400 ಲೀಟರ್ ಹಾಲು, ₹5 ಲಕ್ಷ ನಾಣ್ಯಗಳಿಂದ ಅಭ್ಯರ್ಥಿಗೆ ಅಭಿಷೇಕ, ವಿಡಿಯೋ ವೈರಲ್
ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ದೇವರ ಮೂರ್ತಿಗೆ ಕ್ಷೀರಾಭಿಷೇಕ ಮಾಡಲಾಗುತ್ತೆ. ಇನ್ನು ಕೆಲ ಅಂದಾಭಿಮಾನಿಗಳು ತಮ್ಮ ನೆಚ್ಚಿನ ನಟರ ಕಟೌಟ್ಗಳಿಗೆ ಹಾಲಿನಿಂದ ಅಭಿಷೇಕ ಮಾಡುವುದನ್ನು ನೋಡಿರುತ್ತೀರಿ. ಈಗ ಇದೇ ಪ್ರವೃತ್ತಿ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟಿದೆ. ಚುನಾವಣೆಗೆ ನಿಂತಿರುವ ಅಭ್ಯರ್ಥಿಯೊಬ್ಬರಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 400 ಲೀಟರ್ ಹಾಲಿನಿಂದ ಅಭಿಷೇಕ ಮಾಡಲಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಬಿಹಾರ ವಿಧಾನಸಭೆ ಚುನಾವಣಾ ರಂಗೇರಿದ್ದು, ಭೋಜ್ಪುರಿ ಗಾಯಕ ಮತ್ತು ಚಲನಚಿತ್ರ ನಟ ಖೇಸರಿ ಲಾಲ್ ಯಾದವ್ ಆರ್ಜೆಡಿ ಅಭ್ಯರ್ಥಿಯಾಗಿ ಕಣಲಿದ್ದಾರೆ. ಛಪ್ರಾ (ಸರನ್) ಕ್ಷೇತ್ರದ ಆರ್ಜೆಡಿ ಅಭ್ಯರ್ಥಿ ಖೇಸರಿ ಲಾಲ್ ಯಾದವ್ ಶುಕ್ರವಾರ ಪ್ರಚಾರಕ್ಕೆ ಹೋದಾಗ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಆದರೆ ಇದು ಹೂಮಾಲೆ ಅಥವಾ ಹೂಗುಚ್ಛಗಳೊಂದಿಗೆ ಅಲ್ಲ. ಬದಲಾಗಿ ಹಲವಾರು ಬಕೆಟ್ ಹಾಲಿನೊಂದಿಗೆ ಸ್ನಾನ ಮಾಡಿಸಿದ್ದಾರೆ.

5 ಲಕ್ಷ ನಾಣ್ಯಗಳಿಂದ ತುಲಾಭಾರ
ಈ ವೈರಲ್ ಆಗಿರುವ ವಿಡಿಯೋದಲ್ಲಿ, ಆರ್ಜೆಡಿ ಅಭ್ಯರ್ಥಿ ಖೇಸರಿ ಲಾಲ್ ಯಾದವ್ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಸುಮಾರು 12 ಬಕೆಟ್ಗಳನ್ನು ಹಾಕಬಹುದಾದ ದೊಡ್ಡ ಪಾತ್ರೆಯಿಂದ ಅವರ ಮೇಲೆ ಹಾಲು ಸುರಿಯುತ್ತಿರುವುದನ್ನು ಕಾಣಬಹುದು. ಕೇವಲ ಹಾಲು ಮಾತ್ರವಲ್ಲ, ನಂತರ ಅವರನ್ನು ಬರೋಬ್ಬರಿ 5 ಲಕ್ಷ ರೂಪಾಯಿಯಷ್ಟು ಮೌಲ್ಯದ ನಾಣ್ಯಗಳಿಂದ ತುಲಾಭಾರ ಮಾಡಲಾಗಿದೆ.
ಬಿಹಾರದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಿಂಚುತ್ತಿರುವ ಭೋಜ್ಪುರಿ ನಟ ಖೇಸರೀ ಲಾಲ್ ಯಾದವ್ನ ಹೆಸರು ತೀವ್ರವಾಗಿ ಚರ್ಚೆಯಲ್ಲಿದೆ. ರಾಷ್ಟ್ರೀಯ ಜನತಾ ದಳದಿಂದ (ಆರ್ಜೆಡಿ) ಛಪರ ಕ್ಷೇತ್ರದಿಂದ ಅವರು ಸ್ಪರ್ಧಿಸುತ್ತಿದ್ದಾರೆ. ಬಿಳಿ ಕುರ್ತಾ ಮತ್ತು ಹಸಿರು ಬಣ್ಣದ ವಸ್ತ್ರದಲ್ಲಿದ್ದರು. ಈ ವೇಳೆ ಅವರ ಬೆಂಬಲಿಗರು ಹರ್ಷೋದ್ಗಾರ ಮಾಡಿ ಜೈಕಾರ ಹಾಕಿದರು. ಖೇಸರಿ ಅವರ ಮೇಲೆ ಸುಮಾರು 400 ಲೀಟರ್ ಹಾಲು ಸುರಿಯಲಾಗಿದೆ ಎಂದು ವರದಿಯಾಗಿದೆ.

ಖೇಸರಿ ನಮ್ಮ ಸಹೋದರ. ನಾವು ಅವರಿಗೆ ಹಾಲಿನ ಸ್ನಾನ ಮಾಡಿದ ರೀತಿಯಲ್ಲಿಯೇ, ಅವರು ಛಪ್ರಾ ಜನರಿಗೆ ಸಹ ಮಾಡುತ್ತಾರೆ ಎಂದು ನಮಗೆ ತಿಳಿದಿದೆ. ಅವರು ಅಧಿಕಾರಕ್ಕೆ ಬಂದರೆ ನಾವು ಅಭಿವೃದ್ಧಿ ಹೊಂದುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರು ಜನರ ಪ್ರೀತಿ ಮತ್ತು ಭಾವನೆ ಎಂದು ಆರ್ಜೆಡಿ ರಾಜ್ಯ ವಕ್ತಾರ ಚಿತ್ರಂಜನ್ ಗಗನ್ ಹೇಳಿದ್ದಾರೆ. ಕೆಲವರು ಇಂತಹ ಉತ್ತಮ ಹಾಲನ್ನು ಹಾಳು ಮಾಡಬಾರದಿತ್ತು ಎಂದು ಟೀಕೆಗಳು ಕೇಳಿಬಂದಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಅವರು, ಈ ಹಾಲನ್ನು ಮಾರುಕಟ್ಟೆಯಿಂದ ಖರೀದಿಸಿಲ್ಲ. ಬದಲಾಗಿ, ರೈತರು ಅದನ್ನು ತಾವೇ ಸಂಗ್ರಹಿಸಿ ಅಭಿಷೇಕ ಮಾಡಿದ್ದಾರೆ ಎಂದು ಹೇಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications