ತಿನಿಸೆಂದು ರಬ್ಬರ್ ಆಟಿಕೆ ನುಂಗಿ ಬಾಲಕನ ದುರ್ಮರಣ
ಎಲೂರು (ಆಂಧ್ರಪ್ರದೇಶ), ನವೆಂಬರ್ 02 : ರಬ್ಬರ್ ಆಟಿಕೆಯನ್ನು ತಿನ್ನುವ ಪದಾರ್ಥವೆಂದು ತಿಳಿದು, ನಾಲ್ಕು ವರ್ಷದ ಬಾಲಕನೊಬ್ಬ ಅದನ್ನು ತಿನ್ನಲು ಹೋಗಿ ಗಂಟಲಲ್ಲಿ ಸಿಲುಕಿಕೊಂಡು ಮೃತನಾದ ದುರ್ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಮೀಸಲ ನಿರೀಕ್ಷಣ ಕುಮಾರನ ತಂದೆ ಲಕ್ಷ್ಮಣರಾವ್ ಅವರು ತನ್ನ ಮಗನಿಗಾಗಿ ಪ್ಯಾಕೆಟ್ ತಿಂಡಿಯನ್ನು ತಂದಿದ್ದಾರೆ. ಹಲವಾರು ಪ್ಯಾಕೆಟ್ ಗಳಲ್ಲಿ ಇರುವಂತೆ ಅದರಲ್ಲಿಯೂ ರಬ್ಬರ್ ಆಟಿಕೆಯೊಂದಿತ್ತು. ಅದನ್ನೇ ತಿನಿಸೆಂದು ರಬ್ಬರ್ ಆಟಿಕೆಯನ್ನು ಬಾಲಕ ತಿಂದುಬಿಟ್ಟಿದ್ದಾನೆ.

ಅದು ಗಂಟಲಲ್ಲಿ ಸಿಲುಕಿಕೊಂಡು ನಿರೀಕ್ಷಣ ಕುಮಾರ ಒದ್ದಾಡಲು ಆರಂಭಿಸಿದ್ದಾನೆ. ಕೂಡಲೆ ಆತನನ್ನು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಆಸ್ಪತ್ರೆ ತಲುಪುವಷ್ಟರಲ್ಲಿ ಆತ ಅಸುನೀಗಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ಲಕ್ಷ್ಮಣ ರಾವ್ ಅವರು ನೀಡಿರುವ ದೂರಿನ ಆಧಾರದ ಮೇಲೆ ವೆಸ್ಟ್ ಗೋದಾವರಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಅಂಗಡಿ ಮಾಲಿಕ ಮತ್ತು ಆ ತಿನಿಸಿನ ಕಂಪನಿಯ ಮೇಲೆ ದೂರನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಇಲಿ ಪಾಶಾಣವಿದ್ದ ಕುರ್ಕುರೆಯನ್ನು ಆಶಾ ಕಾರ್ಯಕರ್ತೆಯೊಬ್ಬಳು ತಿನ್ನಿಸಿದ್ದರಿಂದ ಅಂಗನವಾಡಿಯಲ್ಲಿ ಓದುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ಸಾವಿಗೀಡಾಗಿದ್ದ. ಈಗ ಮತ್ತೊಂದು ದುರ್ಘಟನೆ ಸಂಭವಿಸಿದೆ.
ಕುರ್ಕುರೆ, ಲೇಸ್, ಜೆಮ್ಸ್ ಮುಂತಾದ ಖಾದ್ಯ ಪಾಕೀಟುಗಳಲ್ಲಿ ಸಿಗುವ ರಬ್ಬರ್ ಆಟಿಕೆಗಳೇ ಮಕ್ಕಳಿಗೆ ಪ್ರಮುಖ ಆಕರ್ಷಣೆ. ಇವು ಏನೂ ಅರಿಯದ ಪುಟ್ಟ ಮಕ್ಕಳಿಗೆ ಸಿಕ್ಕು ಅನಾಹುತವಾಗುವ ಸಂಭವವೇ ಹೆಚ್ಚಿರುತ್ತದೆ. ಇಂಥವುಗಳನ್ನು ಮಕ್ಕಳಿಗೆ ಸಿಗದಂತೆ ಎಚ್ಚರವಹಿಸಬೇಕಾಗಿರುವುದು ಪೋಷಕರ ಜವಾಬ್ದಾರಿ ಕೂಡ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications