Kedarnath Landslide: ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಭೂಕುಸಿತ: 3 ಸಾವು, 8 ಮಂದಿಗೆ ಗಾಯ
ಡೆಹ್ರಾಡೂನ್, ಜುಲೈ. 21: ಇಂದು ಮುಂಜಾನೆ ನಡೆದ ದುರಂತ ಘಟನೆಯೊಂದರಲ್ಲಿ, ಕೇದಾರನಾಥ ಬಳಿಯ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಭಾನುವಾರ ಚಾರ್ ಧಾಮ್ ಯಾತ್ರೆಯ ವೇಳೆ ಕೇದಾರನಾಥ ಪಾದಚಾರಿ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ.
ಉತ್ತರಾಖಂಡದ ಕೇದಾರನಾಥದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಮಹಾರಾಷ್ಟ್ರದ ಇಬ್ಬರು ಪ್ರವಾಸಿಗರು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಿದ್ಧ ಕೇದಾರನಾಥ ದೇವಾಲಯಕ್ಕೆ ಹೆಸರುವಾಸಿಯಾದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಪಟ್ಟಣದಲ್ಲಿ ಗೌರಿಕುಂಡ್ ಮತ್ತು ಚಿರ್ಬಸಾ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.

ಭಾರೀ ಮಳೆಯಿಂದ ಉಂಟಾದ ನಿರಂತರ ಭೂಕುಸಿತದಿಂದಾಗಿ ಯಾತ್ರಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ. ಗಾಯಾಳು ಯಾತ್ರಾರ್ಥಿಗಳನ್ನು ಅವಶೇಷಗಳಿಂದ ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಮೃತರನ್ನು ನಾಗ್ಪುರದ ಕಿಶೋರ್ ಅರುಣ್ ಪರಾಟೆ (31), ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಸುನೀಲ್ ಮಹಾದೇವ್ ಕಾಳೆ (24) ಮತ್ತು ರುದ್ರಪ್ರಯಾಗದ ತಿಲವಾಡ ನಿವಾಸಿ ಅನುರಾಗ್ ಬಿಷ್ತ್ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ 7:30 ರ ಸುಮಾರಿಗೆ ತುರ್ತು ನಿಯಂತ್ರಣ ಕೊಠಡಿಗೆ ಕೇದಾರನಾಥ ಯಾತ್ರೆ ಮಾರ್ಗ, ಚಿರ್ಬಸಾ ಬಳಿ ದುರಂತ ನಡೆದ ಬಗ್ಗೆ ವರದಿ ಬಂದಿದ್ದು, ಕೆಲವು ಯಾತ್ರಾರ್ಥಿಗಳು ಬೆಟ್ಟದ ತುದಿಯಿಂದ ಬಿದ್ದ ಮಣ್ಣು ಮತ್ತು ಬಂಡೆಗಳ ಅಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಮಾಹಿತಿಯ ಮೇರೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

"ಘಟನಾ ಸ್ಥಳಕ್ಕೆ ಆಗಮಿಸಿದ ಎಸ್ಡಿಆರ್ಎಫ್ ತಂಡವು ಧಾವಿಸಿ ತಕ್ಷಣವೇ ಗಾಯಗೊಂಡ ಎಂಟು ವ್ಯಕ್ತಿಗಳನ್ನು ರಕ್ಷಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿತು. ದುರದೃಷ್ಟವಶಾತ್, ಸ್ಥಳದಲ್ಲಿ ಮೂವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅವರ ಮೃತದೇಹಗಳನ್ನು ಜಿಲ್ಲೆಗೆ ಹಸ್ತಾಂತರಿಸಲಾಗಿದೆ" ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳು ನಡೆಯುತ್ತಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಇತರ ಯಾತ್ರಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ದೃಷ್ಟಿಯಿಂದ ಯಾತ್ರೆಯ ಮಾರ್ಗವನ್ನು ಸ್ವಲ್ಪಮಟ್ಟಿಗೆ ಬದಲಾಯಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications