ಲೇಹ್ ನಲ್ಲಿನ ನಾಲ್ಕು ಸಾವಿರ ಯೋಧರಿಗೆ ಮೊದಲ ದಿನ ಲಸಿಕೆ
ನವದೆಹಲಿ, ಜನವರಿ 16: ಭಾರತದಲ್ಲಿ ಶನಿವಾರ ಬೃಹತ್ ಲಸಿಕಾ ಅಭಿಯಾನ ಆರಂಭಗೊಳ್ಳುತ್ತಿದ್ದು, ಲಡಾಖ್ ಲೇಹ್ ನಲ್ಲಿ ಸುಮಾರು ನಾಲ್ಕು ಸಾವಿರ ಯೋಧರು ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಪಡೆಯಲಿದ್ದಾರೆ.
ಉತ್ತರ ಗಡಿಯಲ್ಲಿ ನಿಯೋಜಿಸಲಾಗಿರುವ ಯೋಧರಿಗೆ ಆದ್ಯತೆಯಲ್ಲಿ ಕೊರೊನಾ ಲಸಿಕೆ ನೀಡುವ ಉದ್ದೇಶವಿದ್ದು, ಲಡಾಖ್ ವಲಯದಲ್ಲಿ ಮೊದಲು ಲಸಿಕೆಗಳನ್ನು ನೀಡಲಾಗುತ್ತದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಮೊದಲ ಹಂತದ ಲಸಿಕೆಗಳನ್ನು ಲೇಹ್ ನಲ್ಲಿ ನಿಯೋಜಿಸಲಾಗಿರುವ ಸುಮಾರು ನಾಲ್ಕು ಸಾವಿರ ಸೈನಿಕರಿಗೆ ಲಸಿಕೆಗಳನ್ನು ನೀಡಲಾಗುತ್ತಿದೆ. ಲಡಾಖ್ ನಲ್ಲಿ ನಿಗದಿತವಾಗಿ ಲಸಿಕೆ ನೀಡಲಾಗುತ್ತಿದೆ. ಮೊದಲು ಆರೋಗ್ಯ ಕಾರ್ಯಕರ್ತರಿಗೆ ಅವಶ್ಯಕವಿದ್ದಷ್ಟು ಲಸಿಕೆಗಳು ಲಭ್ಯವಿಲ್ಲದ ಕಾರಣ ಲಸಿಕೆಗಳ ಉತ್ಪಾದನೆ ಹೆಚ್ಚಾದ ನಂತರ ಲಡಾಖ್ ನಲ್ಲಿರುವ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಮೇ ತಿಂಗಳಿನಿಂದಲೂ ಚೀನಾ ಭಾರತ ಗಡಿ ವಿವಾದದಿಂದಾಗಿ ಹೆಚ್ಚಿನ ಸೈನ್ಯವನ್ನು ಗಡಿಯಲ್ಲಿ ನಿಯೋಜಿಸಲಾಗಿದೆ. ಆದರೆ ಲಡಾಖ್ ನಲ್ಲಿ ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಮೊದಲು ಯೋಧರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ.
ಕಳೆದ ವರ್ಷ ಸೆಪ್ಟೆಂಬರ್ ವೇಳೆಗೆ ಸುಮಾರು ಇಪ್ಪತ್ತು ಸಾವಿರ ಮಿಲಿಟರಿ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದರು. ಕೊರೊನಾ ಸೋಂಕಿನಿಂದ ಇದುವರೆಗೂ 32 ಸೈನಿಕರು ಸಾವನ್ನಪ್ಪಿದ್ದಾರೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications