Punjab Golden Temple: 1 ವಾರದಲ್ಲಿ ಪಂಜಾಬ್ನ ಗೋಲ್ಡನ್ ಟೆಂಪಲ್ ಬಳಿ 3ನೇ ಸ್ಫೋಟ, 5 ಮಂದಿ ಬಂಧನ
ಅಮೃತಸರ ಮೇ 11: ನಿನ್ನೆ ತಡರಾತ್ರಿ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಸ್ಫೋಟ ಸಂಭವಿಸಿದ್ದು ಪಂಜಾಬ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.
ಮೊದಲ ಸ್ಫೋಟ ಮೇ 6 ರಂದು ಮತ್ತು ಎರಡನೆಯದು ಸೋಮವಾರ ಸಂಭವಿಸಿದೆ. ಇಂದು ನಡೆದ ಕಡಿಮೆ ತೀವ್ರತೆಯ ಸ್ಫೋಟದ ಸ್ಥಳ ನಗರದ ಜನಪ್ರಿಯ ಪ್ರವಾಸಿ ತಾಣವಾದ ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಯಾವುದೇ ದೊಡ್ಡ ಮಟ್ಟದ ಮದ್ದುಗಳನ್ನು ಬಳಸಲಾಗಿಲ್ಲ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಮೂಲಗಳು ತಿಳಿಸಿವೆ.
ಅಮೃತಸರದ ಹೆರಿಟೇಜ್ ಸ್ಟ್ರೀಟ್ನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಬಳಸಲಾದ ಸ್ಫೋಟಕವನ್ನು ಎರಡು ಆರೋಗ್ಯ ಪಾನೀಯ ಕ್ಯಾನ್ಗಳೊಂದಿಗೆ ಪ್ಯಾಕ್ ಮಾಡಲಾಗಿತ್ತು. ಸೋಮವಾರ ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಯಾವುದೇ ಡಿಟೋನೇಟರ್ ಪತ್ತೆಯಾಗಿಲ್ಲ ಮತ್ತು ಸ್ಫೋಟಕ್ಕೆ ಬಳಸಲಾದ ಸ್ಫೋಟಕವನ್ನು ಕಂಟೇನರ್ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟಕವನ್ನು ಕಚ್ಚಾ ರೀತಿಯಲ್ಲಿ ತಯಾರಿಸಲಾಗಿದ್ದು, ಯಾವುದೇ ದೊಡ್ಡ ಮದ್ದುಗಳನ್ನು ಬಳಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 6 ರಂದು ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡರು ಮತ್ತು ಕೆಲವು ಕಟ್ಟಡಗಳ ಗಾಜಿನ ಮುಂಭಾಗಗಳು ಹಾನಿಗೊಳಗಾಗಿವೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಅಮೃತಸರದಲ್ಲಿ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣಗಳನ್ನು ಪರಿಹರಿಸಲಾಗಿದೆ ಎಂದು ತಿಳಿಸಿದ್ದಾರೆ.
-
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications