ಭಾರತದಲ್ಲಿ ಇಂದು 44,878 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ನವೆಂಬರ್ 13: ಭಾರತದಲ್ಲಿ ಇಂದು 44,878 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 87 ಲಕ್ಷಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 547 ಮಂದಿ ಸಾವ್ನನಪ್ಪಿದ್ದಾರೆ. ಒಟ್ಟು 87,28,795 ಪ್ರಕರಣಗಳಿವೆ. 4,84,547 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಆಸ್ಪತ್ರೆಯಿಂದ 81,15,580 ಮಂದಿ ಬಿಡುಗಡೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 49,079 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 1,28,688 ಮಂದಿ ಮೃತಪಟ್ಟಿದ್ದಾರೆ.
ನವೆಂಬರ್ 12ರವರೆಗೆ 12,31,01,739 ಮಾದರಿಗಳನ್ನು ಪರೀಕ್ಷಿಸಲಾಗಿದೆ. ನವೆಂಬರ್ 12ರಂದು 11,39,230 ಮಾದರಿಗಳನ್ನು ಪರೀಕ್ಷಿಸಲಾಯಿತು. ಗುರುವಾರದ ಕೊರೊನಾ ಸೋಂಕಿತ ಪ್ರಕರಣಗಳ ಮಾಹಿತಿ: ಭಾರತದಲ್ಲಿ ಗುರುವಾರ 47,905 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಇಲ್ಲಿಯವರೆಗೆ ದೇಶದಲ್ಲಿ 86,83,917 ಕೊರೊನಾ ಸೋಂಕಿತರಿದ್ದರು. 24 ಗಂಟೆಯಲ್ಲಿ 550 ಮಂದಿ ಮೃತಪಟ್ಟಿದ್ದರು, ಒಟ್ಟು 1,28,121 ಮಂದಿ ಸಾವನ್ನಪ್ಪಿದ್ದರು.

ಜಗತ್ತಿನ ಗಮನ ಸೆಳೆದಿರುವ ರಷ್ಯಾದ ಸ್ಪುಟ್ನಿಕ್ V ಕೊರೊನಾ ವೈರಸ್ ಲಸಿಕೆ ಭಾರತಕ್ಕೆ ಬಂದಿದೆ. ಹೈದರಾಬಾದ್ ಮೂಲದ ಔಷಧೀಯ ಕಂಪೆನಿ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಭಾರತದಲ್ಲಿ 2/3 ಹಂತದ ಮಾನವ ಪ್ರಯೋಗಗಳನ್ನು ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸ್ಪುಟ್ನಿಕ್ ಲಸಿಕೆಗಳು ಭಾರತಕ್ಕೆ ಸರಬರಾಜಾಗಿವೆ.
ಡಾ. ರೆಡ್ಡೀಸ್ ಮತ್ತು ಸ್ಪುಟ್ನಿಕ್ V ಚಿಹ್ನೆಗಳನ್ನು ಒಳಗೊಂಡ ಸಣ್ಣ ಕಂಟೇನರ್ಗಳನ್ನು ವಾಹನವೊಂದರಿಂದ ಇಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸಂಪರ್ಕಿಸಿದಾಗ ಡಾ. ರೆಡ್ಡೀಸ್ನ ಹಿರಿಯ ಅಧಿಕಾರಿಯೊಬ್ಬರು ಸ್ಪುಟ್ನಿಕ್ ಲಸಿಕೆಗಳು ಭಾರತಕ್ಕೆ ಬಂದಿರುವುದನ್ನು ಖಚಿತಪಡಿಸಿದರು. ಹಾಗೆಯೇ ಭಾರತದಲ್ಲಿ ಶೀಘ್ರದಲ್ಲಿಯೇ ಕ್ಲಿನಿಕಲ್ ಪ್ರಯೋಗಗಳನ್ನು ಆರಂಭಿಸುವುದಾಗಿ ತಿಳಿಸಿದರು ಎಂದು 'ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ವರದಿ ಮಾಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications