ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆ: 34 ಮಂದಿ ಬಲಿ,ಕೇಂದ್ರದ ಪರಿಹಾರ

ನವದೆಹಲಿ, ಏ.17: ಕಳೆದ 48 ಗಂಟೆಗಳಿಂದ ನಾಲ್ಕು ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಇದುವರೆಗೆ 34 ಮಂದಿ ಬಲಿಯಾಗಿದ್ದಾರೆ.

ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಗಾಳಿ ಮಳೆಗೆ ಕೆಲವು ಮಣ್ಣಿನಿಂದ ನಿರ್ಮಿಸಲಾಗಿದ್ದ ಮನೆಗಳು ಧರೆಗುರುಳಿದೆ.

34 dead as rain strong winds wreak havoc in four states

ಮಂಗಳವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ಗುಜರಾತ್​​ನಲ್ಲಿ 9 ಮಂದಿ, , ರಾಜಸ್ಥಾನದಲ್ಲಿ 6, ಮಧ್ಯಪ್ರದೇಶದಲ್ಲಿ 16 ಜನ ಪ್ರಾಣಕಳೆದುಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ರಾಜಸ್ತಾನದಲ್ಲಿ ಆಲಿಕಲ್ಲು ಮಳೆಗೆ 300 ಹಳ್ಳಿಗಳಿಗೆ ತೊಂದರೆ ಉಂಟಾಗಿದೆ.

ಪ್ರಧಾನಿ ತವರಿನಲ್ಲಿ ಸುರಿದ ಅಕಾಲಿಕ ಮಳೆಗೆ ಮೋದಿ ಆತಂಕ ವ್ಯಕ್ತಪಡಿಸಿದ್ದು, ಹಾನಿಯಿಂದಾಗಿ ಜೀವ ಕಳೆದುಕೊಂಡ ಕುಟುಂಬಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡರವರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಟ್ವೀಟ್​ ಮಾಡಿದ್ದಾರೆ.

ಮೇ ತಿಂಗಳ ಅಂತ್ಯಕ್ಕೆ ಭಾರತದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ 2019ನೇ ಸಾಲಿನ ಮುಂಗಾರಿನ ಬಗ್ಗೆ ವಿವರಣೆ ನೀಡಿದೆ. ಈ ಬಾರಿಯ ಮುಂಗಾರಿನಲ್ಲಿ ಸಾಮಾನ್ಯ ಮಳೆಯಾಗಲಿದ್ದು, ನೈಋತ್ಯ ಮಾನ್ಸೂನ್ ಮಾರುತಗಳಿಂದಲೂ ಸಾಮಾನ್ಯ ಮಳೆಯಾಗಲಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+