'ಆಧಾರ್' ಹೆಸರಲ್ಲಿ ಠೇವಣಿದಾರರ ಖಾತೆಗೆ ಕನ್ನ ಕೊರೆದ ಬ್ಯಾಂಕ್ ಸಿಬ್ಬಂದಿ
ನವದೆಹಲಿ, ಫೆಬ್ರವರಿ 8: ಬ್ಯಾಂಕ್ ಅಧಿಕಾರಿಗಳೇ ಆಧಾರ್ ಕಾರ್ಡ್ ದೃಢೀಕರಣ ಹೆಸರಿನಲ್ಲಿ ಗ್ರಾಹಕರಿಗೆ ವಂಚಿಸಿದ ಪ್ರಕರಣಗಳು ವರದಿಯಾಗಿವೆ. ನಾಲ್ಕು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿಗಳು ಹೀಗೆ ಠೇವಣಿದಾರರ 1.42 ಕೋಟಿ ಹಣ ದೋಚಿದ್ದು ಬೆಳಕಿಗೆ ಬಂದಿದೆ.
ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸಿಂಡಿಕೇಟ್ ಬ್ಯಾಂಕ್ ಮತ್ತು ಯುಕೋ ಬ್ಯಾಂಕ್ ಗಳು ಈ ಮಾಹಿತಿಯನ್ನು ಕೇಂದ್ರ ಸರಕಾರಕ್ಕೆ ನೀಡಿವೆ.
ಗ್ರಾಹಕರ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಅವರ ಖಾತೆಗಳಿಂದ ಹಣವನ್ನು ಡ್ರಾ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಹಣಕಾಸು ಖಾತೆ ರಾಜ್ಯ ದರ್ಜೆ ಸಚಿವ ಶಿವ ಪ್ರತಾಪ್ ಶುಕ್ಲಾ ಮಂಗಳವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ಎರಡು ಪ್ರಕರಣಗಳಲ್ಲಿ ಅದರ ಸಿಬ್ಬಂದಿಗಳು ತಪ್ಪಾಗಿ ಅಥವಾ ಮೋಸ ಮಾಡಿ ಆಧಾರ್ ಸಂಖ್ಯೆಗಳನ್ನು ಮ್ಯಾಪಿಂಗ್ ಮಾಡಿದ್ದಾರೆ. ಈ ಮೂಲಕ ಗ್ರಾಹಕರ ಖಾತೆಯಿಂದ 1.37 ಕೋಟಿ ರೂಪಾಯಿ ಹಣವನ್ನು ಡ್ರಾ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಈ ರೀತಿಯ ಘಟನೆ ನಡೆಯದಂತೆ ಬ್ಯಾಂಕ್ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಬ್ಯಾಂಕ್ ಹೇಳಿದೆ.
ಇನ್ನು ಅಲಹಾಬಾದ್ ಬ್ಯಾಂಕ್ ನಲ್ಲಿ ಗ್ರಾಹಕರೊಬ್ಬರ ಖಾತೆಯಿಂದ 49,000 ರೂಪಾಯಿಗಳನ್ನು ಡ್ರಾ ಮಾಡಲಾಗಿದೆ. ಇಲ್ಲಿ ಒಂದೇ ಆಧಾರ್ ಸಂಖ್ಯೆ ಎರಡು ಬೇರೆ ಬೇರೆ ಹೆಸರಿನ ವ್ಯಕ್ತಿಗಳ ಕಾರ್ಡ್ ನಲ್ಲಿ ಮುದ್ರಣವಾಗಿತ್ತು ಎಂದು ಬ್ಯಾಂಕ್ ಹೇಳಿದೆ. ಆದರೆ ಈ ಪ್ರಕರಣವನ್ನು ಪತ್ತೆ ಹಚ್ಚಿ ಹಣವನ್ನು ಮರಳಿಸಲಾಗಿದೆ.
ಈ ಪ್ರಕರಣದಲ್ಲಿ ನಾವು ನಕಲಿ ಆಧಾರ್ ಕಾರ್ಡ್ ಮುದ್ರಣ ಮಾಡಿರುವುದನ್ನು ಪತ್ತೆ ಹಚ್ಚಿದ್ದೇವೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ.
ಇದ ರೀತಿ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರು ಠೇವಣಿದಾರರ ಖಾತೆಯಿಂದ ಡ್ರಾ ಮಾಡಿದ್ದ 2,26,000 ರೂಪಾಯಿಗಳ್ನು ಹಿಂಪಡೆದಿದೆ. ಇದಾದ ಬಳಿಕ ಬ್ಯಾಂಕ್ ಖಾತೆ ಇತೆ ಆಧಾರ್ ಲಿಂಕ್ ಮಾಡಲು ನಿರ್ಧಿಷ್ಟ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ.
ಇದೇ ರೀತಿ ಕಳೆದ ವರ್ಷ ಯುಕೋ ಬ್ಯಾಂಕ್ ನಿಂದ 1,21,500 ರೂಪಾಯಿ ಡ್ರಾ ಮಾಡಲಾಗಿತ್ತು. ಇದರಲ್ಲಿ ಕೈಜೋಡಿಸಿದ್ದ ಬ್ಯಾಂಕ್ ಸಿಬ್ಬಂದಿ ನಂತರ ಸಿಕ್ಕಿಬಿದ್ದಿದ್ದರು. ಈ ಬ್ಯಾಂಕ್ ಅಧಿಕಾರಿ ಗ್ರಾಹಕರ ಖಾತೆಯಿಂದ 1,15,000 ಪಡೆದುಕೊಂಡಿದ್ದು ಬಹಿರಂಗವಾಗಿತ್ತು.
2016-17ರಲ್ಲಿ ಇದೇ ರೀತಿ 20 ಪ್ರಕರಣಗಳಲ್ಲಿ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಂದ 7,65,268 ರೂಪಾಯಿ ಡ್ರಾ ಮಾಡಿದ್ದು ಪತ್ತೆಯಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications