Get Updates
Get notified of breaking news, exclusive insights, and must-see stories!

ಚರಂಡಿ ಸ್ವಚ್ಛಗೊಳಿಸುವ ವೇಳೆ 5 ವರ್ಷಗಳಲ್ಲಿ 321 ಜನ ಸಾವು: ಲೋಕಸಭೆಗೆ ಸರ್ಕಾರ

ನವದೆಹಲಿ ಡಿಸೆಂಬರ್ 8: ಭಾರತದಲ್ಲಿ ಜಾಡಮಾಲಿ ವ್ಯವಸ್ಥೆ(manual scavenging) ಅನ್ನು ರದ್ದುಗೊಳಿಸಲಾಗಿದೆ. ಹೀಗಿದ್ದರೂ ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕನಿಷ್ಠ 321 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸದಸ್ಯ ಗಿರೀಶ್ ಚಂದ್ರ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೆಸಿನೇನಿ ಶ್ರೀನಿವಾಸ್ ಅವರ ಪ್ರಶ್ನೆಗಳಿಗೆ ಉತ್ತರವಾಗಿ, ಪ್ರಸ್ತುತ ಭಾರತದಲ್ಲಿ ಜಾಡಮಾಲಿ ವ್ಯವಸ್ಥೆ ತೊಡಗಿಸಿಕೊಂಡಿರುವ ಯಾವುದೇ ವರದಿಗಳಿಲ್ಲ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ. ಜೊತೆಗೆ "ಹಸ್ತಚಾಲಿತ ಕಸವನ್ನು ರದ್ದುಗೊಳಿಸುವ ಗುರಿಯನ್ನು ಸಾಧಿಸಲು ಸರ್ಕಾರಕ್ಕೆ ಸಾಧ್ಯವಾಗಿದೆ. ಜೊತೆಗೆ ಸರ್ಕಾರ ಅರ್ಹವಾದ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪುನರ್ವಸತಿಗಾಗಿ ಸಹಾಯವನ್ನು ಒದಗಿಸಲಾಗಿದೆ" ಎಂದು ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ್ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

2013 ರ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ಮತ್ತು 2013 ರ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿ ಕಾಯಿದೆಯ ಪ್ರಕಾರ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ಕೈಯಾರೆ ಸ್ವಚ್ಛಗೊಳಿಸುವುದು, ಸಾಗಿಸುವುದು, ವಿಲೇವಾರಿ ಮಾಡುವುದು ಅಥವಾ ಯಾವುದೇ ರೀತಿಯಲ್ಲಿ ಮಾನವ ಮಲವಿಸರ್ಜನೆಯನ್ನು ಅನೈರ್ಮಲ್ಯದ ಶೌಚಾಲಯದಲ್ಲಿ ನಿರ್ವಹಿಸುವುದನ್ನು ಬಹುತೇಕ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು. ಮಾತ್ರವಲ್ಲದೆ ಡಿಸೆಂಬರ್ 24, 2020 ರಂದು ಬಿಡುಗಡೆಯಾದ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಅನೈರ್ಮಲ್ಯ ಶೌಚಾಲಯಗಳು ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳನ್ನು ಗುರುತಿಸಿ ಕೆಲಸ ನೀಡುವಂತಹ ಯಾವುದೇ ಪ್ರಕರಣ ಕಂಡುಹಿಡಿಯಲಾಗಿಲ್ಲ. ಆದ್ದರಿಂದ, ಪ್ರಸ್ತುತ ದೇಶದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅಭ್ಯಾಸದ ಯಾವುದೇ ವರದಿಯಿಲ್ಲ" ಎಂದು ಅವರು ಹೇಳಿದರು.

 321 die cleaning sewers in 5 years: Govt to Lok Sabha

ಆದರೆ, ಕಾಂಗ್ರೆಸ್ ಸಂಸದ ಬಿ ಮಾಣಿಕಂ ಟ್ಯಾಗೋರ್ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಕಿರಿಯ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠಾವಳೆ, ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 321 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಮಾನವ ಮಲವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಜನರು ಸಾಯುವ ಯಾವುದೇ ವರದಿ ಇಲ್ಲ ಮತ್ತು ಸರ್ಕಾರವು ಕಾನೂನುಗಳನ್ನು ಕಠಿಣಗೊಳಿಸುವ ಬಗ್ಗೆ ಯೋಚಿಸುತ್ತಿಲ್ಲ ಎಂದು ಅವರು ಹೇಳಿದರು.

"ಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳಲ್ಲಿ ನಿಗದಿತ ಸುರಕ್ಷತಾ ಕ್ರಮಗಳು ಅನುಸರಿಸದ ಕಾರಣ ಈ ಘಟನೆಗಳು ನಡೆದಿವೆ" ಎಂದು ಅವರು ತಮ್ಮ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ. 2019 ರಲ್ಲಿ ಅತಿ ಹೆಚ್ಚು ಅಂದರೆ 119 ಜನರು ಸಾವನ್ನಪ್ಪಿದರು. ಆದರೆ 19, 2020 ರಲ್ಲಿ ಕಡಿಮೆ ಜನರು ಸಾವನ್ನಪ್ಪಿದ್ದಾರೆ. ಆದರೂ ತಜ್ಞರು ಮೂರು ತಿಂಗಳ ಕಡಿಮೆ ವರದಿಗೆ ಲಾಕ್‌ಡೌನ್ ಕಾರಣವೆಂದು ಹೇಳಿದ್ದಾರೆ.

ಭಾರತದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದೆ. 1993 ರಲ್ಲಿ ಜಾತಿ ಆಧಾರಿತ ಆಚರಣೆಯನ್ನು ನಿಷೇಧಿಸಲಾಯಿತು. ಆದರೆ ಕಾರ್ಯಕರ್ತರು ಅದನ್ನು ರಹಸ್ಯವಾಗಿ ಮತ್ತು ಬಹಿರಂಗವಾಗಿ ಮುಂದುವರೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾನವ ಮಲವನ್ನು ಕೈಯಿಂದ ಸ್ವಚ್ಛಗೊಳಿಸುವ ಜಾತಿ ಆಧಾರಿತ ಅಭ್ಯಾಸವನ್ನು ಹಾಗೂ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದನ್ನು ಸರ್ಕಾರವು ಪ್ರತ್ಯೇಕಿಸುತ್ತದೆ. ಆದರೂ ಎರಡನೆಯದು (ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದು) ಈಗ ನಿಷೇಧಿತ ಅಭ್ಯಾಸ ಎಂದು ತಜ್ಞರು ಸೂಚಿಸುತ್ತಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯ ಜಗದಾಂಬಿಕಾ ಪಾಲ್ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅಠಾವಳೆ, 2013 ರ ಕಾನೂನಿನ ಅನುಷ್ಠಾನವನ್ನು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು. "ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನಿಂದಾಗಿ ಅಂತಹ ಯಾವುದೇ ಸಾವುನೋವುಗಳು ವರದಿಯಾಗಿಲ್ಲ" ಎಂದು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+