ಅಕ್ಟೋಬರ್ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ?
ಪಾಟ್ನ, ಆಗಸ್ಟ್ 13 : ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಅಕ್ಟೋಬರ್ ಮಧ್ಯಭಾಗದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆಯ ಸಿದ್ಧತೆಗಳ ಪರಿಶೀಲನೆಗಾಗಿ ಅಧಿಕಾರಿಗಳನ್ನು ಬಿಹಾರಕ್ಕೆ ಕಳುಹಿಸಿದೆ.
ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ಸೆಪ್ಟೆಂಬರ್ನಲ್ಲಿ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಸದ್ಯದ ಮಾಹಿತಿಯಂತೆ ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ. [ಬಗೆಹರಿದ ಬಿಹಾರ ಮೈತ್ರಿ ಕೂಟದ ಸೀಟು ಹಂಚಿಕೆ ಕಸರತ್ತು]

ಬಿಹಾರ ವಿಧಾನಸಭೆ ಚುನಾವಣೆ ನಡೆಸಲು ನವೆಂಬರ್ 29ರ ತನಕ ಕಾಲಾವಕಾಶವಿದೆ. ಅಷ್ಟರೊಳಗೆ ಚುನಾವಣಾ ಪ್ರಕ್ರಿಯೆಗಳು ಮುಗಿದು ನೂತನ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ. ಚುನಾವಣಾ ಆಯೋಗ ಬಿಹಾರಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿದ್ದು, ಸಿದ್ಧತೆ, ಭದ್ರತೆ ಮುಂತಾದ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. [ಬಿಹಾರದ ಅದೃಷ್ಟವನ್ನು ಬಿಜೆಪಿ ಬದಲಾಯಿಸಲಿದೆ : ಮೋದಿ]
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಆರ್ಜೆಡಿ ಮತ್ತು ಜೆಡಿಯು ಮೈತ್ರಿ ಮಾಡಿಕೊಂಡಿವೆ. ಬಿಹಾರ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 243. ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) 100, ಸಂಯುಕ್ತ ಜನತಾ ದಳ (ಜೆಡಿಯು) 100 ಹಾಗೂ ಕಾಂಗ್ರೆಸ್ ಪಕ್ಷ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬುಧವಾರ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ಮಖ್ಯಸ್ಥ ನಿತೀಶ್ ಕುಮಾರ್ ಅವರು ಆಗಸ್ಟ್ 30ರಂದು ಗಾಂಧಿ ಮೈದಾನದಲ್ಲಿ 'ಬಿಹಾರ್ ಸ್ವಾಭಿಮಾನ ಸಮಾವೇಶ' ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications