4 ಹೊಸ ಕಾರ್ಮಿಕ ಸಂಹಿತೆ ಜಾರಿ: ಕೆಲಸದ ಅವಧಿ ಇನ್ಮುಂದೆ ದಿನಕ್ಕೆ 12 ಗಂಟೆ!
ಕೇಂದ್ರ ಸರ್ಕಾರವು ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಪರಿಚಯಿಸಿದೆ. ಕಾರ್ಮಿಕ ಕಲ್ಯಾಣದ ದೃಷ್ಟಿಯಿಂದ ಈ ಸಂಹಿತೆ (ಹೊಸ ಬದಲಾವಣೆ)ಗಳನ್ನು ಪರಿಚಯಿಸಿದೆ. ವೇತನ ಸಂಹಿತೆ (2019), ಕೈಗಾರಿಕಾ ಸಂಪರ್ಕ ಸಂಹಿತೆ (2020), ಸಾಮಾಜಿಕ ಭದ್ರತಾ ಸಂಹಿತೆ (2020) ಹಾಗೂ ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಸ್ಥಿತಿಗತಿಗಳ ಸಂಹಿತೆ (2020) ಜಾರಿಗೆ ತರಲಾಗಿದೆ. ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಆದರೆ ಇದರಿಂದ ಕಾರ್ಮಿಕರಿಗೆ ಹೆಚ್ಚು ಕೆಲಸ ಮಾಡುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಕಾಂಗ್ರೆಸ್ ದೂರಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಪರಿಚಯಿಸಿದೆ. ಆದರೆ ಅದು ಕಾರ್ಮಿಕ ವಿರೋಧಿ, ಉದ್ಯಮಿಗಳ ಪರವಾಗಿರುವ ಕಾನೂನು ಎಂದು ಕಾಂಗ್ರೆಸ್ ಹೇಳಿದ್ದು, ಇದನ್ನು ವಿರೋಧಿಸಿದ ಬೀದಿಗೆ ಇಳಿದಿದೆ. ಕೇಂದ್ರ ಸರ್ಕಾರವು ಕಾರ್ಮಿಕರ ಭವಿಷ್ಯಕ್ಕೆ ಸಮಾಧಿ ಕಟ್ಟಿ, ಅದರ ಮೇಲೆ ಶ್ರೀಮಂತ ಉದ್ಯಮಗಳ ಸಾಮ್ರಾಜ್ಯ ಕಟ್ಟಲು ಮುಂದಾಗಿದೆ ಎಂದು ಕಾಂಗ್ರೆಸ್ ಪಕ್ಷವು ದೂರಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕಾರ್ಮಿಕ ನಿಯಮಗಳು ಇಷ್ಟು ದಿನ ಕಾರ್ಮಿಕರಿಗೆ ಇದ್ದ ಭದ್ರತೆ ಹಾಗೂ ಶಕ್ತಿಗೆ ಎಳ್ಳು ನೀರು ಬಿಡುತ್ತಿದೆ.
ಹೊಸ ನಿಯಮಗಳ ಪ್ರಕಾರ..
1. ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸುವ ಮಿತಿ 100ರಿಂದ 300ಕ್ಕೆ ಏರಿಸಲಾಗಿದೆ. ಶೇ 80% ಕಾರ್ಖಾನೆಗಳು ಅನುಮತಿ ಇಲ್ಲದೇ ಕಾರ್ಮಿಕರನ್ನು ವಜಾಗೊಳಿಸಬಹುದು.
2. ಖಾಯಂ ಉದ್ಯೋಗವನ್ನು ನಿಗದಿತ ಅವಧಿಯ ಉದ್ಯೋಗವಾಗಿ ಪರಿವರ್ತನೆ.
3. ರಾಜ್ಯಗಳು 12 ಗಂಟೆಗಳ ಕೆಲಸಕ್ಕೆ ಅವಕಾಶ ನೀಡಬಹುದು. 300 ಕಾರ್ಮಿಕರಿಗಿಂತ ಕಡಿಮೆ ಇರುವ ಕಾರ್ಖಾನೆಗಳು ರಜೆ, ಅಮಾನತು ಹಾಗೂ ಸುರಕ್ಷತೆಯಲ್ಲಿ ಮೂಲಭೂತ ನಿಯಮವನ್ನು ಕಡೆಗಣಿಸಬಹುದು.
4. ಕೇವಲ 51% ಸದಸ್ಯರಿರುವ ಕಾರ್ಮಿಕರ ಸಂಘಗಳು ಮಾತ್ರ ಪ್ರತಿಭಟನೆ ಮಾಡಬಹುದು. ಇದರಿಂದ ಕಾರ್ಮಿಕರ ಧ್ವನಿ ಅಡಗಿಸಲಾಗುತ್ತಿದೆ.
ಈ ರೀತಿ ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ಕಾರ್ಮಿಕ ಕಾಯ್ದೆ ವಿರುದ್ಧ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ಪ್ರಿಯಾಂಕ್ ಖರ್ಗೆ , ಕನಿಮೋಳಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಸಂಸತ್ ಭವನದ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಕಾರ್ಮಿಕ ಸಂಘಟನೆಗಳ ವಿರೋಧ: ಇನ್ನು ಕೇಂದ್ರ ಸರ್ಕಾರವು ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳಲ್ಲಿ ಮಾಡಿರುವ ಕೆಲವೊಂದು ಪ್ರಮುಖ ಬದಲಾವಣೆಗಳಿಗೆ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications