ಬ್ಯಾಂಕ್ ಮೆಸೇಜ್ ಎಂದು ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ಹಣ ಕಳೆದುಕೊಂಡ ಗ್ರಾಹಕರು!
ನಕಲಿ ಸಂದೇಶಗಳ ಮೂಲಕ ಕಳುಹಿಸಲಾದ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ಮೂರು ದಿನಗಳಲ್ಲಿ ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ
ಮುಂಬೈ, ಮಾರ್ಚ್ 05: ಮುಂಬೈನ ಖಾಸಗಿ ಬ್ಯಾಂಕ್ನ ಕನಿಷ್ಠ 40 ಗ್ರಾಹಕರು ತಮ್ಮ ಕೆವೈಸಿ ಮತ್ತು ಪ್ಯಾನ್ ವಿವರಗಳನ್ನು ಅಪ್ಡೇಟ್ ಮಾಡಲು ಹೋಗಿ ಲಕ್ಷಾಂತರ ರೂಪಾಯಿ ಹಣವನ್ನು ಬರೀ ಮೂರು ದಿನಗಳಲ್ಲಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ನಕಲಿ ಮೆಸೇಜ್ಗಳ ಮೂಲಕ ಕಳುಹಿಸಲಾದ ಲಿಂಕ್ಗಳನ್ನು ಕ್ಲಿಕ್ ಮಾಡಿ ವಂಚನೆಗೆ ಒಳಗಾಗಿದ್ದಾರೆ.
ನಕಲಿ ಸಂದೇಶಗಳ ಮೂಲಕ ಕಳುಹಿಸಲಾದ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ಮೂರು ದಿನಗಳಲ್ಲಿ ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಬ್ಯಾಂಕ್ ಗ್ರಾಹಕರು ತಮ್ಮ ಗುರುತನ್ನು ಪರಿಶೀಲಿಸಲು ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (ಕೆವೈಸಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಗ್ರಾಹಕರ ಗೌಪ್ಯ ವಿವರಗಳನ್ನು ಕೇಳುವ ಇಂತಹ ಲಿಂಕ್ಗಳನ್ನು ಕ್ಲಿಕ್ ಮಾಡದಂತೆ ಮುಂಬೈ ಪೊಲೀಸರು ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ವಂಚಕರು ತಮ್ಮ ಕೆವೈಸಿ ಮತ್ತು ಪ್ಯಾನ್ ಕಾರ್ಡ್ ವಿವರಗಳನ್ನು ಅಪ್ಡೇಟ್ ಮಾಡದಿದ್ದಕ್ಕಾಗಿ ತಮ್ಮ ಬ್ಯಾಂಕ್ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿ ಮೆಸೇಜ್ಗಳನ್ನು ಕಳುಹಿಸಿ ಗ್ರಾಹಕರನ್ನು ಆತಂಕಕ್ಕೆ ತಳ್ಳಿದ್ದಾರೆ. ಬಳಿಕ ನಕಲಿ ಮೆಸೇಜ್ಗಳ ಮೂಲಕ ಕಳುಹಿಸಲಾದ ಲಿಂಕ್ಗಳನ್ನು ಕಳುಹಿಸಿದ್ದಾರೆ. ಗ್ರಾಹಕರು ಅದನ್ನು ಕ್ಲಿಕ್ ಮಾಡಿದ ಕಾರಣ ಹಣ ಕಳೆದುಕೊಂಡಿದ್ದಾರೆ.
ಈ ನಕಲಿ ಲಿಂಕ್ಗಳು ಗ್ರಾಹಕರನ್ನು ತಮ್ಮ ಬ್ಯಾಂಕ್ನ ನಕಲಿ ವೆಬ್ಸೈಟ್ಗೆ ಪ್ರವೇಶ ನೀಡುತ್ತದೆ. ಅಲ್ಲಿ ಅವರ ಗ್ರಾಹಕ ಐಡಿ, ಪಾಸ್ವರ್ಡ್ ಮತ್ತು ಇತರ ಗೌಪ್ಯ ವಿವರಗಳನ್ನು ನಮೂದಿಸಲು ಕೇಳಲಾಗುತ್ತದೆ. ಇಂತಹ ವಂಚನೆಗೆ ಒಳಗಾದ 40 ಸಂತ್ರಸ್ತರಲ್ಲಿ ಕಿರುತೆರೆ ನಟಿ ಶ್ವೇತಾ ಮೆಮನ್ ಕೂಡ ಸೇರಿದ್ದಾರೆ. ಈ ಬಗ್ಗೆ ಅವರು ದೂರು ದಾಖಲಿಸಿದ್ದಾರೆ.
ತನ್ನ ದೂರಿನಲ್ಲಿ, ಕಿರುತೆರೆ ನಟಿ ಶ್ವೇತಾ ಮೆಮನ್ ಅವರು ಕಳೆದ ಗುರುವಾರ ತನ್ನ ಬ್ಯಾಂಕ್ನಿಂದ ಬಂದಿದೆ ಎಂದು ನಂಬಿ ನಕಲಿ ಸಂದೇಶದ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ. ತೆರೆದ ಪೋರ್ಟಲ್ನಲ್ಲಿ, ತನ್ನ ಗ್ರಾಹಕ ಐಡಿ, ಪಾಸ್ವರ್ಡ್ಗಳು ಮತ್ತು ಒಟಿಪಿ ಅನ್ನು ನಮೂದಿಸಿದ್ದಾರೆ. ಬಳಿಕ ಬ್ಯಾಂಕ್ ಅಧಿಕಾರಿಯಂತೆ ನಟಿಸುತ್ತಿದ್ದ ಮಹಿಳೆಯೊಬ್ಬರಿಂದ ತನಗೆ ಫೋನ್ ಕರೆ ಬಂದಿತ್ತು, ಆಕೆ ತನ್ನ ಮೊಬೈಲ್ಗೆ ಬಂದಿದ್ದ ಮತ್ತೊಂದು ಒಟಿಪಿ ಹಾಕಲು ಹೇಳಿದ್ದರು. ಅದನ್ನು ನಮೂದಿಸಿದ ಬೆನ್ನಲ್ಲೆ ತನ್ನ ಅಕೌಂಟ್ನಿಂದ 57,636 ರೂಪಾಯಿ ಕಟ್ ಆಗಿದೆ ಎಂದು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications