ಪುಲ್ವಾಮಾ ದಾಳಿಯ 3ನೇ ವರ್ಷ: ಐಪಿಎಸ್ ಅಧಿಕಾರಿ ಬರೆದಿರುವ ಪುಸ್ತಕ ಬಿಡುಗಡೆಗೆ ಸಿದ್ಧ
ನವದೆಹಲಿ, ಫೆಬ್ರವರಿ 14: ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಇಂದಿಗೆ ಮೂರು ವರ್ಷ ಆಗಿದೆ. ಈ ಭೀಕರ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಫೆಬ್ರವರಿ 14, 2019 ರಂದು ಪ್ರೇಮಿಗಳ ದಿನದ ಸಂಭ್ರಮದ ನಡುವೆಯೇ ನಮ್ಮ ಯೋಧರನ್ನು ಪಾಕಿಸ್ತಾನ ಹತ್ಯೆಗೈದಿತ್ತು. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ನ 20 ವರ್ಷದ ಆತ್ಮಹತ್ಯಾ ಬಾಂಬರ್ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದು 40 ಯೋಧರನ್ನು ಹತ್ಯೆಗೈದಿದ್ದನು. ಈ ಘಟನೆಯ ಬಗ್ಗೆ ಪುಸ್ತಕವನ್ನು ಪ್ರಕಟಿಸಲು ಮುಂದಾಗಿದೆ.
ಮುಖ್ಯಪಾತ್ರಗಳೊಂದಿಗಿನ ವೈಯಕ್ತಿಕ ಸಂದರ್ಶನಗಳು, ಪೊಲೀಸ್ ಚಾರ್ಜ್ಶೀಟ್ಗಳು ಮತ್ತು ಇತರ ಪುರಾವೆಗಳ ಆಧಾರದ ಮೇಲೆ ಈ ಪುಸ್ತಕವನ್ನು ಬರೆಯಲಾಗಿದೆ. As Far as the Saffron Fields ಎಂಬ ಈ ಪುಸ್ತಕವು ಈ ವರ್ಷದ ಮಾರ್ಚ್ ಮೂರರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಕಾಶ್ಮೀರ ಸಂಘರ್ಷದ ಬಗ್ಗೆ ಯಾವುದೇ ಪುಸ್ತಕವು ಹಿಂದೆಂದೂ ಪ್ರಕಟವಾಗಿಲ್ಲ.
ತಮ್ಮ ಹೊಸ ಪುಸ್ತಕದ ಪ್ರಕಟಣೆಯ ಕುರಿತು ಪ್ರತಿಕ್ರಿಯಿಸಿದ ಐಪಿಎಸ್ ಅಧಿಕಾರಿ ದಾನೇಶ್ ರಾಣಾ, "ಮಾರಣಾಂತಿಕ ಪುಲ್ವಾಮಾ ದಾಳಿಯ ಸುತ್ತ ನಿರ್ಮಿಸಲಾದ ಅನೇಕ ನಿರೂಪಣೆಗಳನ್ನು ನಿರಾಕರಿಸುವ ಒಂದು ಖಾತೆ ಇಲ್ಲಿದೆ. ಪುಸ್ತಕವು ಪಾಕಿಸ್ತಾನದಿಂದ ಪ್ರಾಯೋಜಿತ ನಿಷೇಧಿತ ಸಂಘಟನೆಗಳ ಪಾತ್ರವನ್ನು ಎತ್ತಿ ತೋರಿಸುತ್ತದೆ," ಎಂದು ತಿಳಿಸಿದ್ದಾರೆ.

ಪುಲ್ವಾಮಾ ದಾಳಿಯ 3ನೇ ವರ್ಷದಲ್ಲಿ ಈ ಪುಸ್ತಕವನ್ನು ಪ್ರಕಟಿಸುವ ಕುರಿತು ಮಾತನಾಡಿದ ಕಾರ್ಯನಿರ್ವಾಹಕ ಸಂಪಾದಕಿ ಸ್ವಾತಿ ಚೋಪ್ರಾ, "ಇದು ಪುಲ್ವಾಮಾ ಪಿತೂರಿಯ ಕುರಿತಾದ ನಿರ್ಣಾಯಕ ಪುಸ್ತಕವಾಗಿದ್ದು, ಪಿತೂರಿಯನ್ನು ಹೇಗೆ ರೂಪಿಸಲಾಯಿತು ಮತ್ತು ಹೇಗೆ ನಡೆಸಲಾಯಿತು ಎಂಬ ಸಂಪೂರ್ಣ ಚಿತ್ರಣವನ್ನು ನೀಡುತ್ತದೆ. ಪುಸ್ತಕವು ಕಾಶ್ಮೀರದಲ್ಲಿನ ಪ್ರಸ್ತುತ ಉಗ್ರಗಾಮಿತ್ವದ ನೈಜತೆಯ ಬಗ್ಗೆ ಮಾಹಿತಿ ನೀಡುತ್ತದೆ. ಇದನ್ನು ಸೇವೆಯಲ್ಲಿರುವ ಐಪಿಎಸ್ ಅಧಿಕಾರಿ ಬರೆದಿದ್ದಾರೆ ಎಂಬ ಅಂಶವು ಮತ್ತಷ್ಟು ವಿಶ್ವಾಸಾರ್ಹತೆಯನ್ನು ನೀಡುತ್ತದೆ," ಎಂದು ಹೇಳಿದ್ದಾರೆ.
ಪುಸ್ತಕದ ಬಗ್ಗೆ ಮಾಹಿತಿ
ಮಾರ್ಚ್ 2019 ರಲ್ಲಿ, ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ನಲ್ಲಿರುವ ಮನೆಯೊಂದರಲ್ಲಿ ನಡೆದ ಮುತ್ತಿಗೆಯ ಸಂದರ್ಭದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆ ಮಾಡಲಾಯಿತು. ಅವರಲ್ಲಿ ಒಬ್ಬರನ್ನು ಸರಳವಾಗಿ 'ಇದ್ರೀಸ್ ಭಾಯಿ' ಎಂದು ಕರೆಯಲಾಗುತ್ತಿತ್ತು. ತನಿಖಾಧಿಕಾರಿಗಳು ಇದ್ರೀಸ್ ಭಾಯ್ ನಾಶಪಡಿಸಿದ ಮ್ಯಾಂಗಲ್ಡ್ ಫೋನ್ ಬಗ್ಗೆ ತನಿಖೆ ನಡೆಸಲು ಮುಂದಾದರು. ಈ ಬಳಿಕ ದೊರೆತ ಮಾಹಿತಿಯೇ ಇದ್ರೀಸ್ ಭಾಯಿ ಬೇರೆ ಯಾರೂ ಅಲ್ಲ, 2019 ರ ಫೆಬ್ರವರಿಯ ಪುಲ್ವಾಮಾ ಆತ್ಮಾಹುತಿ ದಾಳಿಯ ಮಾಸ್ಟರ್ ಮೈಂಡ್ ಉಮರ್ ಫಾರೂಕ್ ಅಲ್ವಿ ಎಂಬುವುದ ಆಗಿದೆ. ಇದೀಗ, ಮೊದಲ ಬಾರಿಗೆ, ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ, ದಾನೇಶ್ ರಾಣಾ ದಾಳಿಯ ಹಿಂದಿನ ಪಿತೂರಿಯನ್ನು ಸೂಕ್ಷ್ಮವಾಗಿ ಪ್ರಕಟ ಮಾಡುತ್ತಿದ್ದಾರೆ.
ಲೇಖಕರ ಬಗ್ಗೆ ಮಾಹಿತಿ
ದಾನೇಶ್ ರಾಣಾ ಅವರು ಜಮ್ಮು ಮತ್ತು ಕಾಶ್ಮೀರ ಕೇಡರ್ನ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಯಾಗಿದ್ದಾರೆ. ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಎಡಿಜಿಪಿಯಾಗಿದ್ದಾರೆ. Red Maize (2015) ಎಂಬ ಪುಸ್ತಕವನ್ನು ಈ ಹಿಂದೆ ಬರೆದಿದ್ದಾರೆ. ಈ ಪುಸ್ತಕಕ್ಕೆ ಟಾಟಾ ಲಿಟರೇಚರ್ ಲೈವ್ ಫಸ್ಟ್ ಬುಕ್ ಅವಾರ್ಡ್ ಲಭಿಸಿದೆ. ಹಾರ್ಪರ್ಕಾಲಿನ್ಸ್ ಪಬ್ಲಿಷರ್ಸ್ ಇಂಡಿಯಾ ಹಾರ್ಪರ್ಕಾಲಿನ್ಸ್ ಪಬ್ಲಿಷರ್ಸ್ನ ಅಂಗಸಂಸ್ಥೆಯಾಗಿದ್ದು, ಈ ಪುಸ್ತಕದ ಪ್ರಕಟಣೆ ಮಾಡಲಿದೆ. (ಒನ್ಇಂಡಿಯಾ ಸುದ್ದಿ)
Recommended Video
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications