ಕೋವಿಡ್ ಲಸಿಕೆ ಕಾರ್ಯಕ್ರಮದಿಂದಾಗಿ ಪಲ್ಸ್ ಪೋಲಿಯೋ ಅನಿರ್ದಿಷ್ಟಾವಧಿ ಮುಂದಕ್ಕೆ
ನವದೆಹಲಿ, ಜನವರಿ 13: ಐದು ವರ್ಷದವರೆಗಿನ ಮಕ್ಕಳಿಗೆ ಪೋಲಿಯೋ ಸಮಸ್ಯೆಯಿಂದ ರಕ್ಷಣೆ ಒದಗಿಸಲು ನೀಡುವ ಪೋಲಿಯೋ ಹನಿಯ ರಾಷ್ಟ್ರೀಯ ಪೋಲಿಯೋ ಪ್ರತಿರಕ್ಷಣಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಪ್ರತಿರಕ್ಷಣಾ ದಿನ (ಎನ್ಐಡಿ) ಅಥವಾ ಪಲ್ಸ್ ಪೋಲಿಯೋ ಪ್ರತಿರಕ್ಷಣಾ ಕಾರ್ಯಕ್ರಮವನ್ನು ದೇಶದಾದ್ಯಂತ ಜನವರಿ 17ಕ್ಕೆ ನಿಗದಿಪಡಿಸಲಾಗಿತ್ತು. ಆದರೆ 'ಅನಿರೀಕ್ಷಿತ ಚಟುವಟಿಕೆಗಳ' ಕಾರಣ 'ಮುಂದಿನ ಸೂಚನೆಯವರೆಗೂ' ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
ಜನವರಿ 9ರಂದು ಎಲ್ಲ ರಾಜ್ಯಗಳಿಗೂ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ, ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡುವ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ.
'ಅನಿರೀಕ್ಷಿತ ಚಟುವಟಿಕೆಗಳ ಕಾರಣ, 2021, ಜನವರಿ 17ರಂದು ನಿಗದಿಪಡಿಸಲಾಗಿದ್ದ ಪೋಲಿಯೋ ಎನ್ಐಡಿ ಕಾರ್ಯಕ್ರಮವನ್ನು ಮುಂದಿನ ನೋಟಿಸ್ವರೆಗೂ ಮುಂದೂಡಲು ನಿರ್ಧರಿಸಲಾಗಿದೆ' ಎಂದು ಎಲ್ಲ ರಾಜ್ಯಗಳ ಆರೋಗ್ಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿಗಳಿಗೆ ಕಳುಹಿಸಿರುವ ಪತ್ರದಲ್ಲಿ ಹೇಳಲಾಗಿದೆ.

ಜನವರಿ 8ರಂದು ಹೇಳಿಕೆ ನೀಡಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜನವರಿ 17ರಂದೇ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದರು. 'ಜನವರಿ 17ರಂದು ನಾವು ರಾಷ್ಟ್ರೀಯ ಪ್ರತಿರಕ್ಷಣಾ ದಿನದ ಪೋಲಿಯೋ ಕಾರ್ಯಕ್ರಮವನ್ನು ಎರಡು ಮೂರು ದಿನಗಳವರೆಗೆ ನಡೆಸುತ್ತೇವೆ' ಎಂದು ಹೇಳಿದ್ದರು.
ದೇಶದಾದ್ಯಂತ ಜ. 16ರಿಂದ ಕೊರೊನಾ ವೈರಸ್ ಲಸಿಕೆ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಆರೋಗ್ಯ ಕಾರ್ಯಕರ್ತರಿಗೆ ಈ ಜವಾಬ್ದಾರಿ ನೀಡಿರುವುದರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications