48 ವರ್ಷದ ವಿಪ್ಲವ್ ದೇವ್ ಗೆ ಒಲಿಯುತ್ತಾ ತ್ರಿಪುರಾ ಸಿಎಂ ಪಟ್ಟ?
ಅಗರ್ತಲಾ, ಮೇ 3: ತ್ರಿಪುರಾದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ. ಎಲ್ಲರ ನಿರೀಕ್ಷೆ, ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಬರೋಬ್ಬರಿ 60 ರಲ್ಲಿ 41 ಸ್ಥಾನಗಳನ್ನು ಕೇಸರಿ ಪಕ್ಷ ತನ್ನ ಮಿತ್ರ ಪಕ್ಷಗಳೊಂದಿಗೆ ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಈ ಗೆಲುವಿನೊಂದಿಗೆ ಮುಂದಿನ ತ್ರಿಪುರಾ ಸಿಎಂ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.
ತ್ರಿಪುರಾದ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ವಿಪ್ಲವ್ ಕುಮಾರ್ ದೇವ್ ಮುಂಚೂಣಿಯಲ್ಲಿದ್ದಾರೆ. 48 ವರ್ಷದ ಬಿಪ್ಲಾಬ್ ಕುಮಾರ್ ದೇವ್ ತ್ರಿಪುರಾದಲ್ಲಿ ಕಮಲ ಪಕ್ಷ ಅರಳುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಪಕ್ಷದ ರಾಜ್ಯಾಧ್ಯಕ್ಷರಾಗಿದ್ದುಕೊಂಡು ಚಾಣಕ್ಯ ತಂತ್ರಗಳನ್ನು ಹೆಣೆದು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.
ಹಾಗೆ ನೋಡಿದರೆ ವಿಪ್ಲವ್ ಕುಮಾರ್ ದೇವ್ ಬಿಜೆಪಿಯ ರಾಜ್ಯಾಧ್ಯಕ್ಷರುಗಳಲ್ಲೇ ಅತ್ಯಂತ ತರುಣರು. ಅವರಿಗಿನ್ನೂ ಕೇವಲ 48 ವರ್ಷ.

ಒಂದು ಕಾಲದಲ್ಲಿ ದೆಹಲಿಯಲ್ಲಿ ಜಿಮ್ ಒಂದರಲ್ಲಿ ತರಬೇತುದಾರರಾಗಿದ್ದರು. ನಂತರ ಅವರು ಆರ್.ಎಸ್.ಎಸ್ ಸೇರಿದರು. ಮುಂದೆ ಬಿಜೆಪಿಗೆ ವರ್ಗಾವಣೆಯಾದ ವಿಪ್ಲವ್ ತ್ರಿಪುರಾ ಬಿಜೆಪಿಯ ಅಧ್ಯಕ್ಷರಾದರು.
ತ್ರಿಪುರಾ ಬಿಜೆಪಿ ಉಸ್ತುವಾರಿ ಸುನಿಲ್ ದಿಯೊಧಾರ್ ಮಾರ್ಗದರ್ಶನದಲ್ಲಿ ಬೆಳೆದ ವಿಪ್ಲವ್ ಅಪ್ರತಿಮ ಸಂಘಟಕರಾಗಿ ಬೆಳೆದರು. ಪರಿಣಾಮ ಇವತ್ತು ಕಣ್ಣ ಮುಂದಿದೆ. ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.

ಈ ಎಲ್ಲಾ ಕಾರಣಗಳಿಗಾಗಿ ವಿಪ್ಲವ್ ಕುಮಾರ್ ದೇವ್ ತ್ರಿಪುರಾದ ಮುಖ್ಯಮಂತ್ರಿಯಾದರೆ ಅಚ್ಚರಿಯಿಲ್ಲ. ಆದರೆ ಸಂಜೆ ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಸಂಸದೀಯ ಮಮಡಳಿ ಸಭೆಯಲ್ಲಿ ತ್ರಿಪುರಾದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ. ವಿಪ್ಲವ್ ಕುಮಾರ್ ದೇವ್ ತ್ರಿಪುರಾ ಮುಖ್ಯಮಂತ್ರಿಯಾಗುತ್ತಾರಾ ಎಂಬ ಪ್ರಶ್ನೆಗೆ ಉತ್ತರ ಸಿಗಲು ಸಂಜೆವರೆಗೆ ಕಾಯಲೇಬೇಕಾಗಿದೆ.
ನಾನೇನೂ ಹೇಳಲ್ಲ
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪ್ಲವ್ ದೇವ್, ನಾನು ಈ ಬಗ್ಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷ ಈ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ," ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications