Congress MPs Suspended: ಐದು ಕಾಂಗ್ರೆಸ್ ಸಂಸದರ ಅಮಾನತು, ಆಗಿದ್ದೇನು?
ನವದೆಹಲಿ, ಡಿಸೆಂಬರ್ 14: ರಾಷ್ಟ್ರ ರಾಜಧಾನಿಯ ನೂತನ ಸಂಸತ್ ಭವನದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿ ಹತ್ತು ದಿನ ಕಳೆದಿದೆ. ಸದನದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ಐವರು ಕಾಂಗ್ರೆಸ್ ಸದಸ್ಯರನ್ನು ಲೋಕಸಭೆಯಿಂದ ಗುರುವಾರ ಅಮಾನತುಗೊಳಿಸಲಾಗಿದೆ.
ಹೌದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರು ಲೋಕಸಭೆಯಲ್ಲಿ ಈ ಐದು ಜನರ ಅಮಾನತಿಗೆ ಪ್ರಸ್ತಾವನೆಯನ್ನು ಮಂಡಿಸಿದರು. ಬುಧವಾರ ನಡೆದ ನಡೆದ ಭದ್ರತಾ ಲೋಪದ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ಗೆ ಜಿಗಿದ ಘಟನೆ ಕುರಿತು ಸದನಕ್ಕೆ ತಿಳಿಸಿದ ಬಳಿಕ ಜೋಶಿಯವರು ಅಮಾನತಿನ ಪ್ರಸ್ತಾಪ ಸದನದ ಮುಂದಿಟ್ಟರು.

ಚಳಿಗಾಲ ಅಧಿವೇಶನ ಇದೇ ಡಿಸೆಂಬರ್ 4ರಿಂದ ಆರಂಭವಾಗಿದ್ದು, ಮುಂದಿನ ಡಿಸೆಂಬರ್ 22 ರವರೆಗೆ ನಡೆಯಲಿದೆ. ಸದ್ಯ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ (ಡಿ.22ರವರೆಗೆ) ಕಾಂಗ್ರೆಸ್ ಸಂಸದರಾದ ಟಿ.ಎನ್ ಪ್ರತಾಪನ್, ರಮ್ಯಾ ಹರಿದಾಸ್ ಹೈಬಿ ಈಡನ್, ಎಸ್ ಜ್ಯೋತಿಮಣಿ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಅಮಾನತುಗೊಳಿಸುವಂತೆ ಮಂಡನೆ ಮೂಲಕ ಮನವಿ ಮಾಡಿದರು.
ವಿಪಕ್ಷಗಳ ಘೋಷಣೆ ಮಧ್ಯ ಪ್ರಸ್ತಾವ ಮಂಡಿಸಿದ ಜೋಶಿ
ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆಯೇ ಪ್ರಸ್ತಾವನೆಯನ್ನು ಮಂಡಿಸಿ ಅಂಗೀಕರಿಸಿದಾಗ ಬಿಜೆಡಿಯ ಭರ್ತೃಹರಿ ಮಹತಾಬ್ ಅವರು ಅಧ್ಯಕ್ಷರಾಗಿದ್ದರು. ಸದನದಲ್ಲಿ ಹಳದಿ ಸ್ಮೋಕ್ ಕ್ಯಾನ್ ಹಾಕಿ ಭಧ್ರತೆಗೆ ಧಕ್ಕೆ ತಂದ ಘಟನೆ ಬುಧವಾರ ನಡೆದಿತ್ತು. ಇದರ ಉನ್ನತ ಮಟ್ಟದ ತನಿಖೆ ಕುರಿತು ಸ್ಪೀಕರ್ ಓಂ ಬಿರ್ಲಾ ಅವರು ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇತ್ತ ಈ ಕುರಿತು ವಿವರಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಪ್ರಕರಣ ತನಿಖೆ ಆರಂಭಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಸಂದರ್ಶಕರ ಗ್ಯಾಲರಿಯಿಂದ ಪೇಪರ್ಗಳನ್ನು ಎಸೆದಿರುವುದು ಸೇರಿದಂತೆ ಹಲವು ಸಂದರ್ಭಗಳಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯ ನಿದರ್ಶನಗಳನ್ನು ಜೋಶಿ ತಮ್ಮ ಮಂಡನೆಯಲ್ಲಿ ಉಲ್ಲೇಖಿಸಿದ್ದಾರೆ. ಈ ಹಿಂದೆಯೂ ಇಂತಹ ಅಹಿತಕರ ಘಟನೆಗಳು ಸಂಭವಿಸಿವೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಪ್ರತಿಪಕ್ಷಗಳಿಗೆ ಜೋಶಿ ಕರೆ ನೀಡಿದರು ಎಂದು ಎಎನ್ಐ ವರದಿ ಮಾಡಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications