ದೆಹಲಿ ಜಿಮ್ ನಿಂದ ತ್ರಿಪುರಾ ಸಿಎಂ ಕುರ್ಚಿವರೆಗೆ; ವಿಪ್ಲವ್ ವ್ಯಕ್ತಿಚಿತ್ರ
ಅಗರ್ತಲಾ, ಮಾರ್ಚ್ 6: ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ್ದ ತ್ರಿಪುರಾದಲ್ಲಿ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದ ವಿಪ್ಲವ್ ಕುಮಾರ್ ದೇವ್ ಗೆ ಸಿಎಂ ಪಟ್ಟ ಒಲಿದು ಬಂದಿದೆ.
48 ವರ್ಷದ ವಿಪ್ಲವ್ ಕುಮಾರ್ ದೇವ್ ತ್ರಿಪುರಾದ ನೂತನ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಘೋಷಿಸಿದ್ದಾರೆ.
ಈ ಮೂಲಕ ತ್ರಿಪುರಾದಲ್ಲಿ ಕಮಲ ಪಕ್ಷ ಅರಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಪ್ಲವ್ ಕುಮಾರ್ ದೇವ್ ಅರ್ಹವಾಗಿಯೇ ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ.

ಚಾಣಕ್ಯ ತಂತ್ರಗಾರನಿಗೆ ಪಟ್ಟ
ಪಕ್ಷದ ರಾಜ್ಯಾಧ್ಯಕ್ಷರಾಗಿದ್ದುಕೊಂಡು ಚಾಣಕ್ಯ ತಂತ್ರಗಳನ್ನು ವಿಪ್ಲವ್ ಹೆಣೆದಿದ್ದರು. ಪರಿಣಾಮ 25 ವರ್ಷಗಳ ಕಮ್ಯೂನಿಸ್ಟ್ ಪಕ್ಷದ ಕೆಂಪುಕೋಟೆಯನ್ನು ಛಿದ್ರಗೊಳಿಸಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು.

ಅತ್ಯಂತ ತರುಣ ಅಧ್ಯಕ್ಷ
ಹಾಗೆ ನೋಡಿದರೆ ವಿಪ್ಲವ್ ಕುಮಾರ್ ದೇವ್ ಬಿಜೆಪಿಯ ರಾಜ್ಯಾಧ್ಯಕ್ಷರುಗಳಲ್ಲೇ ಅತ್ಯಂತ ತರುಣರು. ಅವರಿಗಿನ್ನೂ ಕೇವಲ 48 ವರ್ಷ.

ಜಿಮ್ ನಿಂದ ಮುಖ್ಯಮಂತ್ರಿ ಗಾದಿಗೆ
ಒಂದು ಕಾಲದಲ್ಲಿ ದೆಹಲಿಯಲ್ಲಿ ಜಿಮ್ ಒಂದರಲ್ಲಿ ತರಬೇತುದಾರರಾಗಿದ್ದರು ವಿಪ್ಲವ್ ಕುಮಾರ್ ದೇವ್. ನಂತರ ಅವರು ಆರ್.ಎಸ್.ಎಸ್ ಸೇರಿದರು. ಮುಂದೆ ಬಿಜೆಪಿಗೆ ವರ್ಗಾವಣೆಯಾದ ವಿಪ್ಲವ್ ತ್ರಿಪುರಾ ಬಿಜೆಪಿಯ ಅಧ್ಯಕ್ಷರಾದರು.

ಹಿರಿಯರ ಮಾರ್ಗದರ್ಶನದಲ್ಲಿ ಬೆಳೆದ ವಿಪ್ಲವ್
ತ್ರಿಪುರಾ ಬಿಜೆಪಿ ಉಸ್ತುವಾರಿ ಸುನಿಲ್ ದಿಯೊಧಾರ್ ಮಾರ್ಗದರ್ಶನದಲ್ಲಿ ಬೆಳೆದ ವಿಪ್ಲವ್ ಅಪ್ರತಿಮ ಸಂಘಟಕರಾಗಿ ಬೆಳೆದರು. ಪರಿಣಾಮ ಇವತ್ತು ಕಣ್ಣ ಮುಂದಿದೆ. ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಮಾತ್ರವಲ್ಲ ವಿಪ್ಲವ್ ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದಾರೆ.

ಭರ್ಜರಿ ಜಯಗಳಿಸಿದ್ದ ಪಕ್ಷ
ವಿಪ್ಲವ್ ತಂತ್ರಗಳ ಪರಿಣಾಮ ಶನಿವಾರ ತ್ರಿಪುರಾ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. ಚುನಾವಣೆ ನಡೆದ 59 ಕ್ಷೇತ್ರಗಳಲ್ಲಿಲಿ ಕೇಸರಿ ಮೈತ್ರಿಕೂಟ 41 ಸ್ಥಾನಗಳನ್ನು ಪಡೆದು ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಅಧಿಕಾರಕ್ಕೇರಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications