ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

30 ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ: ಕಮಲ್ ನಾಥ್

|
Google Oneindia Kannada News

ಭೋಪಾಲ್, ಸೆಪ್ಟೆಂಬರ್ 17: '30 ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ' ಎನ್ನುವ ಮೂಲಕ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಯೂಟರ್ನ್ ತೆಗೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಹೇಳಿಕೆ ನೀಡಿದ್ದ ಕಮಲ್ ನಾಥ್, ಮೂವತ್ತು ಶಾಸಕರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ನನ್ನ ರಕ್ತಕ್ಕಾಗಿ ಊಳಿಡುತ್ತಿದೆ: ಮಧ್ಯಪ್ರದೇಶ ಮುಖ್ಯಮಂತ್ರಿ ಕಾಂಗ್ರೆಸ್ ನನ್ನ ರಕ್ತಕ್ಕಾಗಿ ಊಳಿಡುತ್ತಿದೆ: ಮಧ್ಯಪ್ರದೇಶ ಮುಖ್ಯಮಂತ್ರಿ

ಅವರ ಈ ಹೇಳಿಕೆ ಬಿಜೆಪಿ ವಲಯದಲ್ಲಿ ಸಾಕಷ್ಟು ವಿವಾದ ಎಬ್ಬಿಸಿದ ಬೆನ್ನಲ್ಲೇ ತಮ್ಮ ಮಾತನ್ನು ಬದಲಾಯಿಸಿ, 'ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ. ಆದರೆ ಯಾಕಾಗಿ ಸಂಪರ್ಕದಲ್ಲಿದ್ದಾರೆ ಎಂಬುದನ್ನು ನಾನು ಈಗಲೇ ಹೇಳಲು ಇಷ್ಟಪಡುವುದಿಲ್ಲ. ಅದು ಕ್ರಮೇಣ ಗೊತ್ತಾಗುತ್ತದೆ' ಎಂದಿದ್ದಾರೆ.

30 BJP MLAs are only in contact: Kamal Nath

ತೆಲಂಗಾಣದಲ್ಲೇ ಮೊದಲು ಚುನಾವಣೆ, 4 ರಾಜ್ಯಗಳಲ್ಲಿ ನಂತರತೆಲಂಗಾಣದಲ್ಲೇ ಮೊದಲು ಚುನಾವಣೆ, 4 ರಾಜ್ಯಗಳಲ್ಲಿ ನಂತರ

ಇದೇ ಡಿಸೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಟಿಕೆಟ್ ರಾಜಕಾರಣ ಆರಂಭವಾಗಿದೆ. ಇದುವರೆಗೂ 2000 ಕ್ಕೂ ಹೆಚ್ಚು ಜನರು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 30 ಬಿಜೆಪಿ ಶಾಸಕರೂ ಇದ್ದಾರೆ ಎಂದು ಕಮಲ್ ನಾಥ್ ಹೇಳಿದ್ದರು.

English summary
Madhya Pradesh Congress chief Kamal Nath has taken a u-turn on his earlier statement that 30 Bharatiya Janata Party (BJP) Member of Legislative Assembly (MLAs) have been lobbying to get Congress tickets for the upcoming assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X