ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರಕ್ಕೆ 30 ದೇಶದ ಮಾನ್ಯತೆ
ನವದೆಹಲಿ, ಅಕ್ಟೋಬರ್ 14; ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕಾ ಅಭಿಯಾನವನ್ನು ಭಾರತ ನಡೆಸುತ್ತಿದೆ. 30 ವಿವಿಧ ರಾಷ್ಟ್ರಗಳು ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರಕ್ಕೆ ಮಾನ್ಯತೆ ನೀಡಲು ಒಪ್ಪಿಕೊಂಡಿವೆ.
ಭಾರತ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆ ನೀಡುತ್ತಿದೆ. ಲಸಿಕೆ ಪಡೆದವರಿಗೆ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಗುತ್ತಿದೆ. ದೇಶದ ಕೋವಿಡ್ ಲಸಿಕೆ ಪ್ರಮಾಣ ಪತ್ರಕ್ಕೆ ವಿಶ್ವದ ವಿವಿಧ ರಾಷ್ಟ್ರಗಳ ಮಾನ್ಯತೆ ಸಿಕ್ಕಿದೆ.
ಯುಕೆ, ಫ್ರಾನ್ಸ್, ಜರ್ಮನಿ, ನೇಪಾಳ, ಲೆಬೆನಾನ್, ಅಮೆರಿಕ, ಉಕ್ರೇನ್, ಬೆಲ್ಜಿಯಂ, ಹಂಗೇರಿ, ಸೈಬಿರಿಯಾ ಸೇರಿದಂತೆ 30 ವಿವಿಧ ರಾಷ್ಟ್ರಗಳು ಕೋವಿಡ್ ಲಸಿಕಾ ಪ್ರಮಾಣ ಪತ್ರಕ್ಕೆ ಮಾನ್ಯತೆ ನೀಡಲು ಒಪ್ಪಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕೋವ್ಯಾಕ್ಸಿನ್ ಲಸಿಕೆ ಪ್ರಮಾಣ ಪತ್ರಕ್ಕೆ ಇರಾನ್, ಮೆಕ್ಸಿಕೋ, ಜಿಂಬಾಬ್ವೆ, ಫಿಲಿಫೈನ್ಸ್ ಸೇರಿದಂತೆ 11 ದೇಶಗಳು ಒಪ್ಪಿಗೆ ಕೊಟ್ಟಿವೆ. ಜರ್ಮನಿ, ಎಸ್ಟೋನಿಯಾ, ಗ್ರೀಸ್, ಬೆಲಾರಸ್, ಹಂಗೇರಿ, ಲೆಬನಾನ್ ದೇಶಗಳಲ್ಲಿ ಪ್ರಯಾಣದ ಉದ್ದೇಶಗಳಿಗಾಗಿ ಕೋವಾಕ್ಸಿನ್ ಲಸಿಕೆ ಪ್ರಮಾಣ ಪತ್ರಕ್ಕೆ ಮಾನ್ಯತೆ ನೀಡಲಾಗಿದೆ.
ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ಅಭಿಯಾನವನ್ನು ಭಾರತ ಕೈಗೊಂಡಿದೆ. ಗುರುವಾರದ ತನಕ 97 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಗುರುವಾರ ಒಂದೇ ದಿನ 27 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಭಾರತದಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ 100 ಕೋಟಿ ಕರೋನಾ ಲಸಿಕೆ ಹಾಕಿರುವುದರ ಪ್ರತೀಕವಾಗಿ ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯವು ದೇಶಾದ್ಯಂತ 100 ಸ್ಮಾರಕಗಳನ್ನು ಗುರುತಿಸಿ ಅವುಗಳಿಗೆ ರಾತ್ರಿ ದೀಪದ ಅಲಂಕಾರವನ್ನು ಮಾಡಲು ನಿರ್ಧರಿಸಿದೆ.
ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾಗಿರುವ ಸ್ಮಾರಕಗಳಿಗೆ ದೀಪಾಲಂಕಾ ಮಾಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. 100 ಸ್ಮಾರಕಗಳಿಗೆ ಮೂರು ಬಣ್ಣದ, ರಾಷ್ಟ್ರಧ್ವಜದ ಮಾದರಿಯ ದೀಪಾಲಂಕಾರವನ್ನು ಮಾಡಿ, ರಾಷ್ಟ್ರಗೀತೆಯನ್ನು ನಿರಂತರವಾಗಿ ಕಡಿಮೆ ಧ್ವನಿಯಲ್ಲಿ ನುಡಿಸಲಾಗುತ್ತದೆ.
ಭಾರತ ಸರ್ಕಾರ ಕೋವಿಡ್ ಲಸಿಕಾ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಹೊಸ ಲಸಿಕಾ ಅಭಿಯಾನವನ್ನು 2021ರ ಜೂನ್ 21ರಿಂದ ಆರಂಭಿಸಿದೆ. ಈ ಅಭಿಯಾನದಡಿ ಹೆಚ್ಚು ಲಸಿಕೆ ಲಭ್ಯತೆಯ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡಲಾಗುತ್ತದೆ.
ದೇಶವ್ಯಾಪಿ ಲಸಿಕಾ ಅಭಿಯಾನದ ಅಂಗವಾಗಿ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ಒದಗಿಸುತ್ತಿದೆ. ಕೇಂದ್ರ ಸರ್ಕಾರ ದೇಶದ ಲಸಿಕೆ ಉತ್ಪಾದಕರಿಂದ ಶೇ 75 ರಷ್ಟು ಲಸಿಕೆಯನ್ನು ಖರೀದಿಸುತ್ತಿದೆ ಮತ್ತು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದೆ.
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications