ಯಾವ ಸಾಧನೆಗೆ ಈ ಸಂಭ್ರಮ?: ಕೇಂದ್ರಕ್ಕೆ ರಾಹುಲ್ ಪ್ರಶ್ನೆ
ನವದೆಹಲಿ, ಮೇ 16: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಅದರ ಸಂಭ್ರಮಾಚರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
''ಕಳೆದ ಮೂರು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮ (ಬಿಜೆಪಿ) ಸರ್ಕಾರದಿಂದ ನಿರುದ್ಯೋಗ ಹೆಚ್ಚಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗಡಿ ಭಾಗದಲ್ಲಿ ಸೈನಿಕರು ಜೀವ ತೆರುತ್ತಿದ್ದಾರೆ. ನಿಮ್ಮ ಆಡಳಿತದಲ್ಲಿ ಯಾರಿಗೆ ಸುಖವಿದೆ? ಪರಿಸ್ಥಿತಿ ಹೀಗಿರುವಾಗ ಯಾವ ನೈತಿಕತೆಯ ಆಧಾರದ ಮೇಲೆ ಸಂಭ್ರಮಾಚರಣೆ ಮಾಡುತ್ತೀರಿ?'' ಎಂದು ಪ್ರಶ್ನಿಸಿದ್ದಾರೆ.[ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗೆ ಸಂಕಷ್ಟ]

ತಮ್ಮ ಮಾತುಗಳನ್ನು ಮುಂದುವರಿಸಿದ ಅವರು, ''2013ರಲ್ಲಿ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಅನೇಕ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರಿ. ಜನರು ನಿಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು ಆರಿಸಿದರು. ಆದರೆ, ಆ ವಾಗ್ದಾನಗಳ್ಯಾವುವೂ ಈಡೇರಿಲ್ಲ. ಆ ಐತಿಹಾಸಿಕ ಜನಾದೇಶಕ್ಕೆ ದ್ರೋಹ ಬಗೆದಿದ್ದೀರಿ'' ಎಂದು ಅವರು ಬಿಜೆಪಿಯನ್ನು ಆಕ್ಷೇಪಿಸಿದರು.[ನ್ಯಾಷನಲ್ ಹೆರಾಲ್ಡ್: ಸೋನಿಯಾ, ರಾಹುಲ್ ವಿಚಾರಣೆಗೆ ಕೋರ್ಟ್ ಒಪ್ಪಿಗೆ]
ಕೇಂದ್ರದಲ್ಲಿ ಮೂರು ವರ್ಷಗಳ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿಯು ದೇಶಾದ್ಯಂತ 'MODI FEST'ಎಂಬ ಹೆಸರಿನಲ್ಲಿ ಸಂಭ್ರಮಾಚರಣೆ ನಡೆಸಲು ತೀರ್ಮಾನಿಸಿದೆ. ಈ ಸಂಭ್ರಮಾಚರಣೆಯ ಶೀರ್ಷಿಕೆಯಲ್ಲಿ ಉಲ್ಲೇಖಿಸಲಾಗಿರುವ MODI ಎಂಬ ಪದದ ಅರ್ಥ Making of Developing India ಎಂದು ಸ್ಪಷ್ಟಪಡಿಸಿದೆ. ಆದರೂ, ವಿಪಕ್ಷಗಳು ಅದನ್ನು ಮೋದಿಯವರ ಹೆಸರನ್ನು ಅನೇರವಾಗಿ ಬಳಕೆ ಮಾಡಿಕೊಂಡು ಉತ್ಸವ ಮಾಡಲು ಸಿದ್ಧವಾಗಿದೆ ಎಂದು ಆರೋಪಿಸಿವೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications