ತೆಲಂಗಾಣ ಉಪಚುನಾವಣೆ: 5 ಕೋಟಿ ಹಣ ವರ್ಗಾವಣೆ, ಬಿಜೆಪಿ ಅಭ್ಯರ್ಥಿಗೆ ನೋಟಿಸ್
ಹೈದರಾಬಾದ್, ಅ. 31: ತೆಲಂಗಾಣದ ಮುನುಗೋಡೆ ಕ್ಷೇತ್ರದ ಉಪಚುನಾವಣೆಗೆ ಮುನ್ನ ಹಲವು ಬ್ಯಾಂಕ್ ಖಾತೆಗಳಿಗೆ 5.24 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆದಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ಸೂಚಿಸಿದೆ.
ತೆಲಂಗಾಣದ ಮುನುಗೋಡೆ ಬಿಜೆಪಿ ಅಭ್ಯರ್ಥಿ ಕೆ.ರಾಜಗೋಪಾಲ್ ರೆಡ್ಡಿಗೆ ಭಾರತೀಯ ಚುನಾವಣಾ ಆಯೋಗ ವಿವರಣೆ ಕೇಳಿ ನೋಟಿಸ್ ನೀಡಿದೆ.
ಬಿಜೆಪಿ ಅಭ್ಯರ್ಥಿ ಕೆ.ರಾಜಗೋಪಾಲ್ ರೆಡ್ಡಿ ಅವರು ತಮ್ಮ ಕುಟುಂಬದ ಒಡೆತನದ ಗಣಿಗಾರಿಕೆ ಸಂಸ್ಥೆಯೊಂದರಿಂದ ಭಾರಿ ಮೊತ್ತವನ್ನು ಮುನುಗೋಡು ವಿಧಾನಸಭಾ ಕ್ಷೇತ್ರದ 23 ಜನರ ಬ್ಯಾಂಕ್ ಖಾತೆಗಳಿಗೆ ರವಾನಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನಾಯಕ ಸೋಮ ಭರತ್ ಕುಮಾರ್, ಕೆ.ರಾಜಗೋಪಾಲ್ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಮತದಾರರ ಪ್ರಚೋದನೆಗೆ ಹಣವನ್ನು ನಿಯೋಜಿಸಲಾಗಿದೆ ಎಂದು ಆರೋಪಿಸಿದ್ದಾರೆ.
"ನೀವು ಅಥವಾ ನಿಮ್ಮ ನಿರ್ದೇಶನದ ಮೇರೆಗೆ ಕುಟುಂಬದ ಮಾಲೀಕತ್ವದ ಕಂಪನಿಯು 23 ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾದ ಈ ನಿಧಿಯನ್ನು ಮತದಾರರ ಪ್ರಚೋದನೆಗೆ ಬಳಸಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವುದು ನಿಮ್ಮ ಕರ್ತವ್ಯವಾಗಿದೆ. ಇದು ಭ್ರಷ್ಟ ಪದ್ಧತಿಯಾಗಿದೆ" ಎಂದು ಚುನಾವಣಾ ಆಯೋಗವು ಬಿಜೆಪಿ ಅಭ್ಯರ್ಥಿಗೆ ನೋಟಿಸ್ನಲ್ಲಿ ತಿಳಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಳಿದೆ.
ಬಿಜೆಪಿ ಅಭ್ಯರ್ಥಿ ಕೆ.ರಾಜಗೋಪಾಲ್ ರೆಡ್ಡಿಗೆ ಉತ್ತರಿಸಲು ಸೋಮವಾರ ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ. ನವೆಂಬರ್ 3 ರಂದು ತೆಲಂಗಾಣದ ಮುನುಗೋಡೆ ಉಪಚುನಾವಣೆ ನಡೆಯಲಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪಕ್ಷವು ಮುನುಗೋಡೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಆರೋಪ ಮಾಡಿದ್ದು, ಬಿಜೆಪಿಯು ತಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
20 ರಿಂದ 30 ಶಾಸಕರನ್ನು ಖರೀದಿಸಲು ದೆಹಲಿಯ ದಲ್ಲಾಳಿಗಳು ಕೋಟ್ಯಂತರ ರೂಪಾಯಿ ನೀಡಿದ್ದಾರೆ ಎಂದು ಕೆಸಿಆರ್ ಆರೋಪಿಸಿದ್ದಾರೆ.
ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ, " ನಾನು ಒಂದು ವಿಷಯವನ್ನು ತಿಳಿಸುತ್ತಿದ್ದೇನೆ. ನಿಮ್ಮ ಸರ್ಕಾರವನ್ನು ಬೀಳಿಸುವ ಉದ್ದೇಶ ನಮಗಿಲ್ಲ. ನಿಮ್ಮದೇ ಸರ್ಕಾರವನ್ನು ಬೀಳಿಸುವ ಆಲೋಚನೆಯನ್ನು ನೀವು ಹೊಂದಿರಬಹುದು. ಚುನಾವಣೆಯಲ್ಲಿ ಅದನ್ನು ಅಜೆಂಡಾದಂತೆ ಬಳಸಿ ಅನುಕಂಪ ಗಳಿಸಬಹುದು. ಈಗಾಗಲೇ ನೀವು ಜನರಲ್ಲಿ ಗೌರವವನ್ನು ಕಳೆದುಕೊಂಡಿದ್ದೀರಿ" ಎಂದು ಕಿಡಿಕಾರಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications