ಕೇರಳದಲ್ಲಿ ಆರೋಪಿಗಳಿಂದ ಲಂಚ ಪಡೆದ ನಾಲ್ವರು ಕರ್ನಾಟಕ ಪೊಲೀಸರು ವಶಕ್ಕೆ!
ತಿರುವನಂತಪುರಂ, ಆಗಸ್ಟ್. 03: ವಂಚನೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದ ಕರ್ನಾಟಕ ಪೊಲೀಸರು ಆರೋಪಿಗಳಿಂದಲೇ ಲಂಚ ಪಡೆದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಕರ್ನಾಟಕದ ತಂಡ ಆಗಸ್ಟ್ 1 ರಂದು ಕೇರಳದ ಕೊಚ್ಚಿಗೆ ತಲುಪಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜ್ಯ ಪೊಲೀಸ್ ತಂಡವು ಅಕ್ರಮವಾಗಿ ಇಬ್ಬರು ಆರೋಪಿಗಳಿಂದ 3.95 ರೂಪಾಯಿ ಲಂಚ ಪಡೆದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರಿನ ಆಧಾರದ ಮೇಲೆ ಕೊಚ್ಚಿಯಲ್ಲಿರುವ ಕಲಮಸ್ಸೆರಿ ಪೊಲೀಸರು ಬುಧವಾರ ಸಂಜೆ ನಾಲ್ವರು ಪೊಲೀಸರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಸ್ಟಡಿಯಲ್ಲಿರುವ ಪೊಲೀಸ್ ಅಧಿಕಾರಿಗಳ ವಿವರಗಳು ಮತ್ತು ಅವರು ಕೊಚ್ಚಿಗೆ ಭೇಟಿ ನೀಡುವ ಉದ್ದೇಶವನ್ನು ಪರಿಶೀಲಿಸಲು ರಾಜ್ಯ ಪೊಲೀಸರು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬೇಬಿ ಪಿ ವಿ ಅವರನ್ಉ ಡೆಕ್ಕನ್ ಹೆರಾಲ್ಡ್ ಉಲ್ಲೇಖಿಸಿದೆ. ಉದ್ದೇಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರಕರಣ ದಾಖಲಾಗಿತ್ತು. ಬಂಧಿತರ ಗುರುತು ಪರಿಶೀಲನೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನ್ಲೈನ್ ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ಫೀಲ್ಡ್ನಿಂದ ಕರ್ನಾಟಕ ತಂಡವು ಆರೋಪಿಗಾಳಾದ ಅಖಿಲ್ ಮತ್ತು ನಿಖಿಲ್ ಎಂಬುವವರನ್ನು ಬಂಧಿಸಲು ರಾಜ್ಯಕ್ಕೆ ಬಂದಿದೆ ಎಂದು ಕೇರಳ ಪೊಲೀಸರು ಮಾಹಿತಿ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿಕಾರಿಗಳು ಪ್ರಕರಣ ಇತ್ಯರ್ಥಕ್ಕೆ 25 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದಾರೆ. ಆರೋಪಿಗಳಲ್ಲಿ ಒಬ್ಬರಿಂದ ಒಂದು ಲಕ್ಷ ರೂ ಪಡೆದು, ಇತರ ಆರೋಪಿಯ ತಂದೆಯಿಂದ 3 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾರೆ. ಇದಾದ ನಂತರ ಅವರು ಕೇರಳ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್











Click it and Unblock the Notifications