'ಜೋ ಬೋಲೆ ಸೋ ನಿಹಾಲ್' ಎಂದ 40 ಕ್ರೈಸ್ತ ಕುಟುಂಬಗಳು
ಅಮೃತಸರ, ಜ. 2: ಎನ್ಡಿಎ ಅಂಗಪಕ್ಷವಾಗಿರುವ ಶಿರೋಮಣಿ ಅಕಾಲಿ ದಳ ಆಡಳಿತದಲ್ಲಿರುವ ಪಂಜಾಬ್ನಲ್ಲಿ ಆರ್ಎಸ್ಎಸ್ ಘರ್ ವಾಪಸಿ (ಮರುಮತಾಂತರ) ಮುಂದುವರಿಸಿದೆ.
ಅಮೃತಸರದ ಗುರು-ಕಿ-ವಡಾಯಿಯಲ್ಲಿರುವ ಜೀವನ್ ಸಿಂಗ್ ಗುರುದ್ವಾರಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 40 ಕ್ರೈಸ್ತ ಕುಟುಂಬಗಳನ್ನು ಪುನಃ ಸಿಖ್ ಧರ್ಮಕ್ಕೆ ಮತಾಂತರಿಸಿದೆ. ಮತಾಂತರ ಪ್ರಕ್ರಿಯೆ ಮುಗಿದ ನಂತರ ಆರ್ಎಸ್ಎಸ್ ಕಾರ್ಯಕರ್ತನೋರ್ವ 'ಜೋ ಬೋಲೆ ಸೋ ನಿಹಾಲ್' ಎಂದು ಕೂಗಿದಾಗ ಮತಾಂತರ ಹೊಂದಿದ ಕುಟುಂಬಗಳು ದನಿಗೂಡಿಸಿದವು.
ಮರುಮತಾಂತರವನ್ನು ಸಮರ್ಥಿಸಿಕೊಂಡಿರುವ ಆರ್ಎಸ್ಎಸ್ ಸಮನ್ವಯ ಸಮಿತಿಯ ಪಂಜಾಬ್ ಮುಖ್ಯಸ್ಥ ದಿನೇಶ್, "ಪಂಜಾಬ್ನಲ್ಲಿರುವ ಒಂದೂ ಗುರುದ್ವಾರ ಮುಚ್ಚಲು ಬಿಡುವುದಿಲ್ಲ" ಎಂದು ಹೇಳಿದ್ದಾರೆ. [ಮದುವೆಗಾಗಿ ಇಸ್ಲಾಂಗೆ ಮತಾಂತರ ತಪ್ಪು]

ಪಂಜಾಬ್ ಗಡಿಯಲ್ಲಿ ಹೆಚ್ಚಾಗಿ ಕಂಡುಬರುವ ಮಝಾಬಿ ಸಿಖ್ಖರಲ್ಲಿ ಶೇ. 40ರಷ್ಟು ಜನರು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ. ಮಝಾಬಿ ಸಿಖ್ಖರಿಗೆ ಪಂಜಾಬ್ನಲ್ಲಿ ಪರಿಶಿಷ್ಟ ಜಾತಿ ಸ್ಥಾನವಿದೆ. [ಮತಾಂತರ ಏಕೆ? ಕಾನೂನು ಏನು ಹೇಳುತ್ತದೆ?]
ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಹಾಗೂ ಅವರ ಮಗ ಮತ್ತು ಉಪಮುಖ್ಯಮಂತ್ರಿಯೂ ಆಗಿರುವ ಸುಖಬೀರ್ ಸಿಂಗ್ ಬಾದಲ್ ಇಬ್ಬರೂ ಬಲವಂತದ ಮತಾಂತರವನ್ನು ಟೀಕಿಸಿದ ಮರುದಿನವೇ ಈ ಮರುಮತಾಂತರ ನಡೆದಿರುವುದು ವಿಶೇಷ. [ದಿಲ್ಶನ್ ಬಳಿ ಮತಾಂತರ ಬಗ್ಗೆ ಶೆಹ್ಜಾದ್ ಹೇಳಿದ್ದೇನು?]
ಕೆಲವು ದಿನಗಳ ಹಿಂದಷ್ಟೇ ಪಂಜಾಬ್ನಲ್ಲಿ ಧರ್ಮ ಜಾಗರಣ ಮಂಚ್ ನೇತೃತ್ವದಲ್ಲಿ 128 ಕ್ರೈಸ್ತ ಕುಟುಂಬಗಳು ಸಿಖ್ ಧರ್ಮಕ್ಕೆ ಮರು ಮತಾಂತರವಾಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications