'ಆಧಾರ್' ಹೆಸರಲ್ಲಿ ಠೇವಣಿದಾರರ ಖಾತೆಗೆ ಕನ್ನ ಕೊರೆದ ಬ್ಯಾಂಕ್ ಸಿಬ್ಬಂದಿ
ನವದೆಹಲಿ, ಫೆಬ್ರವರಿ 8: ಬ್ಯಾಂಕ್ ಅಧಿಕಾರಿಗಳೇ ಆಧಾರ್ ಕಾರ್ಡ್ ದೃಢೀಕರಣ ಹೆಸರಿನಲ್ಲಿ ಗ್ರಾಹಕರಿಗೆ ವಂಚಿಸಿದ ಪ್ರಕರಣಗಳು ವರದಿಯಾಗಿವೆ. ನಾಲ್ಕು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿಗಳು ಹೀಗೆ ಠೇವಣಿದಾರರ 1.42 ಕೋಟಿ ಹಣ ದೋಚಿದ್ದು ಬೆಳಕಿಗೆ ಬಂದಿದೆ.
ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸಿಂಡಿಕೇಟ್ ಬ್ಯಾಂಕ್ ಮತ್ತು ಯುಕೋ ಬ್ಯಾಂಕ್ ಗಳು ಈ ಮಾಹಿತಿಯನ್ನು ಕೇಂದ್ರ ಸರಕಾರಕ್ಕೆ ನೀಡಿವೆ.
ಗ್ರಾಹಕರ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಅವರ ಖಾತೆಗಳಿಂದ ಹಣವನ್ನು ಡ್ರಾ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಹಣಕಾಸು ಖಾತೆ ರಾಜ್ಯ ದರ್ಜೆ ಸಚಿವ ಶಿವ ಪ್ರತಾಪ್ ಶುಕ್ಲಾ ಮಂಗಳವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ಎರಡು ಪ್ರಕರಣಗಳಲ್ಲಿ ಅದರ ಸಿಬ್ಬಂದಿಗಳು ತಪ್ಪಾಗಿ ಅಥವಾ ಮೋಸ ಮಾಡಿ ಆಧಾರ್ ಸಂಖ್ಯೆಗಳನ್ನು ಮ್ಯಾಪಿಂಗ್ ಮಾಡಿದ್ದಾರೆ. ಈ ಮೂಲಕ ಗ್ರಾಹಕರ ಖಾತೆಯಿಂದ 1.37 ಕೋಟಿ ರೂಪಾಯಿ ಹಣವನ್ನು ಡ್ರಾ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಈ ರೀತಿಯ ಘಟನೆ ನಡೆಯದಂತೆ ಬ್ಯಾಂಕ್ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಬ್ಯಾಂಕ್ ಹೇಳಿದೆ.
ಇನ್ನು ಅಲಹಾಬಾದ್ ಬ್ಯಾಂಕ್ ನಲ್ಲಿ ಗ್ರಾಹಕರೊಬ್ಬರ ಖಾತೆಯಿಂದ 49,000 ರೂಪಾಯಿಗಳನ್ನು ಡ್ರಾ ಮಾಡಲಾಗಿದೆ. ಇಲ್ಲಿ ಒಂದೇ ಆಧಾರ್ ಸಂಖ್ಯೆ ಎರಡು ಬೇರೆ ಬೇರೆ ಹೆಸರಿನ ವ್ಯಕ್ತಿಗಳ ಕಾರ್ಡ್ ನಲ್ಲಿ ಮುದ್ರಣವಾಗಿತ್ತು ಎಂದು ಬ್ಯಾಂಕ್ ಹೇಳಿದೆ. ಆದರೆ ಈ ಪ್ರಕರಣವನ್ನು ಪತ್ತೆ ಹಚ್ಚಿ ಹಣವನ್ನು ಮರಳಿಸಲಾಗಿದೆ.
ಈ ಪ್ರಕರಣದಲ್ಲಿ ನಾವು ನಕಲಿ ಆಧಾರ್ ಕಾರ್ಡ್ ಮುದ್ರಣ ಮಾಡಿರುವುದನ್ನು ಪತ್ತೆ ಹಚ್ಚಿದ್ದೇವೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ.
ಇದ ರೀತಿ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರು ಠೇವಣಿದಾರರ ಖಾತೆಯಿಂದ ಡ್ರಾ ಮಾಡಿದ್ದ 2,26,000 ರೂಪಾಯಿಗಳ್ನು ಹಿಂಪಡೆದಿದೆ. ಇದಾದ ಬಳಿಕ ಬ್ಯಾಂಕ್ ಖಾತೆ ಇತೆ ಆಧಾರ್ ಲಿಂಕ್ ಮಾಡಲು ನಿರ್ಧಿಷ್ಟ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ.
ಇದೇ ರೀತಿ ಕಳೆದ ವರ್ಷ ಯುಕೋ ಬ್ಯಾಂಕ್ ನಿಂದ 1,21,500 ರೂಪಾಯಿ ಡ್ರಾ ಮಾಡಲಾಗಿತ್ತು. ಇದರಲ್ಲಿ ಕೈಜೋಡಿಸಿದ್ದ ಬ್ಯಾಂಕ್ ಸಿಬ್ಬಂದಿ ನಂತರ ಸಿಕ್ಕಿಬಿದ್ದಿದ್ದರು. ಈ ಬ್ಯಾಂಕ್ ಅಧಿಕಾರಿ ಗ್ರಾಹಕರ ಖಾತೆಯಿಂದ 1,15,000 ಪಡೆದುಕೊಂಡಿದ್ದು ಬಹಿರಂಗವಾಗಿತ್ತು.
2016-17ರಲ್ಲಿ ಇದೇ ರೀತಿ 20 ಪ್ರಕರಣಗಳಲ್ಲಿ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಂದ 7,65,268 ರೂಪಾಯಿ ಡ್ರಾ ಮಾಡಿದ್ದು ಪತ್ತೆಯಾಗಿತ್ತು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications