ಗಲ್ಫ್ ರಾಷ್ಟ್ರಗಳಲ್ಲಿ ಪ್ರತಿ ಎರಡು ದಿನಕ್ಕೆ ಮೂವರು ಆಂಧ್ರದವರ ಸಾವು
ಹೈದರಾಬಾದ್, ಜೂನ್ 27: ಭಾರತದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ವರದಿಯೊಂದು ಎದೆ ನಡುಗಿಸುವ ಮಾಹಿತಿ ಹೊರ ಹಾಕಿದೆ. ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡುವ ಆಂಧ್ರ ಮೂಲದವರು ಪ್ರತಿ ಎರಡು ದಿನಕ್ಕೆ ಮೂವರಂತೆ ಸಾವನ್ನಪ್ಪುತ್ತಿದ್ದಾರಂತೆ. ಆತ್ಮಹತ್ಯೆ, ಅನಾರೋಗ್ಯ ಹಾಗೂ ರಸ್ತೆ ಅಪಘಾತ ಹೀಗೆ ಒಂದೊಂದು ಕಾರಣ.
ಕಳೆದ 3 ವರ್ಷದ ಅವಧಿಯಲ್ಲಿ ಆಂಧ್ರದಿಂದ ತೆರಳಿದ 1656 ಕಾರ್ಮಿಕರು ಗಲ್ಫ್ ನಲ್ಲಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ ಬಹಿರಂಗಪಡಿಸಿದೆ. ಈ ಬಗ್ಗೆ ಲೋಕಸಭೆಯಲ್ಲಿ ಬುಧವಾರ ಕಿರಿಯ ವಿದೇಶಾಂಗ ಸಚಿವ ವಿ.ಮುರಳೀಧರನ್ ತಿಳಿಸಿದ್ದಾರೆ.
ಆಂಧ್ರಪ್ರದೇಶದಿಂದ ತೆರಳಿರುವ ವಲಸಿಗರ ಪ್ಪೈಕಿ ಕಡಪಾ, ಚಿತ್ತೂರು, ಗೋದಾವರಿ ಜಿಲ್ಲೆಯವರೇ ಹೆಚ್ಚು. ಸ್ವಚ್ಛತಾ ಸಿಬ್ಬಂದಿಯಾಗಿ ಹಾಗೂ ಮನೆಗೆಲಸದವರಾಗಿ ಗಲ್ಫ್ ರಾಷ್ಟ್ರಗಳಿಗೆ ತೆರಳಿದವರೇ ಹೆಚ್ಚು. ಮಚಲೀಪಟ್ಣಂನ ಸಂಸದ ವಲ್ಲಭನೇನಿ ಬಾಲಶೌರಿ ಕೇಳಿದ ಪ್ರಶ್ನೆಗೆ ಮುರಳೀಧರನ್ ಉತ್ತರ ನೀಡಿದ್ದಾರೆ.

ಅತಿ ಹೆಚ್ಚಿನ ಸಾವು ಸಂಭವಿಸಿರುವುದು ಕುವೈತ್ ನಲ್ಲಿ. ಆ ನಂತರ ಸೌದಿ ಅರೇಬಿಯಾ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ. ಕಳೆದ ಮೂರು ವರ್ಷಗಳಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಸಾವನ್ನಪ್ಪಿದವರ ಅಂಕಿ- ಅಂಶಗಳ ವಿವರ ಹೀಗಿದೆ:
ಕುವೈತ್ 488
ಸೌದಿ ಅರೇಬಿಯಾ 478
ಯುಎಇ 351
ಒಮನ್ 153
ಕತಾರ್ 108
ಬಹರೇನ್ 78
ಒಟ್ಟು 1656
ಕಾರ್ಮಿಕರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಹಾಗೂ ಅಪಘಾತದಲ್ಲಿ ಮೃತಪಡುವುದನ್ನು ತಡೆಗಟ್ಟಲು ಕಾರ್ಮಿಕರ ಕ್ಯಾಂಪ್ ಗಳಲ್ಲಿ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇದರ ಜತೆಗೆ ಭಾರತೀಯ ಕಾರ್ಮಿಕರಿಗೆ ಹೆಚ್ಚುವರಿ ಕೆಲಸದ ಅವಧಿ, ವೈದ್ಯಕೀಯ ಸೌಲಭ್ಯದ ಕೊರತೆ ಹಾಗೂ ಉಷ್ಣ ಹವೆಗೆ ವಿಪರೀತ ಒಡ್ಡಿಕೊಳ್ಳುವಂಥ ಅಪಾಯಗಳು ಎದುರಿಸುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications