯಾಕ್ಸಿಸ್ 69 ಕೋಟಿ ರು ಹೂಡಿಕೆ ಮಾಡಿತ್ತು ಎನ್ನಲಾಗಿದೆ.[ಮಾರನ್ ಬಂಧನಕ್ಕೆ ಮುಂದಾದ ಸಿಬಿಐಗೆ ಸುಪ್ರೀಂ ತಡೆ]
ಸುಮಾರು 549,96,01,793 ಲಂಚ ರೂಪದಲ್ಲಿ ಪಡೆದು ಸನ್ ಡೈರೆಕ್ಟ್ ನಲ್ಲಿ ಬಂಡವಾಳ ರೂಪದಲ್ಲಿ ಹೂಡಲಾಗಿತ್ತು. ಆಸ್ಟ್ರೋ ಆಲ್ ಏಷ್ಯಾ ನೆಟ್ವರ್ಕ್ಸ್ ಒಡೆತನದ ಸೌಥ್ ಏಷ್ಯಾ ಎಂಟರ್ ಟ್ರೈನ್ ಮೆಂಟ್ ಹೋಲಿಂಗ್ಸ್ ಹಣ ಪಾವತಿಸಿರುವ ಬಗ್ಗೆ ಮಾಹಿತಿ, ಪುರಾವೆ ಸಿಕ್ಕಿತು. ಮ್ಯಾಕ್ಸಿಸ್ ಸಂಸ್ಥೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು ಹಾಗೂ ಸುಪ್ರೀಂ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications