Lasya Nanditha: ಭೀಕರ ಕಾರು ಅಪಘಾತಕ್ಕೆ 37 ವರ್ಷದ ಯುವ ಶಾಸಕಿ ಲಾಸ್ಯ ನಂದಿತಾ ಬಲಿ
ಹೈದರಾಬಾದ್, ಫೆಬ್ರವರಿ.23: ಸಿಕಂದರಾಬಾದ್ ಕಂಟೋನ್ಮೆಂಟ್ ಪ್ರತಿನಿಧಿಸುವ 37 ವರ್ಷದ ಯುವ ಶಾಸಕಿ ಜಿ.ಲಾಸ್ಯ ನಂದಿತಾ ಶುಕ್ರವಾರ ಬೆಳಗ್ಗೆ ಹೈದರಾಬಾದ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಪತಂಚೇರು ಬಳಿಯ ಹೊರ ವರ್ತುಲ ಸಂಚಾರ (ಒಆರ್ಆರ್) ನಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಾಫಿಕ್ ತಡೆಗೋಡೆಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.
ಶಾಸಕಿ ಲಾಸ್ಯ ನಂದಿತಾ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ವಾಹನ ನಿಯಂತ್ರಣ ಕಳೆದುಕೊಂಡು ಔಟರ್ ರಿಂಗ್ ರಸ್ತೆಯ ಎಡಭಾಗದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. 37 ವರ್ಷದ ಯುವ ಬಿಆರ್ಎಸ್ ಶಾಸಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.

ಆಕೆಯ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯದ ದೃಶ್ಯಗಳಲ್ಲಿ ಮೃತರ ತಲೆಗೆ ತೀವ್ರವಾದ ಪೆಟ್ಟು ಆಗಿರುವುದನ್ನು ತೋರಿಸಿದೆ. ದೃಶ್ಯಗಳ ಪ್ರಕಾರ, ಅಪಘಾತದ ಸಮಯದಲ್ಲಿ ಶಾಸಕಿ ಲಾಸ್ಯ ನಂದಿತಾ ಎರಡನೇ ಸಾಲಿನ ಸೀಟಿನಲ್ಲಿ ಕುಳಿತಿದ್ದರು.
ಇತ್ತೀಚೆಗಷ್ಟೇ ಲಾಸ್ಯ ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್ಎಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನಲ್ಗೊಂಡಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ಈ ಘಟನೆಯಲ್ಲಿ ನಲ್ಗೊಂಡ ಜಿಲ್ಲೆಯ ನಾರ್ಕೆಟ್ಪಲ್ಲಿಯಲ್ಲಿ ಗೃಹರಕ್ಷಕ ಜಿ ಕಿಶೋರ್ ಅವರಿಗೆ ಕಾರು ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.
ನವೆಂಬರ್ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಓವರ್ಲೋಡ್ ಆಗಿದ್ದ ಲಿಫ್ಟ್ ನೆಲಮಾಳಿಗೆಗೆ ಬಿದ್ದ ಘಟನೆಯಲ್ಲಿಯೂ ಅರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.

ಮೃತ ಶಾಸಕಿ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಐದು ಬಾರಿ ಬಿಆರ್ಎಸ್ ಶಾಸಕರಾಗಿದ್ದ ಜಿ ಸಾಯಣ್ಣ ಅವರ ಮಗಳು. ಕಳೆದ ವರ್ಷ ಫೆಬ್ರವರಿ 19 ರಂದು ತಮ್ಮ 72 ನೇ ವಯಸ್ಸಿನಲ್ಲಿ ಆರೋಗ್ಯ ಸಮಸ್ಯೆಗಳಿಂದ ನಿಧನರಾದರು. ಸಾಯಣ್ಣನ ಮರಣದ ನಂತರ, ಬಿಆರ್ಎಸ್ ಪಕ್ಷವು ನವೆಂಬರ್ 2023 ರಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಅವರ ಮಗಳು ಲಾಸ್ಯಾ ಅವರನ್ನು ಕಣಕ್ಕಿಳಿಸಿತು, ಅವರು ಗೆಲುವು ದಾಖಲಿಸಿದ್ದರು.
2016 ರಲ್ಲಿ ನಡೆದ GHMC ಚುನಾವಣೆಯಲ್ಲಿ ಅವರು ಕವಾಡಿಗುಡದಿಂದ ಕಾರ್ಪೊರೇಟರ್ ಆಗಿ ಗೆದ್ದಿದ್ದಾರೆ. ಬಿಆರ್ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು ಲಾಸ್ಯ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications