ಸಿಬಿಐ ನಿರ್ದೇಶಕರ ಆಯ್ಕೆ: ಪಟ್ಟಿಯಲ್ಲಿ ಕರ್ನಾಟಕದ ಪ್ರವೀಣ್ ಸೂದ್ ಹೆಸರು
ಕೇಂದ್ರೀಯ ತನಿಖಾ ದಳ (ಸಿಬಿಐ) ಉನ್ನತ ಹುದ್ದೆಗೆ ಮೂವರು ಉನ್ನತ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ ಒಟ್ಟಾಗಿ 3 ಅಧಿಕಾರಿಗಳನ್ನು ಆಯ್ಕೆ ಮಾಡಿದೆ.
ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ ಹೆಸರುಗಳನ್ನು ಪಟ್ಟಿ ಮಾಡಲಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕರ ಪೊಲೀಸ್ ಅಧಿಕಾರಿಯ ಹೆಸರು ಕೂಡಾ ಕಾಣಿಸಿಕೊಂಡಿದೆ. ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶ ಡಿಜಿಪಿ ಸುಧೀರ್ ಸಕ್ಸೆನಾ, ತಾಜ್ ಹಾಸನ್ ಹೆಸರು ಸಿಬಿಐ ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಪ್ರಸ್ತುತ ಸಿಬಿಐನ ನಿರ್ದೇಶಕರಾಗಿರುವ ಸುಬೋದ್ ಕುಮಾರ್ ಜಸ್ವಾಲ್ರ 2 ವರ್ಷದ ಅವಧಿಯು ಮೇ 25ರಂದು ಕೊನೆಯಾಗುತ್ತದೆ. ಈ ಅವಧಿ ಮುಕ್ತಾಯುಕ್ಕೂ ಮುನ್ನ ನೂತನ ನಿರ್ದೇಶಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪಟ್ಟಿಯಲ್ಲಿ ಕಂಡು ಬಂದಿರುವ ಕರ್ನಾಟಕದ ಪ್ರವೀಣ್ ಸೂದ್ ಬಗ್ಗೆ ಇಲ್ಲಿದೆ ವಿವರ...
ಪ್ರವೀಣ್ ಸೂದ್ ಬಗ್ಗೆ ತಿಳಿಯಿರಿ
ಪ್ರವೀಣ್ ಸೂದ್ 1986ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಸಿಬಿಐ ನಿರ್ದೇಶಕರ ಹುದ್ದೆಯ ಆಯ್ಕೆ ಪಟ್ಟಿಯಲ್ಲಿ ಇವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ಪ್ರವೀಣ್ ಸೂದ್ ಭಾರೀ ಚರ್ಚೆಗೆ ಒಳಗಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಸೂದ್ ಕಾಪಾಡುತ್ತಾರೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು.
ಬಿಜೆಪಿ ಸರ್ಕಾರವನ್ನು ಕರ್ನಾಟಕದಲ್ಲಿ ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿರುವ ಪ್ರವೀಣ್ ಸೂದ್ರನ್ನು ಬಂಧನ ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇನ್ನು ಪ್ರವೀಣ್ ಸೂದ್ ಕಾಂಗ್ರೆಸ್ ನಾಯಕರುಗಳ ವಿರುದ್ಧ ಕೇಸ್ ದಾಖಲು ಮಾಡುತ್ತಿದ್ದಾರೆ ಎಂದು ಕೂಡಾ ಡಿಕೆ ಶಿವಕುಮಾರ್ ಆರೋಪಿಸಿದ್ದರು.
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ. ಸಭೆಯಲ್ಲಿ, ಹೊಸ ಕೇಂದ್ರ ವಿಜಿಲೆನ್ಸ್ ಕಮಿಷನರ್ ಮತ್ತು ಸದಸ್ಯ ಲೋಕಪಾಲ ಆಗಿ ನೇಮಕಗೊಳ್ಳುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 3ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 2ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್












Click it and Unblock the Notifications