Earthquake: ಅಸ್ಸಾಂನಲ್ಲಿ 4.4 ತೀವ್ರತೆಯ ಭೂಕಂಪ: ಕಳೆದೆರಡು ದಿನಗಳಿಂದ ಎಲ್ಲೆಡೆ ಕಂಪಿಸುತ್ತಿರುವ ಭೂಮಿ
ಅಸ್ಸಾಂನ ಸೋನಿತ್ಪುರದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈವರೆಗೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್ಸಿಎಸ್) ಪ್ರಕಾರ, ಭೂಕಂಪ 15 ಕಿ.ಮೀ ಆಳದಲ್ಲಿ ಸಂಭವಿಸಿದೆ.
ಭೂಕಂಪದ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ನೋಡಲ್ ಏಜೆನ್ಸಿಯು ಹಂಚಿಕೊಂಡ ಟ್ವಿಟ್ಟರ್ ಮಾಹಿತಿ ಪ್ರಕಾರ, "4.4 ತೀವ್ರತೆಯ ಭೂಕಂಪ, ಇಂದು 29-05-2023, ಸಮಯ-08:03:35, ಲ್ಯಾಟ್: 26.68 ಮತ್ತು ಉದ್ದ: 92.35, ಆಳ: 15 ಕಿಮೀ, ಪ್ರದೇಶ: ಸೋನಿತ್ಪುರ್, ಅಸ್ಸಾಂ, ಭಾರತ" ಎಂದು ಬರೆದಿದೆ. ಅಸ್ಸಾಂನಲ್ಲೂ ಮಾತ್ರವಲ್ಲದೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ ಸಂಭವಿಸಿದೆ.
Earthquake of Magnitude:4.4, Occurred on 29-05-2023, 08:03:35 IST, Lat: 26.68 & Long: 92.35, Depth: 15 Km ,Region: Sonitpur, Assam, India for more information Download the BhooKamp App https://t.co/GKjIWyxS2g pic.twitter.com/Jyn2nXck2X
— National Center for Seismology (@NCS_Earthquake) May 29, 2023
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸೋಮವಾರ ಬೆಳಿಗ್ಗೆ 7:48 ರ ಸುಮಾರಿಗೆ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದಿಗ್ಲಿಪುರದಿಂದ 137 ಕಿಮೀ ಪೂರ್ವಕ್ಕೆ ಕಂಪನದ ಅನುಭವವಾಗಿದೆ ಎಂದು ಎನ್ಸಿಎಸ್ ಹೇಳಿದೆ.

ಭಾನುವಾರ ಬೆಳಗ್ಗೆ 10:19ರ ಸುಮಾರಿಗೆ ಅಫ್ಘಾನಿಸ್ತಾನದ ಫೈಜಾಬಾದ್ನ ಆಗ್ನೇಯಕ್ಕೆ 70 ಕಿಮೀ ದೂರದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಈ ಭೂಕಂಪ ಸಂಭವಿಸಿದೆ.
ಮಾತ್ರವಲ್ಲದೆ ಶ್ರೀನಗರ, ಜಮ್ಮು ಮತ್ತು ಕಾಶ್ಮೀರದ ಪೂಂಚ್, ಪಂಜಾಬ್, ಹರಿಯಾಣ, ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದ ಅನುಭವವವಾಗುತ್ತಿದ್ದಂತೆ ಭಯಭೀತರಾದ ಜನರು ಮನೆಗಳಿಂದ ಹೊರ ಬಂದಿದ್ದಾರೆ. ಮನೆಗಳಲ್ಲಿ ಅಲುಗಾಡುತ್ತಿರುವ ಸೀಲಿಂಗ್ ಫ್ಯಾನ್ಗಳನ್ನು ತೋರಿಸುವ ವೀಡಿಯೊಗಳು ವೈರಲ್ ಆಗಿವೆ.
ಅಫ್ಘಾನಿಸ್ತಾನದಲ್ಲಿ ಭಾನುವಾರ ಸಂಭವಿಸಿದ ಭೂಕಂಪ
ಅಫ್ಘಾನಿಸ್ತಾನದಲ್ಲಿ ಭಾನುವಾರ ಸಂಭವಿಸಿದ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
Earthquake of Magnitude:5.2, Occurred on 28-05-2023, 11:19:55 IST, Lat: 36.56 & Long: 71.13, Depth: 220 Km ,Location: Afghanistan for more information Download the BhooKamp App https://t.co/KyNMxeUdi9 @ndmaindia @Indiametdept @Dr_Mishra1966 @DDNewslive pic.twitter.com/LnP2nm7rpV
— National Center for Seismology (@NCS_Earthquake) May 28, 2023
ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಅಫ್ಘಾನಿಸ್ತಾನದ ಫೈಜಾಬಾದ್ ಬಳಿ 5.2 ತೀವ್ರತೆಯ ಭೂಕಂಪ ವರದಿಯಾಗಿದೆ. ಟ್ವೀಟ್ನಲ್ಲಿ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್ನ 79 ಕಿಮೀ ಆಗ್ನೇಯ (ಎಸ್ಇ) ಎಂದು ಏಜೆನ್ಸಿ ತಿಳಿಸಿದೆ. ಭೂಕಂಪ 11:19ಕ್ಕೆ 220 ಕಿಮೀ ಆಳದಲ್ಲಿ ಸಂಭವಿಸಿದೆ.

ಇಸ್ಲಾಮಾಬಾದ್, ಪೇಶಾವರ್, ಸ್ವಾತ್, ಹರಿಪುರ್, ಮಲಕಂದ್, ಅಬೋಟಾಬಾದ್, ಬಾತ್ಗ್ರಾಮ್, ಪಾಕ್ ಆಕ್ರಮಿತ ಕಾಶ್ಮೀರ, ಟೆಕ್ಸ್ಲಿಯಾ, ಪಿಂಡ್ ದಾದನ್ ಖಾನ್ ಮತ್ತು ದೇಶದ ಹಲವಾರು ಭಾಗಗಳಲ್ಲಿ ಭೂಕಂಪನದ ಅನುಭವವಾವಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ. ಪಾಕಿಸ್ತಾನವು ಆಗಾಗ್ಗೆ ವಿವಿಧ ಪ್ರಮಾಣದ ಭೂಕಂಪಗಳಿಗೆ ಸಾಕ್ಷಿಯಾಗಿದೆ. 2005ರಲ್ಲಿ ಪಾಕಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 74,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.
ಟೋಕಿಯೊ ಮತ್ತು ಪೂರ್ವ ಜಪಾನ್ನಲ್ಲಿ ಭೂಕಂಪ
ಶುಕ್ರವಾರ ಟೋಕಿಯೊ ಮತ್ತು ಪೂರ್ವ ಜಪಾನ್ನ ಇತರ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿಲ್ಲ. 6.1 ತೀವ್ರತೆಯ ಭೂಕಂಪ ಚಿಬಾ ಪೆನಿನ್ಸುಲಾದ ಪೂರ್ವ ಕರಾವಳಿಯಲ್ಲಿ 44.5 ಕಿಲೋಮೀಟರ್ ಆಳದಲ್ಲಿ ಸಂಭವಿಸಿತ್ತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಚಿಬಾ ಮತ್ತು ಇಬರಾಕಿ ಪ್ರಾಂತ್ಯಗಳಲ್ಲಿ ಬಲವಾದ ಅಲುಗಾಡುವಿಕೆ ವರದಿಯಾಗಿದೆ, ಆದರೆ USGS ಗಂಭೀರ ಹಾನಿ ಅಥವಾ ಸಾವುನೋವುಗಳ ಸಾಧ್ಯತೆ ಕಡಿಮೆ ಎಂದು ಹೇಳಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications