ಜುಲೈ 9ರ ತನಕ 4,615 ಶ್ರಮಿಕ್ ರೈಲುಗಳ ಸಂಚಾರ
ನವದೆಹಲಿ, ಜುಲೈ 24 : ಭಾರತೀಯ ರೈಲ್ವೆ ಇದುವರೆಗೂ 4,615 ಶ್ರಮಿಕ್ ರೈಲುಗಳನ್ನು ಓಡಿಸಿದೆ. ಲಾಕ್ ಡೌನ್ ಸಮಯದಲ್ಲಿ ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ಮರಳಲು ಶ್ರಮಿಕ್ ರೈಲುಗಳ ಸಂಚಾರವನ್ನು ಮೇ ತಿಂಗಳಿನಲ್ಲಿ ಆರಂಭಿಸಲಾಗಿತ್ತು.
ರೈಲ್ವೆ ಬೋರ್ಡ್ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಜುಲೈ 9ರ ತನಕ 4,615 ಶ್ರಮಿಕ್ ರೈಲುಗಳನ್ನು ಓಡಿಸಲಾಗಿದೆ. 63 ಲಕ್ಷ ಜನರು ರೈಲಿನಲ್ಲಿ ಪ್ರಯಾಣಿಸಿದ್ದಾರೆ" ಎಂದರು.
ಭಾರತೀಯ ರೈಲ್ವೆ ಜುಲೈ 9ರಂದು ಕೊನೆಯ ಶ್ರಮಿಕ್ ರೈಲನ್ನು ಓಡಿಸಿದೆ. ಯಾವುದಾದರೂ ರಾಜ್ಯ ಬೇಡಿಕೆ ಸಲ್ಲಿಸಿದರೆ ಈಗಲೂ ಸಹ ರೈಲನ್ನು ಓಡಿಸಲು ಇಲಾಖೆ ಸಿದ್ಧವಿದೆ. ಆದರೆ, ಇದುವರೆಗೂ ಯಾವುದೇ ರಾಜ್ಯ ಬೇಡಿಕೆ ಸಲ್ಲಿಸಿಲ್ಲ.

"ಜುಲೈ 9ರ ಬಳಿಕ ಯಾವುದೇ ರಾಜ್ಯ ಶ್ರಮಿಕ್ ರೈಲಿಗಾಗಿ ಬೇಡಿಕೆ ಸಲ್ಲಿಸಿಲ್ಲ. ಆದ್ದರಿಂದ, ರಾಜ್ಯಗಳ ಬೇಡಿಕೆ ಪೂರ್ಣಗೊಂಡಿದೆ ಎಂದು ನಾವು ಭಾವಿಸಿದ್ದೇವೆ" ಎಂದು ವಿನೋದ್ ಕುಮಾರ್ ಯಾದವ್ ಹೇಳಿದ್ದಾರೆ.
ಮೇ 1ರಂದು ಭಾರತೀಯ ರೈಲ್ವೆ ಶ್ರಮಿಕ್ ರೈಲುಗಳ ಸಂಚಾರವನ್ನು ಆರಂಭಿಸಿತು. ಜುಲೈ 9ರ ತನಕ 4,615 ರೈಲುಗಳನ್ನು ಓಡಿಸಲಾಗಿದೆ. ಕೇಂದ್ರ ಸರ್ಕಾರ ಈ ರೈಲುಗಳ ವೆಚ್ಚದ ಶೇ 85ರಷ್ಟನ್ನು ನೀಡಿದೆ. ಉಳಿದ ಭಾಗವನ್ನು ರಾಜ್ಯ ಸರ್ಕಾರಗಳು ನೀಡಿವೆ.
ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಮಾರ್ಚ್ನಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಯಿತು. ಆಗ ವಲಸೆ ಕಾರ್ಮಿಕರು ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿದರು. ಅವರು ತವರು ರಾಜ್ಯಕ್ಕ ವಾಪಸ್ ಆಗಲು ಸಹಾಯಕವಾಗುವಂತೆ ಶ್ರಮಿಕ್ ರೈಲುಗಳನ್ನು ಓಡಿಸಲಾಯಿತು.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications