ಸಿಬಿಐ ನಿರ್ದೇಶಕರ ಆಯ್ಕೆ: ಪಟ್ಟಿಯಲ್ಲಿ ಕರ್ನಾಟಕದ ಪ್ರವೀಣ್ ಸೂದ್ ಹೆಸರು
ಕೇಂದ್ರೀಯ ತನಿಖಾ ದಳ (ಸಿಬಿಐ) ಉನ್ನತ ಹುದ್ದೆಗೆ ಮೂವರು ಉನ್ನತ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ ಒಟ್ಟಾಗಿ 3 ಅಧಿಕಾರಿಗಳನ್ನು ಆಯ್ಕೆ ಮಾಡಿದೆ.
ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ ಹೆಸರುಗಳನ್ನು ಪಟ್ಟಿ ಮಾಡಲಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕರ ಪೊಲೀಸ್ ಅಧಿಕಾರಿಯ ಹೆಸರು ಕೂಡಾ ಕಾಣಿಸಿಕೊಂಡಿದೆ. ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶ ಡಿಜಿಪಿ ಸುಧೀರ್ ಸಕ್ಸೆನಾ, ತಾಜ್ ಹಾಸನ್ ಹೆಸರು ಸಿಬಿಐ ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಪ್ರಸ್ತುತ ಸಿಬಿಐನ ನಿರ್ದೇಶಕರಾಗಿರುವ ಸುಬೋದ್ ಕುಮಾರ್ ಜಸ್ವಾಲ್ರ 2 ವರ್ಷದ ಅವಧಿಯು ಮೇ 25ರಂದು ಕೊನೆಯಾಗುತ್ತದೆ. ಈ ಅವಧಿ ಮುಕ್ತಾಯುಕ್ಕೂ ಮುನ್ನ ನೂತನ ನಿರ್ದೇಶಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪಟ್ಟಿಯಲ್ಲಿ ಕಂಡು ಬಂದಿರುವ ಕರ್ನಾಟಕದ ಪ್ರವೀಣ್ ಸೂದ್ ಬಗ್ಗೆ ಇಲ್ಲಿದೆ ವಿವರ...
ಪ್ರವೀಣ್ ಸೂದ್ ಬಗ್ಗೆ ತಿಳಿಯಿರಿ
ಪ್ರವೀಣ್ ಸೂದ್ 1986ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಸಿಬಿಐ ನಿರ್ದೇಶಕರ ಹುದ್ದೆಯ ಆಯ್ಕೆ ಪಟ್ಟಿಯಲ್ಲಿ ಇವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ಪ್ರವೀಣ್ ಸೂದ್ ಭಾರೀ ಚರ್ಚೆಗೆ ಒಳಗಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಸೂದ್ ಕಾಪಾಡುತ್ತಾರೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು.
ಬಿಜೆಪಿ ಸರ್ಕಾರವನ್ನು ಕರ್ನಾಟಕದಲ್ಲಿ ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿರುವ ಪ್ರವೀಣ್ ಸೂದ್ರನ್ನು ಬಂಧನ ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇನ್ನು ಪ್ರವೀಣ್ ಸೂದ್ ಕಾಂಗ್ರೆಸ್ ನಾಯಕರುಗಳ ವಿರುದ್ಧ ಕೇಸ್ ದಾಖಲು ಮಾಡುತ್ತಿದ್ದಾರೆ ಎಂದು ಕೂಡಾ ಡಿಕೆ ಶಿವಕುಮಾರ್ ಆರೋಪಿಸಿದ್ದರು.
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ. ಸಭೆಯಲ್ಲಿ, ಹೊಸ ಕೇಂದ್ರ ವಿಜಿಲೆನ್ಸ್ ಕಮಿಷನರ್ ಮತ್ತು ಸದಸ್ಯ ಲೋಕಪಾಲ ಆಗಿ ನೇಮಕಗೊಳ್ಳುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications