ಕೋವಿಡ್ ಲಸಿಕೆ ಕಾರ್ಯಕ್ರಮದಿಂದಾಗಿ ಪಲ್ಸ್ ಪೋಲಿಯೋ ಅನಿರ್ದಿಷ್ಟಾವಧಿ ಮುಂದಕ್ಕೆ
ನವದೆಹಲಿ, ಜನವರಿ 13: ಐದು ವರ್ಷದವರೆಗಿನ ಮಕ್ಕಳಿಗೆ ಪೋಲಿಯೋ ಸಮಸ್ಯೆಯಿಂದ ರಕ್ಷಣೆ ಒದಗಿಸಲು ನೀಡುವ ಪೋಲಿಯೋ ಹನಿಯ ರಾಷ್ಟ್ರೀಯ ಪೋಲಿಯೋ ಪ್ರತಿರಕ್ಷಣಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಪ್ರತಿರಕ್ಷಣಾ ದಿನ (ಎನ್ಐಡಿ) ಅಥವಾ ಪಲ್ಸ್ ಪೋಲಿಯೋ ಪ್ರತಿರಕ್ಷಣಾ ಕಾರ್ಯಕ್ರಮವನ್ನು ದೇಶದಾದ್ಯಂತ ಜನವರಿ 17ಕ್ಕೆ ನಿಗದಿಪಡಿಸಲಾಗಿತ್ತು. ಆದರೆ 'ಅನಿರೀಕ್ಷಿತ ಚಟುವಟಿಕೆಗಳ' ಕಾರಣ 'ಮುಂದಿನ ಸೂಚನೆಯವರೆಗೂ' ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
ಜನವರಿ 9ರಂದು ಎಲ್ಲ ರಾಜ್ಯಗಳಿಗೂ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ, ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡುವ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ.
'ಅನಿರೀಕ್ಷಿತ ಚಟುವಟಿಕೆಗಳ ಕಾರಣ, 2021, ಜನವರಿ 17ರಂದು ನಿಗದಿಪಡಿಸಲಾಗಿದ್ದ ಪೋಲಿಯೋ ಎನ್ಐಡಿ ಕಾರ್ಯಕ್ರಮವನ್ನು ಮುಂದಿನ ನೋಟಿಸ್ವರೆಗೂ ಮುಂದೂಡಲು ನಿರ್ಧರಿಸಲಾಗಿದೆ' ಎಂದು ಎಲ್ಲ ರಾಜ್ಯಗಳ ಆರೋಗ್ಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿಗಳಿಗೆ ಕಳುಹಿಸಿರುವ ಪತ್ರದಲ್ಲಿ ಹೇಳಲಾಗಿದೆ.

ಜನವರಿ 8ರಂದು ಹೇಳಿಕೆ ನೀಡಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜನವರಿ 17ರಂದೇ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದರು. 'ಜನವರಿ 17ರಂದು ನಾವು ರಾಷ್ಟ್ರೀಯ ಪ್ರತಿರಕ್ಷಣಾ ದಿನದ ಪೋಲಿಯೋ ಕಾರ್ಯಕ್ರಮವನ್ನು ಎರಡು ಮೂರು ದಿನಗಳವರೆಗೆ ನಡೆಸುತ್ತೇವೆ' ಎಂದು ಹೇಳಿದ್ದರು.
ದೇಶದಾದ್ಯಂತ ಜ. 16ರಿಂದ ಕೊರೊನಾ ವೈರಸ್ ಲಸಿಕೆ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಆರೋಗ್ಯ ಕಾರ್ಯಕರ್ತರಿಗೆ ಈ ಜವಾಬ್ದಾರಿ ನೀಡಿರುವುದರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications