ರಸ್ತೆಗಳಲ್ಲಿ ಮಧ್ಯಾಹ್ನ 3 ರಿಂದ ರಾತ್ರಿ 9 ಗಂಟೆವರೆಗೆ ಇರುವುದು ಅತ್ಯಂತ ಅಪಾಯಕಾರಿ
ನವದೆಹಲಿ, ಜ. 02: ರಸ್ತೆ ಅಪಘಾತಗಳ ಬಗ್ಗೆ ಸರ್ಕಾರವು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಕಳೆದ ಐದು ವರ್ಷಗಳಲ್ಲಿ ನಡೆದ ರಸ್ತೆ ಅಪಘಾತಗಳನ್ನು ಗಮನಿಸಿದ 2021 ರಲ್ಲಿ ಮಧ್ಯಾಹ್ನ 3 ರಿಂದ ರಾತ್ರಿ 9 ಗಂಟೆವರೆಗೆ ಅತೀ ಹೆಚ್ಚು ಅವಘಡಗಳು ಸಂಭವಿಸಿವೆ ಎಂದು ಹೇಳಿದೆ.
ಸಂಜೆ 6 ರಿಂದ ರಾತ್ರಿ 9 ಗಂಟೆಯ ನಡುವಿನ ಸಮಯದಲ್ಲಿ ಗರಿಷ್ಠ ಸಂಖ್ಯೆಯ ರಸ್ತೆ ಅಪಘಾತಗಳು ವರದಿಯಾಗಿವೆ. ಮಧ್ಯಾಹ್ನ 3 ರಿಂದ ಸಂಜೆ 6 ರ ನಡುವಿನ ಅವಧಿಯಲ್ಲಿ ಎರಡನೇ ಅತ್ಯಧಿಕ ಅಪಘಾತಗಳು ಸಂಭವಿಸಿವೆ.
ಒಟ್ಟು ದಾಖಲಾದ ರಸ್ತೆ ಅಪಘಾತಗಳಲ್ಲಿ ಸುಮಾರು 39% ನಷ್ಟು ಮಧ್ಯಾಹ್ನ 3 ರಿಂದ ರಾತ್ರಿ 9 ಗಂಟೆಯ ಸಮಯದಲ್ಲಿ ನಡೆದಿದ್ದು, ಈ ಸಮಯದಲ್ಲಿ ರಸ್ತೆಯಲ್ಲಿರುವುದು ಅತ್ಯಂತ ಅಪಾಯಕಾರಿಯಾಗಿದೆ.

ಮತ್ತೊಂದೆಡೆ, 2021 ರಲ್ಲಿ ದಾಖಲಾದ ಒಟ್ಟು ರಸ್ತೆ ಅಪಘಾತಗಳಲ್ಲಿ 10% ಕ್ಕಿಂತ ಕಡಿಮೆಯಿರುವ ಕಾರಣ ಮಧ್ಯರಾತ್ರಿ 12 ರಿಂದ ಬೆಳಗಿನ 6 ಗಂಟೆಯ ಅವಧಿಯನ್ನು ಸುರಕ್ಷಿತವೆಂದು ಪರಿಗಣಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 'ಭಾರತದಲ್ಲಿ ರಸ್ತೆ ಅಪಘಾತಗಳು - 2021' ಎಂಬ ಶೀರ್ಷಿಕೆ ಅಡಿಯಲ್ಲಿ ವಾರ್ಷಿಕ ವರದಿ ಬಿಡುಗಡೆ ಮಾಡಿದೆ.
ಇನ್ನು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳಿಂದ ಉಂಟಾದ ಅಧಿಕ ಸಾವುಗಳು ಉತ್ತರ ಪ್ರದೇಶದಲ್ಲಿ ವರದಿಯಾಗಿವೆ. 2021 ರಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ತಮಿಳುನಾಡಿನಲ್ಲಿ ಸಂಭವಿಸಿವೆ.
ಈ ವರದಿಯಲ್ಲಿ ರಸ್ತೆ ಅಪಘಾತಗಳು ಮತ್ತು ಅಪಘಾತ ಸಂಬಂಧಿತ ಸಾವುಗಳು ನಗರಕ್ಕಿಂತ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಒತ್ತಿಹೇಳಿದೆ.

2021 ರಲ್ಲಿ, ಸುಮಾರು 69 ಪ್ರತಿಶತದಷ್ಟು ರಸ್ತೆ ಅಪಘಾತಗಳ ಸಾವು ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿವೆ. ಆದರೆ ನಗರ ಪ್ರದೇಶವು ದೇಶದ ಒಟ್ಟು ಸಾವುಗಳಲ್ಲಿ 31 ಪ್ರತಿಶತವನ್ನು ಹೊಂದಿದೆ" ಎಂದು ವರದಿ ಬಹಿರಂಗಪಡಿಸಿದೆ.
2021 ರಲ್ಲಿ, ಭಾರತದಲ್ಲಿ ರಸ್ತೆ ಅಪಘಾತಗಳು ಸುಮಾರು 1.5 ಲಕ್ಷ ಜೀವಗಳು ಬಲಿಯಾಗಿವೆ. 3.8 ಲಕ್ಷಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದಾರೆ. ರಸ್ತೆ ಅಪಘಾತಗಳಲ್ಲಿ 18 ರಿಂದ 45 ವರ್ಷದವರು ಹೆಚ್ಚು ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆಯಲ್ಲಿ 2021 ರಲ್ಲಿ ತಮಿಳುನಾಡಿನಲ್ಲಿ 16,869 ಅಪಘಾತಗಳು ವರದಿಯಾಗಿವೆ. ನಂತರದ ಸ್ಥಾನದಲ್ಲಿ 14,540 ಅಪಘಾತಗಳನ್ನು ವರದಿ ಮಾಡಿದ ಉತ್ತರ ಪ್ರದೇಶವಿದೆ. ಮೂರನೇ ಸ್ಥಾನದಲ್ಲಿ ಕರ್ನಾಟಕವಿದ್ದು, ಇಲ್ಲಿ 11,462 ರಸ್ತೆ ಅಪಘಾತ ಪ್ರಕರಣಗಳು ಸಂಭವಿಸಿವೆ. ಮಧ್ಯಪ್ರದೇಶದಲ್ಲಿ 11,030, ಆಂಧ್ರ ಪ್ರದೇಶದಲ್ಲಿ 8,241, ಕೇರಳದಲ್ಲಿ 8,048, ಮಹಾರಾಷ್ಟ್ರದಲ್ಲಿ 7,501, ತೆಲಂಗಾಣದಲ್ಲಿ 7,214, ರಾಜಸ್ಥಾನದಲ್ಲಿ 6,424 ಮತ್ತು ಬಿಹಾರದಲ್ಲಿ 4,349 ಅಪಘಾತಗಳು ವರದಿಯಾಗಿವೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications