ರೈಲಿನಲ್ಲಿ ಪ್ರಯಾಣಿಸಿದ್ದ ನಾಲ್ವರಿಗೆ ಕೊರೊನಾ ಸೋಂಕು
ನವದೆಹಲಿ, ಮಾರ್ಚ್ 21 : ಭಾರತೀಯ ರೈಲ್ವೆ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆದರೆ, ರೈಲಿನಲ್ಲಿ ಪ್ರಯಾಣಿಸಿದ ನಾಲ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾರ್ಚ್ 16ರಂದು Godan express ರೈಲಿನಲ್ಲಿ ಪ್ರಯಾಣಿಸಿದ್ದ ನಾಲ್ವರು ಪ್ರಯಾಣಿಕರಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈ-ಜಬಲ್ಪುರ್ ನಡುವಿನ ರೈಲು ನಂಬರ್ 11055ರಲ್ಲಿ ನಾಲ್ವರು ಪ್ರಯಾಣಿಸಿದ್ದರು ಎಂಬ ಮಾಹಿತಿ ಸಿಕ್ಕಿದೆ.
ರೈಲ್ವೆಗೆ ಕೊರೊನಾ ಹೊಡೆತ; ವಾರಕ್ಕೆ 450 ಕೋಟಿ ನಷ್ಟ
ಈ ನಾಲ್ವರೂ ದುಬೈನಿಂದ ಭಾರತಕ್ಕೆ ಕಳೆದ ವಾರ ಆಗಮಿಸಿದ್ದರು. ನಾಲ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರೈಲ್ವೆ ಇಲಾಖೆಗೂ ಮಾಹಿತಿ ಸಿಕ್ಕಿದೆ. ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೊರೊನಾ; 22 ರೈಲು ಸ್ಥಗಿತ, ಫ್ಲಾಟ್ ಫಾರಂ ಟಿಕೆಟ್ ದರ ಭಾರಿ ಹೆಚ್ಚಳ
ಕೊರೊನಾ ಸೋಂಕು ಹರಡುವುದನ್ನು ತಡೆಯಲು ರೈಲ್ವೆ ಹಲವು ಕ್ರಮಗಳನ್ನು ಕೈಗೊಂಡಿದೆ. ಮಾರ್ಚ್ 22ರ ಭಾನುವಾರ 'ಜನತಾ ಕರ್ಫ್ಯೂ'ಗೆ ಕರೆ ನೀಡಲಾಗಿದೆ. ಅಂದು ದೇಶಾದ್ಯಂತ ರೈಲು ಸೇವೆ ಸ್ಥಗಿತಗೊಳ್ಳಲಿದೆ. ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ರಾತ್ರಿ 10 ಗಂಟೆ ತನಕ ರೈಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭಾನುವಾರ ಜನತಾ ಕರ್ಫ್ಯೂ; ಏನಿರುತ್ತೆ?, ಏನಿರಲ್ಲ?
ರೈಲು ನಿಲ್ದಾಣದಲ್ಲಿ ಜನಸಂದಣಿ ಕಡಿಮೆ ಮಾಡಲು ದೇಶದ 250 ರೈಲ್ವೆ ನಿಲ್ದಾಣದಲ್ಲಿ ರೂ. 10 ರೂ. ಇದ್ದ ಫ್ಲಾಟ್ ಫಾರಂ ಟಿಕೆಟ್ ದರವನ್ನು 50 ರೂ. ಗೆ ಏರಿಕೆ ಮಾಡಲಾಗಿದೆ. ಈ ಮೂಲಕ ಹೆಚ್ಚು ಜನರು ನಿಲ್ದಾಣಕ್ಕೆ ಬರದಂತೆ ತಡೆಯಲಾಗಿದೆ.
ಪ್ರಯಾಣಿಕರ ಕೊರತೆ ಹಿನ್ನಲೆಯಲ್ಲಿ ವಿವಿಧ ರೈಲ್ವೆ ವಲಯಗಳು ದೂರದ ನಗರಗಳಿಗೆ ಸಂಚಾರ ನಡೆಸುವ ರೈಲುಗಳನ್ನು ಮಾರ್ಚ್ 31ರ ತನಕ ಸ್ಥಗಿತಗೊಳಿಸಿವೆ. ಇದರಿಂದಾಗಿ ರೈಲ್ವೆ ಇಲಾಖೆಗೆ ಅಪಾರವಾದ ನಷ್ಟ ಉಂಟಾಗಿದೆ.